Andolana originals

ಆಂದೋಲನಕ್ಕೆ 52ರ ಹರಯ: ಜನಸಾಮಾನ್ಯರ ʼಆಂದೋಲನʼವನ್ನು ಬೆಳೆಸಿದ ಜನತೆಗೆ ಕೋಟಿ ನಮನ

ನಿಮ್ಮ ಮೆಚ್ಚಿನ ‘ಆಂದೋಲನ’ ದಿನಪತ್ರಿಕೆ ಈಗ 52 ವರ್ಷಗಳನ್ನು ಪೂರೈಸಿ 53ನೇ ವರ್ಷಕ್ಕೆ ಪದಾರ್ಪಣೆ ಮಾಡಿದೆ. 1972ರಲ್ಲಿ ಧಾರವಾಡದಲ್ಲಿ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರು ಆರಂಭಿಸಿದ ಪತ್ರಿಕೆಗೆ ಇದ್ದದ್ದು ಒಂದೇ ಗುರಿ. ಸಮಾಜದಲ್ಲಿ ಧ್ವನಿ ಇಲ್ಲದವರ ದನಿಯಾಗುವುದು. ಚಳವಳಿಗಳ ಮಡಿಲಲ್ಲೇ ಬೆಳೆದ ‘ಆಂದೋಲನ’ಕ್ಕೆ ಸದಾ ಜನಪರ ಚಿಂತನೆಗಳಿಗೆ ಕಿವಿಯಾಗಿ, ನೋವುಗಳ ಪರಿಹಾರಕ್ಕೆ ಧ್ವನಿಯಾಗಿ ಮೌಲ್ಯಭರಿತ ಸುದ್ದಿಗಳನ್ನು ಪ್ರಕಟಿಸುವುದೇ ಏಕೈಕ ಗುರಿಯಾಗಿದೆ. ಅಷ್ಟೇ ಅಲ್ಲದೆ, ವ್ಯಕ್ತಿಗತ ಅನ್ಯಾಯವಾದರೂ, ಸಾಮೂಹಿಕವಾಗಿ ದೌರ್ಜನ್ಯ ನಡೆದರೂ ಪತ್ರಿಕೆಯು ಸಂತ್ರಸ್ತರ ಪರವಾಗಿ ನಿಂತು ಚಿಕಿತ್ಸಕ ದೃಷ್ಟಿಯಿಂದ ಸುದ್ದಿಗಳನ್ನು ಬಿತ್ತರಿಸುತ್ತಾ ಬಂದಿದೆ. 52 ವರ್ಷಗಳ ಸುದೀರ್ಘ ಪಯಣದಲ್ಲಿ ಇಂತಹ ಅನೇಕ ಪ್ರಕರಣಗಳಿಗೆ ‘ಪತ್ರಿಕೆ’ ಮಿಡಿದಿದೆ. ನೊಂದವರಿಗೆ ನ್ಯಾಯ ಒದಗಿಸುವ ಹೋರಾಟಕ್ಕೆ ವೇದಿಕೆಯಾಗಿದೆ.

ಮೈಸೂರು ಭಾಗದ ಜನರ ಸಮಸ್ಯೆಗಳನ್ನು ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಅವರ ಕಣ್ತೆರೆಸುವ ಕೆಲಸವನ್ನು ಪತ್ರಿಕೆ ನಿರಂತರವಾಗಿ ಮಾಡುತ್ತಾ ಬಂದಿದೆ. ಅದರಲ್ಲಿಯೂ ಪ್ರಮುಖವಾಗಿ ವಿಕ್ರಾಂತ್ ಟೈರ್ಸ್ ಕಾರ್ಖಾನೆ ಕಾರ್ಮಿಕ ಸತ್ಯದೇವ್ ಕೊಲೆ ಪ್ರಕರಣ, ಹಂಗರಹಳ್ಳಿ ಜೀತ ಪ್ರಕರಣ ಮತ್ತು ಜಾತಿ ದಳ್ಳುರಿಯಿಂದ ಬೆಂದು ಹೋದ ಬದನವಾಳು ದುರಂತದ ಸಂದರ್ಭಗಳಲ್ಲಿ ಪ್ರಾದೇಶಿಕ ಪತ್ರಿಕೆಯಾಗಿಯೂ ತಳೆದ ದಿಟ್ಟ ನಿಲುವು ‘ಆಂದೋಲನ’ದ ಬದ್ಧತೆಗೆ ಸಾಕ್ಷಿಯಾಗಿದೆ. ಇಂದಿಗೂ ಈ ಕೈಂಕರ್ಯವನ್ನು ಮುಂದುವರಿಸುತ್ತಾ ಬಂದಿದೆ. ಅದಕ್ಕೆ ಕಾರಣ ‘ಆಂದೋಲನ’ದ ಅಂತರಾಳದಲ್ಲಿ ಇರುವ ತಾಯ್ತನದ ಭಾವನೆ ಎಂದರೆ ಉತ್ಪ್ರೇಕ್ಷೆಯಲ್ಲ.

