Andolana originals

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಗಾಂಧಿ ಆತ್ಮಕತೆಯ ಆಯ್ದ ತುಣುಕು ; ಬಾಲ್ಯ ವಿವಾಹವೆಂಬ ನಾಚಿಕೆಗೇಡಿನ ಸಂಗತಿ

ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ.

ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ ನನ್ನ ವಿಷಯಾಸಕ್ತಿಯೂ ಭೋಗಲಾಲಸೆಯೂ ಕಡಿಮೆಯಾಗಿರಲಿಲ್ಲ. ಶ್ರದ್ಧಾಪೂರ್ವಕವಾಗಿ ನನ್ನ ಎಲ್ಲ ಸುಖಗಳನ್ನೂ ಬಿಡಬೇಕೆಂಬುದನ್ನು ನಾನು ಇನ್ನೂ ಕಲಿತಿರಲಿಲ್ಲ. ನನ್ನ ಭೋಗೇಚ್ಛೆಗಾಗಿ ನನ್ನನ್ನು ಶಿಕ್ಷಿಸುವುದಕ್ಕೋ ಎಂಬಂತೆ ನಡೆದ ಒಂದು ದುರ್ಘಟನೆ, ನನ್ನ ಜೀವಮಾನವೆಲ್ಲಾ ಮನಸ್ಸಲ್ಲಿ ಕೊರೆಯುತ್ತಿದೆ. ಆ ಸಂಗತಿಯನ್ನು ಮುಂದೆ ತಿಳಿಸುವೆನು. ನಿಷ್ಕುಲಾನಂದರು ಹೀಗೆ ಹಾಡುತ್ತಾರೆ:

ಭೋಗವನ್ನು ಸವಿಯುವ ಆಸೆಯನ್ನು ಬಿಡದೆ ಭೋಗ ಸಾಮಗ್ರಿಯನ್ನು ಮಾತ್ರ ಬಿಟ್ಟರೆ ವೈರಾಗ್ಯ ಲಭಿಸುವುದಿಲ್ಲ. ತ್ಯಾಗವೆಂಬುದು ಒಂದು ಮನೋವೃತ್ತಿ. ಮನಸ್ಸು ಸ್ವಾಧೀನದಲ್ಲಿಲ್ಲದೆ ಬಾಹ್ಯವರ್ತನೆಯಿಂದ ಶಾಶ್ವತ ಫಲ ದೊರೆಯುವುದಿಲ್ಲ…. ನನ್ನ ಪಾಡಿಗೆ ನಾನು ಈ ಹಾಡನ್ನು ಹಾಡಿ ಕೊಂಡಾಗಲಾಗಲೀ, ಇತರರು ಹಾಡಿದಾಗಲಾಗಲೀ ಆ ದುರ್ಘಟನೆ ಮತ್ತು ಕಹಿಪ್ರಸಂಗ ನನಗೆ ಜ್ಞಾಪಕ ಬಂದು ನನ್ನಲ್ಲಿ ಲಜ್ಜೆಯನ್ನು ತುಂಬುತ್ತದೆ.

ನಮ್ಮ ತಂದೆ ತಾಯಿ ನನಗೆ ಬಾಲ್ಯ ವಿವಾಹವನ್ನು ಮಾಡಿದುದಕ್ಕಾಗಿ ಅವರನ್ನು ನಾನು ಮುಂದೆ ಟೀಕಿಸ ಬೇಕಾಗಬಹುದೆಂದು ನನಗೆ ಸ್ಪಪ್ನದಲ್ಲಿಯೂ ಆಗ ಹೊಳೆಯಲಿಲ್ಲ. ಆ ಸಮಯದಲ್ಲಿ ನನಗೆ ಎಲ್ಲವೂ ಯೋಗ್ಯವಾಗಿ, ಉಚಿತವಾಗಿ, ಇಷ್ಟವಾಗಿ ತೋರಿತು. ವಿವಾಹವಾಗಲು ನಾನೂ ತುಂಬ ಉತ್ಸುಕನಾಗಿದ್ದೆ. ಆಗ ನಮ್ಮ ತಂದೆ ಮಾಡಿದುದೆಲ್ಲ ನನಗೆ ನಿರ್ದುಷ್ಟವಾಗಿ ತೋರಿದುದರಿಂದ, ನಡೆದ ಸಂಗತಿಗಳೆಲ್ಲ ನನಗೆ ಸ್ಪಷ್ಟವಾಗಿ ನೆನಪಿದೆ.

ನಮ್ಮಲ್ಲಿ ಪರಸ್ಪರ ಸ್ಪಲ್ಪ ಭಯವೂ ಲಜ್ಜೆಯೂ ಇದ್ದಿತು. ಕ್ರಮೇಣ ಒಬ್ಬರನ್ನೊಬ್ಬರು ಅರಿತುಕೊಂಡು ನಿರಾತಂಕದಿಂದ ಮಾತನಾಡತೊಡಗಿದೆವು. ನಾವಿಬ್ಬರೂ ಒಂದೇ ವಯಸ್ಸಿನವರಾಗಿದ್ದೆವು. ಆದರೆ ನಾನು ಗಂಡನ ಅಧಿಕಾರವನ್ನು ವಹಿಸಿ ಕೊಳ್ಳಲು ತಡಮಾಡಲಿಲ್ಲ.

 

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

12 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

12 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

14 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

14 hours ago