ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು ಮೈಸೂರು ಮಹಾನಗರ ಪಾಲಿಕೆ ಗುರುವಾರ ತೆರವು ಮಾಡಿದೆ.
‘ಜಂಬೂ ಸವಾರಿ ಮಾರ್ಗದ ಮರ ತೆರವಾಗುತ್ತಾ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ‘ಆಂದೋಲನ’ದ ವರದಿಗೆ ಸ್ಪಂದಿಸಿದ ಮೈಸೂರು ಮಹಾನಗರ ಪಾಲಿಕೆ ತೋಟಗಾರಿಕೆ ವಿಭಾಗದ ಸಹಾಯಕ ನಿರ್ದೇಶಕ ಮೋಹನ್ ಅವರು ಬೃಹತ್ ಮರದ ಕಾಂಡ ತೆರವು ಮಾಡಲು ಕಾಳಜಿ ವಹಿಸಿದ್ದಾರೆ.
ಎರಡು ಜಂಬೂ ಸವಾರಿ ಮೆರವಣಿಗೆಯನ್ನು ಕಂಡಿದ್ದ ಬೃಹತ್ ಮರದ ಕಾಂಡವನ್ನು ಸುಮಾರು ೫ ಗಂಟೆಗಳ ಕಾಲ ಸಾಹಸ ಪಟ್ಟು ಜೆಸಿಬಿ ಹಾಗೂ ದೊಡ್ಡ ಗರಗಸ ಬಳಸಿ ಮರವನ್ನು ತುಂಡು ತುಂಡಾಗಿ ಕತ್ತರಿಸಿ ಟ್ರಕ್ನಲ್ಲಿ ವಿದ್ಯಾರಣ್ಯಪುರಂನ ಸುಯೇಜ್ ಫಾರಂಗೆ ಸಾಗಿಸಲಾಯಿತು. ಕಾರ್ಯಚರಣೆಯಲ್ಲಿ ೭ ಮಂದಿ ಸಿಬ್ಬಂದಿ ಭಾಗವಹಿಸಿ ತೆರವು ಕಾರ್ಯ ಯಶಸ್ವಿಗೊಳಿಸಿದ್ದಾರೆ
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…