Andolana originals

ದಸರಾ ಆನೆಗಳ ಮೇಲೆ ಆಂಧ್ರ ಅರಣ್ಯ ಇಲಾಖೆ ಕಣ್ಣು

ಪ್ರಶಾಂತ್ ಎಸ್.

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಸಾಕಾನೆ ಶಿಬಿರದ 8 ಆನೆಗಳನ್ನು ಕಾರ್ಯಾಚರಣೆಗಾಗಿ ನೀಡುವಂತೆ ಆಂಧ್ರಪ್ರದೇಶದ ಅರಣ್ಯ ಇಲಾಖೆಯು ರಾಜ್ಯದ ಅರಣ್ಯ ಇಲಾಖೆಗೆ ಈಗಾಗಲೇ ಬೇಡಿಕೆ ಇಟ್ಟಿದ್ದು, ಇದಕ್ಕೆ ವನ್ಯಜೀವಿ ಪ್ರಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲೇ ಅತಿ ಹೆಚ್ಚು ಆನೆಗಳಿರುವ ರಾಜ್ಯ ವೆಂದು ಹೆಸರುವಾಸಿಯಾಗಿರುವ ಕರ್ನಾಟಕದಲ್ಲಿ ಸುಮಾರು 6,300ಕ್ಕೂ ಹೆಚ್ಚು ಆನೆಗಳಿವೆ. 14 ಸಾಕಾನೆ ಶಿಬಿರಗಳಿವೆ. ಇಲ್ಲಿನ ಸಾಕಾನೆಗಳ ಮೇಲೆ ಹೊರ ರಾಜ್ಯದ ಅರಣ್ಯ ಇಲಾಖೆಗಳು ಕಣ್ಣಿಟ್ಟಿದ್ದು, ಆಂಧ್ರಪ್ರದೇಶದ ಅರಣ್ಯ ಇಲಾಖೆಯು ಕಾಡಾನೆ ಗಳ ಸೆರೆ ಕಾರ್ಯಾಚರಣೆಗಾಗಿ ಕರ್ನಾಟಕದ ಎಂಟು ಆನೆಗಳನ್ನು ತನಗೆ ನೀಡುವಂತೆ ಬೇಡಿಕೆ ಇಟ್ಟಿದೆ. ಅದೂ ಅಲ್ಲದೆ, ನಾಗರಹೊಳೆಯ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಮತ್ತಿಗೋಡು ಹಾಗೂ ಕೊಡಗಿನ ದುಬಾರೆ ಸಾಕಾನೆ ಶಿಬಿರಕ್ಕೆ ಆಂಧ್ರದ ಮೂವರು ಅರಣ್ಯಾಧಿಕಾರಿಗಳು ಇತ್ತೀಚೆಗಷ್ಟೇ ಭೇಟಿ ನೀಡಿ ತಮಗೆ ಬೇಕಾದ ಆನೆಗಳನ್ನು ಆಯ್ಕೆ ಮಾಡಿರುವುದು ಇದಕ್ಕೆ ಪುಷ್ಟಿ ನೀಡುತ್ತದೆ. ಈ ಬೆಳವಣಿಗೆಯಿಂದ ವನ್ಯ ಜೀವಿ ಪ್ರಿಯರು ಆತಂಕಗೊಂಡಿದ್ದಾರೆ.

ಆಂಧ್ರಪ್ರದೇಶದಲ್ಲಿ ಕಾಡಾನೆಗಳ ಹಾವಳಿ: ಕರ್ನಾಟಕದಲ್ಲಿರುವಂತೆ ಆಂಧ್ರಪ್ರದೇಶದಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಅಲ್ಲಿನ ರೈತರ ಜಮೀನುಗಳಿಗೆ ನುಗ್ಗಿ ದಾಂದಲೆ ಮಾಡುತ್ತಿವೆ. ಅದನ್ನು ತಪ್ಪಿಸಲು ಕಾರ್ಯಾಚರಣೆಗೆ ಮುಂದಾಗಿ ರುವ ಅಲ್ಲಿನ ಅರಣ್ಯ ಇಲಾಖೆ ಆನೆ ಸೆರೆ ಕಾರ್ಯಾಚರಣೆಗೆ ಕರ್ನಾಟಕದ ಸಾಕಾನೆಗಳನ್ನು ಬಳಸಿಕೊಳ್ಳಲು ಸಜ್ಜಾಗಿದೆ.

