Andolana originals

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು ಮೈಸೂರು ಮಹಾನಗರ ಪಾಲಿಕೆ ಗುರುವಾರ ತೆರವು ಮಾಡಿದೆ.

‘ಜಂಬೂ ಸವಾರಿ ಮಾರ್ಗದ ಮರ ತೆರವಾಗುತ್ತಾ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ‘ಆಂದೋಲನ’ದ ವರದಿಗೆ ಸ್ಪಂದಿಸಿದ ಮೈಸೂರು ಮಹಾನಗರ ಪಾಲಿಕೆ ತೋಟಗಾರಿಕೆ ವಿಭಾಗದ ಸಹಾಯಕ ನಿರ್ದೇಶಕ ಮೋಹನ್ ಅವರು ಬೃಹತ್ ಮರದ ಕಾಂಡ ತೆರವು ಮಾಡಲು ಕಾಳಜಿ ವಹಿಸಿದ್ದಾರೆ.

ಎರಡು ಜಂಬೂ ಸವಾರಿ ಮೆರವಣಿಗೆಯನ್ನು ಕಂಡಿದ್ದ ಬೃಹತ್ ಮರದ ಕಾಂಡವನ್ನು ಸುಮಾರು ೫ ಗಂಟೆಗಳ ಕಾಲ ಸಾಹಸ ಪಟ್ಟು ಜೆಸಿಬಿ ಹಾಗೂ ದೊಡ್ಡ ಗರಗಸ ಬಳಸಿ ಮರವನ್ನು ತುಂಡು ತುಂಡಾಗಿ ಕತ್ತರಿಸಿ ಟ್ರಕ್‌ನಲ್ಲಿ ವಿದ್ಯಾರಣ್ಯಪುರಂನ ಸುಯೇಜ್ ಫಾರಂಗೆ ಸಾಗಿಸಲಾಯಿತು. ಕಾರ್ಯಚರಣೆಯಲ್ಲಿ ೭ ಮಂದಿ ಸಿಬ್ಬಂದಿ ಭಾಗವಹಿಸಿ ತೆರವು ಕಾರ್ಯ ಯಶಸ್ವಿಗೊಳಿಸಿದ್ದಾರೆ

 

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago