Andolana originals

ಅನ್ನಭಾಗ್ಯ ಯೋಜನೆ: ನಾಲ್ಕು ತಿಂಗಳ ಹಣ ಬಾಕಿ!

ಕೆ.ಬಿ.ರಮೇಶನಾಯಕ

ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಹಣಕ್ಕಾಗಿ ಕಾದು ಕುಳಿತ  ಫಲಾನುಭವಿಗಳು

ಹೊಸ ವರ್ಷದ ಸಂಭ್ರಮ ಆಚರಿಸಲು ಕಾದಿದ್ದ ಜನರಿಗೆ ನಿರಾಸೆ

೨೦೨೩ರ ಜುಲೈ ತಿಂಗಳಿಂದ ಆಗಸ್ಟ್ ವರೆಗೆ ೪೭೧.೭೧ ಕೋಟಿ ರೂ. ಪಾವತಿ

ಮೈಸೂರು: ‘ಶಕ್ತಿ’ ಯೋಜನೆಯಡಿ ಉಚಿತ ಸಾರಿಗೆ ಬಸ್‌ಗಳಲ್ಲಿ ಧಾರ್ಮಿಕ ಸ್ಥಳಗಳಿಗೆ ಪ್ರಯಾಣ ಮಾಡಿ ಹೊಸ ವರ್ಷದ ಸಂಭ್ರಮ ಆಚರಿಸಲು ‘ಅನ್ನಭಾಗ್ಯ’ ಯೋಜನೆಯಡಿ ಸರ್ಕಾರ ಬಿಡುಗಡೆ ಮಾಡುವ ಹಣಕ್ಕಾಗಿ ಕಾದಿದ್ದ ಫಲಾನುಭವಿಗಳಿಗೆ ನಿರಾಸೆಯಾಗಿದೆ.

ಜಿಲ್ಲೆಯ -ಲಾನುಭವಿಗಳಿಗೆ ಕಳೆದ ನಾಲ್ಕು ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಹಣ ಪಾವತಿಯಾಗದೆ ಬಾಕಿ ಉಳಿದಿದೆ. -ಲಾನುಭವಿಗಳ ಖಾತೆಗೆ ೫ ಕೆ.ಜಿ. ಅಕ್ಕಿ ಬದಲಾಗಿ ನೇರವಾಗಿ ಜಮಾ ಮಾಡುತ್ತಿದ್ದ ಯೂನಿಟ್‌ಗೆ ೧೭೦ ರೂ.ಗಳನ್ನು ಆಗಸ್ಟ್ ತಿಂಗಳವರೆಗೆ ಪಾವತಿಸಿದ್ದು, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ಸೇರಿದಂತೆ ನಾಲ್ಕು ತಿಂಗಳ ಬಾಕಿ ಸಂದಾಯವಾ ಗದೆ ಫಲಾನುಭವಿಗಳು ಮೊಬೈಲ್‌ನಲ್ಲಿ ಬರುವ ಸಂದೇಶವನ್ನು ಎದುರು ನೋಡುತ್ತಾ ಕುಳಿತುಕೊಳ್ಳುವಂತಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ಪ್ರಕಾರ ಫಲಾನುಭವಿಗಳಿಗೆ ಜನವರಿ ಎರಡನೇ ವಾರದವರೆಗೆ ಹಣ ಸಂದಾಯವಾಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ, ನಾಲ್ಕು ತಿಂಗಳ ಹಣ ಬಂದರೆ ಹತ್ತಿರದ ಪ್ರವಾಸಿತಾಣ ಅಥವಾ ಬೇರೆ ಸ್ಥಳಗಳಿಗೆ ಹೋಗಿ ಬರುವ ಖುಷಿಯಲ್ಲಿದ್ದವರು ಈಗ ಮನೆಯಲ್ಲೇ ಕೂರುವಂತಾಗಿದೆ.