ಆಂಧ್ರಪ್ರದೇಶದ ಅರಣ್ಯ ಇಲಾಖೆಯಿಂದ ಪತ್ರ: 202-23ನೇ ಸಾಲಿನ ಸೆಪ್ಟೆಂಬರ್-ಅಕ್ಟೋ ಬರ್ ತಿಂಗಳಿನಲ್ಲೇ 22 ಆನೆಗಳನ್ನು ರವಾನಿಸುವಂತೆ ಕರ್ನಾಟಕದ ಅರಣ್ಯ ಇಲಾಖೆಗೆ ಆಂಧ್ರಪ್ರದೇಶದ ಅರಣ್ಯ ಇಲಾಖೆ ಪತ್ರ ಬರೆದಿತ್ತು.

ಈ ಸಂಬಂಧ ರಾಜ್ಯ ಅರಣ್ಯ ಇಲಾಖೆ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ತಟಸ್ಥವಾಗಿತ್ತು. ಇಂತಹ ಸಂದರ್ಭದಲ್ಲಿಯೇ ಹಾಸನದಲ್ಲಿ ನಡೆದ ಆನೆ ಸೆರೆ ಕಾರ್ಯಾಚರಣೆ ವೇಳೆಯಲ್ಲಿ ಅರ್ಜುನ ಆನೆಯು ಮೃತಪಟ್ಟಿತು. ಕಾಡಾನೆಗಳ ಉಪಟಳದ ಬಗ್ಗೆ ಈ ಸಂದರ್ಭ ವನ್ನೇ ಅಸ್ತ್ರವಾಗಿ ಬಳಸಿಕೊಂಡ ಆಂಧ್ರಪ್ರದೇಶ ಅರಣ್ಯ ಇಲಾಖೆಯು 22 ಆನೆಗಳ ಬದಲಿಗೆ 8 ಆನೆಗಳನ್ನು ನೀಡುವಂತೆ ಮತ್ತೆ ಮನವಿ ಸಲ್ಲಿಸಿತು. ಇದೀಗ ರಾಜ್ಯ ಅರಣ್ಯ ಇಲಾಖೆ ಮತ್ತಿಗೋಡು ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಆನೆ ಕ್ಯಾಂಪ್‌ ಅಧಿಕಾರಿಗಳಿಗೆ ಪತ್ರ ಬರೆದು ವರದಿ ನೀಡುವಂತೆ ಸೂಚಿಸಿದೆ. ಈ ವರದಿ ಆಧಾರದ ಮೇಲೆ ಆನೆಗಳನ್ನು ನೀಡಬೇಕೋ, ಬೇಡವೋ ಎಂಬ ನಿರ್ಧಾರಕ್ಕೆ ಬರಲು ತೀರ್ಮಾನಿಸಲಿದೆ.

