Andolana originals

ಅನ್ನಭಾಗ್ಯ ಯೋಜನೆ: ನಾಲ್ಕು ತಿಂಗಳ ಹಣ ಬಾಕಿ!

ಕೆ.ಬಿ.ರಮೇಶನಾಯಕ

ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಹಣಕ್ಕಾಗಿ ಕಾದು ಕುಳಿತ  ಫಲಾನುಭವಿಗಳು

ಹೊಸ ವರ್ಷದ ಸಂಭ್ರಮ ಆಚರಿಸಲು ಕಾದಿದ್ದ ಜನರಿಗೆ ನಿರಾಸೆ

೨೦೨೩ರ ಜುಲೈ ತಿಂಗಳಿಂದ ಆಗಸ್ಟ್ ವರೆಗೆ ೪೭೧.೭೧ ಕೋಟಿ ರೂ. ಪಾವತಿ

ಮೈಸೂರು: ‘ಶಕ್ತಿ’ ಯೋಜನೆಯಡಿ ಉಚಿತ ಸಾರಿಗೆ ಬಸ್‌ಗಳಲ್ಲಿ ಧಾರ್ಮಿಕ ಸ್ಥಳಗಳಿಗೆ ಪ್ರಯಾಣ ಮಾಡಿ ಹೊಸ ವರ್ಷದ ಸಂಭ್ರಮ ಆಚರಿಸಲು ‘ಅನ್ನಭಾಗ್ಯ’ ಯೋಜನೆಯಡಿ ಸರ್ಕಾರ ಬಿಡುಗಡೆ ಮಾಡುವ ಹಣಕ್ಕಾಗಿ ಕಾದಿದ್ದ ಫಲಾನುಭವಿಗಳಿಗೆ ನಿರಾಸೆಯಾಗಿದೆ.

ಜಿಲ್ಲೆಯ -ಲಾನುಭವಿಗಳಿಗೆ ಕಳೆದ ನಾಲ್ಕು ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಹಣ ಪಾವತಿಯಾಗದೆ ಬಾಕಿ ಉಳಿದಿದೆ. -ಲಾನುಭವಿಗಳ ಖಾತೆಗೆ ೫ ಕೆ.ಜಿ. ಅಕ್ಕಿ ಬದಲಾಗಿ ನೇರವಾಗಿ ಜಮಾ ಮಾಡುತ್ತಿದ್ದ ಯೂನಿಟ್‌ಗೆ ೧೭೦ ರೂ.ಗಳನ್ನು ಆಗಸ್ಟ್ ತಿಂಗಳವರೆಗೆ ಪಾವತಿಸಿದ್ದು, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ಸೇರಿದಂತೆ ನಾಲ್ಕು ತಿಂಗಳ ಬಾಕಿ ಸಂದಾಯವಾ ಗದೆ ಫಲಾನುಭವಿಗಳು ಮೊಬೈಲ್‌ನಲ್ಲಿ ಬರುವ ಸಂದೇಶವನ್ನು ಎದುರು ನೋಡುತ್ತಾ ಕುಳಿತುಕೊಳ್ಳುವಂತಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ಪ್ರಕಾರ ಫಲಾನುಭವಿಗಳಿಗೆ ಜನವರಿ ಎರಡನೇ ವಾರದವರೆಗೆ ಹಣ ಸಂದಾಯವಾಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ, ನಾಲ್ಕು ತಿಂಗಳ ಹಣ ಬಂದರೆ ಹತ್ತಿರದ ಪ್ರವಾಸಿತಾಣ ಅಥವಾ ಬೇರೆ ಸ್ಥಳಗಳಿಗೆ ಹೋಗಿ ಬರುವ ಖುಷಿಯಲ್ಲಿದ್ದವರು ಈಗ ಮನೆಯಲ್ಲೇ ಕೂರುವಂತಾಗಿದೆ.

