Andolana originals

ಓದುಗರ ಪತ್ರ: ತಪ್ಪು ಮಾಹಿತಿ ನೀಡದಿರಿ

ಒಳ ಮೀಸಲಾತಿ ಜಾರಿಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಡಾ. ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆಯಾಗಿರುವುದು ಸರಿಯಷ್ಟೇ. ಈಗಾಗಲೇ ಗಣತಿ ಕಾರ್ಯ ಮುಗಿದಿದ್ದು, ಸಮೀಕ್ಷೆಯಿಂದ ಹೊರಗುಳಿದಿರುವವರು ಆನ್ ಲೈನ್ ಮೂಲಕ ಘೋಷಣೆ ಮಾಡಿಕೊಳ್ಳಲು ಸರ್ಕಾರ ೨೨.೬.೨೫.ರ ವರೆಗೂ ಅವಧಿ ವಿಸ್ತರಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ಆಯೋಗರಚನೆ, ಸಮೀಕ್ಷೆಗಳ ಬಗ್ಗೆ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮ ಗಳಲ್ಲಿ ಪ್ರತಿ ದಿನವೂ ಜಾಹೀರಾತು ನೀಡುತ್ತಿದೆ. ಕೋರ್ಟ್ ನಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿಗಳಿಗೂ, ಸೇವೆಯಿಂದ ನಿವೃತ್ತರಾದ ನ್ಯಾಯ ಮೂರ್ತಿಗಳಿಗೂ ಬಹಳ ವ್ಯತ್ಯಾಸಗಳಿವೆ. ಡಾ. ಎಚ್. ಎನ್. ನಾಗಮೋಹನ್ ದಾಸ್ರವರು ನಿವೃತ್ತ ನ್ಯಾಯಾಧೀಶರಾಗಿದ್ದಾರೆ. ಆದರೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ವತಿಯಿಂದ ನೀಡುವ ಜಾಹೀರಾತಿನಲ್ಲಿ, ನಿವೃತ್ತ ಎನ್ನುವುದನ್ನು ತಿಳಿಸದೆ
ಗೌರವಾನ್ವಿತ ನ್ಯಾಯಮೂರ್ತಿ ಎಂದೇ ಬರೆಯಲಾಗಿದೆ. ಇದು ಜನರಿಗೆ ಹಾಲಿ ನ್ಯಾಯಮೂರ್ತಿಗಳೋ, ನಿವೃತ್ತ ನ್ಯಾಯ ಮೂರ್ತಿಗಳೋ ಎಂದು ಗೊಂದಲ ಮೂಡಿಸುತ್ತಿದೆ. ಆದ್ದರಿಂದ ಸಮಾಜ ಕಲ್ಯಾಣ ಇಲಾಖೆ ಜಾಹೀರಾತಿನಲ್ಲಿ ಆಗಿರುವ ತಪ್ಪನ್ನು ಸರಿ ಪಡಿಸಲಿ.

-ಮುಳ್ಳೂರು ಪ್ರಕಾಶ್ , ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

14 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

47 mins ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

2 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

3 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

4 hours ago