ಓದುಗರ ಪತ್ರ
ಒಳ ಮೀಸಲಾತಿ ಜಾರಿಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಡಾ. ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆಯಾಗಿರುವುದು ಸರಿಯಷ್ಟೇ. ಈಗಾಗಲೇ ಗಣತಿ ಕಾರ್ಯ ಮುಗಿದಿದ್ದು, ಸಮೀಕ್ಷೆಯಿಂದ ಹೊರಗುಳಿದಿರುವವರು ಆನ್ ಲೈನ್ ಮೂಲಕ ಘೋಷಣೆ ಮಾಡಿಕೊಳ್ಳಲು ಸರ್ಕಾರ ೨೨.೬.೨೫.ರ ವರೆಗೂ ಅವಧಿ ವಿಸ್ತರಿಸಿದೆ.
ಸಮಾಜ ಕಲ್ಯಾಣ ಇಲಾಖೆಯು ಆಯೋಗರಚನೆ, ಸಮೀಕ್ಷೆಗಳ ಬಗ್ಗೆ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮ ಗಳಲ್ಲಿ ಪ್ರತಿ ದಿನವೂ ಜಾಹೀರಾತು ನೀಡುತ್ತಿದೆ. ಕೋರ್ಟ್ ನಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿಗಳಿಗೂ, ಸೇವೆಯಿಂದ ನಿವೃತ್ತರಾದ ನ್ಯಾಯ ಮೂರ್ತಿಗಳಿಗೂ ಬಹಳ ವ್ಯತ್ಯಾಸಗಳಿವೆ. ಡಾ. ಎಚ್. ಎನ್. ನಾಗಮೋಹನ್ ದಾಸ್ರವರು ನಿವೃತ್ತ ನ್ಯಾಯಾಧೀಶರಾಗಿದ್ದಾರೆ. ಆದರೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ವತಿಯಿಂದ ನೀಡುವ ಜಾಹೀರಾತಿನಲ್ಲಿ, ನಿವೃತ್ತ ಎನ್ನುವುದನ್ನು ತಿಳಿಸದೆ
ಗೌರವಾನ್ವಿತ ನ್ಯಾಯಮೂರ್ತಿ ಎಂದೇ ಬರೆಯಲಾಗಿದೆ. ಇದು ಜನರಿಗೆ ಹಾಲಿ ನ್ಯಾಯಮೂರ್ತಿಗಳೋ, ನಿವೃತ್ತ ನ್ಯಾಯ ಮೂರ್ತಿಗಳೋ ಎಂದು ಗೊಂದಲ ಮೂಡಿಸುತ್ತಿದೆ. ಆದ್ದರಿಂದ ಸಮಾಜ ಕಲ್ಯಾಣ ಇಲಾಖೆ ಜಾಹೀರಾತಿನಲ್ಲಿ ಆಗಿರುವ ತಪ್ಪನ್ನು ಸರಿ ಪಡಿಸಲಿ.
-ಮುಳ್ಳೂರು ಪ್ರಕಾಶ್ , ಕನಕದಾಸನಗರ, ಮೈಸೂರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…