ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು ಮೈಸೂರು ಮಹಾನಗರ ಪಾಲಿಕೆ ಗುರುವಾರ ತೆರವು ಮಾಡಿದೆ.
‘ಜಂಬೂ ಸವಾರಿ ಮಾರ್ಗದ ಮರ ತೆರವಾಗುತ್ತಾ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ‘ಆಂದೋಲನ’ದ ವರದಿಗೆ ಸ್ಪಂದಿಸಿದ ಮೈಸೂರು ಮಹಾನಗರ ಪಾಲಿಕೆ ತೋಟಗಾರಿಕೆ ವಿಭಾಗದ ಸಹಾಯಕ ನಿರ್ದೇಶಕ ಮೋಹನ್ ಅವರು ಬೃಹತ್ ಮರದ ಕಾಂಡ ತೆರವು ಮಾಡಲು ಕಾಳಜಿ ವಹಿಸಿದ್ದಾರೆ.
ಎರಡು ಜಂಬೂ ಸವಾರಿ ಮೆರವಣಿಗೆಯನ್ನು ಕಂಡಿದ್ದ ಬೃಹತ್ ಮರದ ಕಾಂಡವನ್ನು ಸುಮಾರು ೫ ಗಂಟೆಗಳ ಕಾಲ ಸಾಹಸ ಪಟ್ಟು ಜೆಸಿಬಿ ಹಾಗೂ ದೊಡ್ಡ ಗರಗಸ ಬಳಸಿ ಮರವನ್ನು ತುಂಡು ತುಂಡಾಗಿ ಕತ್ತರಿಸಿ ಟ್ರಕ್ನಲ್ಲಿ ವಿದ್ಯಾರಣ್ಯಪುರಂನ ಸುಯೇಜ್ ಫಾರಂಗೆ ಸಾಗಿಸಲಾಯಿತು. ಕಾರ್ಯಚರಣೆಯಲ್ಲಿ ೭ ಮಂದಿ ಸಿಬ್ಬಂದಿ ಭಾಗವಹಿಸಿ ತೆರವು ಕಾರ್ಯ ಯಶಸ್ವಿಗೊಳಿಸಿದ್ದಾರೆ
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…