ಮೂಲಸೌಕರ್ಯಗಳಿಲ್ಲದೆ ಹೀನಾಯ ಸ್ಥಿತಿಯಲ್ಲಿ ಜೀವನವನ್ನು ನಡೆಸುತ್ತಿರುವ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ನಟ್ಟಡವಿಯಲ್ಲಿರುವ ಇಂಡಿಗನತ್ತ, ಮೆಂದಾರೆ ಹಾಗೂ ಇತರ ಗ್ರಾಮಗಳ ದಾರುಣ ಚಿತ್ರಣವನ್ನು ಸರಣಿ ರೂಪದಲ್ಲಿ ಪ್ರಕಟಿಸಿ, ಆ ಜನರ ಕಣ್ಣೀರ ಬದುಕಿನ ಕಣ ಕಣವನ್ನೂ ‘ಆಂದೋಲನ’ವು ಅಕ್ಷರ ರೂಪದಲ್ಲಿ ತೆರೆದಿಟ್ಟು, ಆ ಮೂಲಕ ಜನಪ್ರತಿನಿಽಗಳು ಮೂಲ ಸೌಕರ್ಯವನ್ನು ಒದಗಿಸಲು ಮುಂದಾಗುವಂತೆ ನೋಡಿಕೊಂಡಿದ್ದು ಪತ್ರಿಕೆಯ ಬದ್ಧತೆಗೆ ಇತ್ತೀಚಿನ ನಿದರ್ಶನವಾಗಿದೆ. ಹೀಗೆ ಪತ್ರಿಕೆಯು ಸದಾ ಕಾಲ ನೊಂದವರ, ಶೋಷಿತರ ದನಿಯಾಗಿ ಜನಸಾಮಾನ್ಯರ ಪ್ರೀತಿ ಮತ್ತು ಅಭಿಮಾನಕ್ಕೆ ಪಾತ್ರವಾಗಿದೆ.

ಕಳೆದ 5 ದಶಕಗಳಿಂದ ಹಳೇ ಮೈಸೂರು ಭಾಗದ ಜನರ ಧ್ವನಿಯಾಗಿ, ಸ್ಥಳೀಯ ರಾಜಕೀಯ, ಹೋರಾಟಗಳ ಬೆಳವಣಿಗೆಗಳನ್ನು ಒದಗಿಸುವ ಮೂಲಕ ಓದುಗರ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯಾಗಿ ‘ಆಂದೋಲನ’ ಹೊರಹೊಮ್ಮಿದೆ. ಮೈಸೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಪತ್ರಿಕೆಯು ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಿಗೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಸಾಹಿತ್ಯ, ಸಂಸ್ಕ ತಿ, ಕಲೆ, ಶಿಕ್ಷಣ, ಕ್ರೀಡೆ, ಸಹಕಾರ, ಪ್ರಗತಿಪರ

ಚಳವಳಿ ಮೊದಲಾದ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಕನ್ನಡ ನೆಲ, ಜಲ, ಭಾಷಾ ಹೋರಾಟಗಳ ಸಂದರ್ಭದಲ್ಲಿ ಕೂಡ ಪತ್ರಿಕೆ ಮಹತ್ವದ ಪಾತ್ರವಹಿಸಿದೆ. ಇದಲ್ಲದೆ, ಬಹಳ ಸೂಕ್ಷ್ಮವಾಗಿ ಸಮಾಜವನ್ನು ಗಮನಿಸುತ್ತಾ, ಸಮಾಜದಲ್ಲಿ ವೈಚಾರಿಕ ಪ್ರಜ್ಞೆಯಿಂದ ಸಮ ಸಮಾಜ ನಿರ್ಮಾಣದ ಪರವಾಗಿ ಕೆಲಸ ಮಾಡುತ್ತಿರುವ ಎಲ್ಲರನ್ನೂ ಬೆಂಬಲಿಸುತ್ತಾ ಬಂದಿದೆ. ಹಾಗಾಗಿ ‘ಆಂದೋಲನ’ ಎಲ್ಲ ವರ್ಗಗಳ ಜನರ ಪ್ರೀತಿಪಾತ್ರ ಪತ್ರಿಕೆಯಾಗಿ ಬೆಳೆದಿದೆ. ‘ಆಂದೋಲನ’ ಎಂದಾಕ್ಷಣ ‘ಅದು ನಮ್ಮ ಪತ್ರಿಕೆ’ ಎಂಬ ಭಾವನೆ ಎಲ್ಲರಲ್ಲೂ ಮೂಡುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುವ ಈ ನಿಮ್ಮ ಪತ್ರಿಕೆ ಈಗ 52 ಸಾರ್ಥಕ ವರ್ಷಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ. ನಮ್ಮ ಆಶಯಗಳಿಗೆ ಧ್ವನಿಗೂಡಿಸಿ, ನಿಮ್ಮ ಅಭಿವ್ಯಕ್ತಿಗೆ ಸಾದೃಶ್ಯವಾಗಿರುವ ‘ಆಂದೋಲನ’ದ ಪ್ರತಿ ಹೆಜ್ಜೆಗೂ ನಿರಂತರ ಬೆಂಬಲ ಹಾಗೂ ಸಹಕಾರವನ್ನು ನೀಡುತ್ತಾ ಬಂದಿರುವ ಓದುಗರು, ಪತ್ರಿಕಾ ವಿತರಕರು ಹಾಗೂ ಜಾಹೀರಾತುದಾರರಿಗೆ ಧನ್ಯವಾದಗಳು.

 

andolana

Recent Posts

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

18 mins ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

2 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

3 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

3 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

3 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

3 hours ago