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ  ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ೨೦೨೩ರ ಜುಲೈ ತಿಂಗಳಿಂದ ಉಚಿತ ೫ ಕೆಜಿ ಆಹಾರಧಾನ್ಯ ವಿತರಣೆ ಮಾಡುವ ಜತೆಗೆ, ಹೆಚ್ಚುವರಿ ೫ ಕೆಜಿ ಅಕ್ಕಿಯ ಹಣ ಪ್ರತಿ ಕೆಜಿಗೆ ೩೪ ರೂ.ನಂತೆ ೫ ಕೆಜಿಗೆ ೧೭೦ ರೂ. (ಒಂದು ಯೂನಿಟ್‌ಗೆ)ಗಳನ್ನು ಪಡಿತರ ಚೀಟಿದಾರರ ಮುಖ್ಯಸ್ಥರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿತ್ತು.

ಬ್ಯಾಂಕ್‌ಗೆ ಫಲಾನುಭವಿಗಳ ಅಲೆದಾಟ: ಡಿಬಿಟಿ ಮೂಲಕ ಬರುತ್ತಿದ್ದ ಹಣ ಬಾರದೆ ಹೋಗಿರುವ ಬಗ್ಗೆ ಫಲಾನುಭವಿಗಳು ಬ್ಯಾಂಕ್‌ಗೆ, ಆಹಾರ ಇಲಾಖೆಗೆ ಹೋಗಿ ವಿಚಾರಿಸುತ್ತಿದ್ದಾರೆ. ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಬಿಡುಗಡೆಯಾದರೆ ಬರುತ್ತದೆ. ಅಲ್ಲಿಂದ ಬಿಡುಗಡೆಯಾಗಿದ್ದರೆ ನಮಗೆ ಗೊತ್ತಾಗುತ್ತದೆ ಹೊರತು ಬೇರೆ ಯಾವ ಮಾಹಿತಿ ಇಲ್ಲವೆಂದು ಹೇಳಿ ಕಳುಹಿಸುತ್ತಿದ್ದಾರೆ.

” ರಾಜ್ಯ ಸರ್ಕಾರದಿಂದ ಅರ್ಹಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆಯಾಗಲಿದೆ. ರಾಜ್ಯ ಸರ್ಕಾರವೇ ನೇರವಾಗಿ ಪಾವತಿಸುವ ಕಾರಣ ನಮ್ಮದೇನೂ ಪಾತ್ರವಿಲ್ಲ. ಹಣ ಜಮಾ ಆಗುತ್ತಿದ್ದಂತೆ ನಮಗೆ ಮಾಹಿತಿ ಗೊತ್ತಾಗಲಿದೆ. ಎನ್‌ಪಿಸಿಎಲ್‌ನಲ್ಲಿ ಮ್ಯಾಚ್ ಆಗಿದ್ದರೆ ಖಾತೆಗೆ ಜಮಾ ಆಗಲಿರುವುದು ತಿಳಿಯಲಿದೆ.”

 -ಕುಮುದಾ ಶರತ್, ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.

೭,೯೩೨ ಮಂದಿಗೆ ಸಿಗುತ್ತಿಲ್ಲ ನಗದು:  ಮೈಸೂರು ಜಿಲ್ಲೆಯ ೯ ತಾಲ್ಲೂಕುಗಳಿಂದ ೬,೬೮,೯೪೬ -ಲಾನುಭವಿಗಳಿದ್ದು, ೬,೬೧,೦೧೪ ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ಪಾವತಿಯಾಗುತ್ತಿದ್ದರೆ, ಉಳಿದ ೭,೯೩೨ ಮಂದಿಗೆ ಹಣ ಪಾವತಿಯಾಗುತ್ತಿಲ್ಲ. ಡಿಬಿಟಿ ಮಾಡಲು ಬ್ಯಾಂಕ್ ಖಾತೆ ಸಮಸ್ಯೆಯಾಗಿರುವ ಕಾರಣ ಈ ಫಲಾನುಭವಿಗಳಿಗೆ ಸೌಲಭ್ಯ ಸಿಗದಂತಾಗಿದೆ.

 

ಆಂದೋಲನ ಡೆಸ್ಕ್

Recent Posts

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

27 mins ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

48 mins ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

1 hour ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

2 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

2 hours ago

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

3 hours ago