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ  ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ೨೦೨೩ರ ಜುಲೈ ತಿಂಗಳಿಂದ ಉಚಿತ ೫ ಕೆಜಿ ಆಹಾರಧಾನ್ಯ ವಿತರಣೆ ಮಾಡುವ ಜತೆಗೆ, ಹೆಚ್ಚುವರಿ ೫ ಕೆಜಿ ಅಕ್ಕಿಯ ಹಣ ಪ್ರತಿ ಕೆಜಿಗೆ ೩೪ ರೂ.ನಂತೆ ೫ ಕೆಜಿಗೆ ೧೭೦ ರೂ. (ಒಂದು ಯೂನಿಟ್‌ಗೆ)ಗಳನ್ನು ಪಡಿತರ ಚೀಟಿದಾರರ ಮುಖ್ಯಸ್ಥರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿತ್ತು.

ಬ್ಯಾಂಕ್‌ಗೆ ಫಲಾನುಭವಿಗಳ ಅಲೆದಾಟ: ಡಿಬಿಟಿ ಮೂಲಕ ಬರುತ್ತಿದ್ದ ಹಣ ಬಾರದೆ ಹೋಗಿರುವ ಬಗ್ಗೆ ಫಲಾನುಭವಿಗಳು ಬ್ಯಾಂಕ್‌ಗೆ, ಆಹಾರ ಇಲಾಖೆಗೆ ಹೋಗಿ ವಿಚಾರಿಸುತ್ತಿದ್ದಾರೆ. ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಬಿಡುಗಡೆಯಾದರೆ ಬರುತ್ತದೆ. ಅಲ್ಲಿಂದ ಬಿಡುಗಡೆಯಾಗಿದ್ದರೆ ನಮಗೆ ಗೊತ್ತಾಗುತ್ತದೆ ಹೊರತು ಬೇರೆ ಯಾವ ಮಾಹಿತಿ ಇಲ್ಲವೆಂದು ಹೇಳಿ ಕಳುಹಿಸುತ್ತಿದ್ದಾರೆ.

” ರಾಜ್ಯ ಸರ್ಕಾರದಿಂದ ಅರ್ಹಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆಯಾಗಲಿದೆ. ರಾಜ್ಯ ಸರ್ಕಾರವೇ ನೇರವಾಗಿ ಪಾವತಿಸುವ ಕಾರಣ ನಮ್ಮದೇನೂ ಪಾತ್ರವಿಲ್ಲ. ಹಣ ಜಮಾ ಆಗುತ್ತಿದ್ದಂತೆ ನಮಗೆ ಮಾಹಿತಿ ಗೊತ್ತಾಗಲಿದೆ. ಎನ್‌ಪಿಸಿಎಲ್‌ನಲ್ಲಿ ಮ್ಯಾಚ್ ಆಗಿದ್ದರೆ ಖಾತೆಗೆ ಜಮಾ ಆಗಲಿರುವುದು ತಿಳಿಯಲಿದೆ.”

 -ಕುಮುದಾ ಶರತ್, ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.

೭,೯೩೨ ಮಂದಿಗೆ ಸಿಗುತ್ತಿಲ್ಲ ನಗದು:  ಮೈಸೂರು ಜಿಲ್ಲೆಯ ೯ ತಾಲ್ಲೂಕುಗಳಿಂದ ೬,೬೮,೯೪೬ -ಲಾನುಭವಿಗಳಿದ್ದು, ೬,೬೧,೦೧೪ ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ಪಾವತಿಯಾಗುತ್ತಿದ್ದರೆ, ಉಳಿದ ೭,೯೩೨ ಮಂದಿಗೆ ಹಣ ಪಾವತಿಯಾಗುತ್ತಿಲ್ಲ. ಡಿಬಿಟಿ ಮಾಡಲು ಬ್ಯಾಂಕ್ ಖಾತೆ ಸಮಸ್ಯೆಯಾಗಿರುವ ಕಾರಣ ಈ ಫಲಾನುಭವಿಗಳಿಗೆ ಸೌಲಭ್ಯ ಸಿಗದಂತಾಗಿದೆ.

 

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

8 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

8 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

8 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

8 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

9 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

9 hours ago