ನಾಗರಹೊಳೆ ಹುಲಿ ಸಂರಕಿತ ಪ್ರದೇಶ ವ್ಯಾಪ್ತಿಯ ಆನೆಗಳ ಸಂಖ್ಯೆ: ದುಬಾರೆ ಆನೆ ಶಿಬಿರದಲ್ಲಿ ಎರಡು ಹೆಣ್ಣಾನೆಗಳು ಸೇರಿದಂತೆ ಒಟ್ಟು 32 ಆನೆಗಳಿವೆ. ಮತ್ತಿಗೋಡು ಶಿಬಿರದಲ್ಲಿ 15 ಆನೆಗಳಿವೆ. ಸಾಕಷ್ಟು ಆನೆಗಳಿಗೆ ವಯಸ್ಸಾಗುತ್ತಿದೆ. ಸಾವಿನ ಪ್ರಮಾಣವೂ ಹೆಚ್ಚುತ್ತಿದೆ. ಜತೆಗೆ ರಾಜ್ಯದ ವಿವಿಧೆಡೆ ಕಾಡಾನೆಗಳ ದಾಂದಲೆ ಹೆಚ್ಚಿದೆ. ದಸರಾ ಮಹೋತ್ಸವಕ್ಕೆ ಭವಿಷ್ಯದ ಆನೆಗಳನ್ನು ತಯಾರು ಮಾಡಬೇಕಿದೆ. ಇದೆಲ್ಲದರ ನಡುವೆ ನಮ್ಮ ರಾಜ್ಯದಲ್ಲಿ ಪಳಗಿಸಿರುವ ಆನೆಗಳನ್ನು ನೆರೆ ರಾಜ್ಯಕ್ಕೆ ಕೊಡುವುದು ಎಷ್ಟು ಸರಿ ಎಂದು ವನ್ಯಜೀವಿ ಪ್ರಿಯರು ಪ್ರಶ್ನಿಸುತ್ತಾರೆ.

ಕೋಟ್ಸ್‌))

ಕಳೆದ 3 ವರ್ಷಗಳಲ್ಲಿ ನಮ್ಮಲ್ಲಿ ಪಳಗಿಸಿರುವ ಒಟ್ಟು 57 ಆನೆಗಳನ್ನು ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಿಗೆ ನೀಡಲಾಗಿದೆ. ಆಂಧ್ರಪ್ರದೇಶದಲ್ಲೇ ಸಾಕಷ್ಟು ಆನೆಗಳಿದ್ದು, ಅಧಿಕಾರಿಗಳು ಅವುಗಳನ್ನೇ ಪಳಗಿಸಬೇಕಿದೆ. ತಮಿಳುನಾಡು, ಕೇರಳ ರಾಜ್ಯದಿಂದ ಆನೆಗಳನ್ನು ಕೇಳುತ್ತಿಲ್ಲ. ನಮ್ಮಲ್ಲಿ ಪಳಗಿಸಿದ ಆನೆಗಳನ್ನು ನೆರೆಯ ರಾಜ್ಯಕ್ಕೆ ಕೊಡುವುದು ಎಷ್ಟು ಸರಿ.
-ಜೋಸೆಫ್ ಹೂವರ್‌, ಪರಿಸರವಾದಿ

ಅಹರ್ತೆಯುಳ್ಳ ಉತ್ತಮವಾದ ದಸರಾ ಆನೆಗಳನ್ನು ಆಂಧ್ರ ಪ್ರದೇಶಕ್ಕೆ ನೀಡಲು ಸಾಧ್ಯವಿಲ್ಲ. ಈಗಾಗಲೇ ಅವರು ಕೇಳಿರುವ ಆನೆಗಳನ್ನು ಕಾರ್ಯಾಚರಣೆಗೆ ಬಳಸಿದ್ದು ಜೊತೆಗೆ ಪ್ರಸ್ತುತ ಆನೆ ಸ್ಥಿತಿ ಗತಿ ಬಗ್ಗೆ ಮೇಲಧಿಕಾರಿ ಗಮನಕ್ಕೆ ತರುತ್ತೇನೆ. ಆಂಧ್ರಪ್ರದೇಶಕ್ಕೆ ಆನೆಗಳನ್ನು ನೀಡುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.
-ಹರ್ಷಕುಮಾರ್ ಚಿಕ್ಕನರಗುಂದ, ಡಿಸಿಎಫ್, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

11 mins ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

3 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

3 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

3 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago