Andolana originals

ಓದುಗರ ಪತ್ರ: ʼಅನ್ನ’ ಉಳ್ಳವರು ಮತ್ತು ಇಲ್ಲದವರ ನಡುವಿನ ಕಂದಕ

ಅಪ್ಪ-ಅವ್ವ ಕಳೆದುಹೋದ ಮಗನನ್ನು ಹುಡುಕಿ ಬರುತ್ತಾರೆ. ಅಪ್ಪ-ಅವ್ವನನ್ನು ನೋಡಿದ ಮಗ ಓಡಿ ಹೋಗುತ್ತಾನೆ. ಮಧ್ಯೆ ಒಂದು ಕಂದಕ ಹಾಗೆಯೇ ಇದೆ. ಅಪ್ಪ-ಅವ್ವನನ್ನು ನೋಡಿ ಓಡಿ ಹೋಗುವಂತೆ ಮಾಡಿದ್ದು, ಅದೇನು? ‘ಅನ್ನ’.

ಅಕ್ಕಿ ಮೂಟೆಯನ್ನು ಮುಟ್ಟುವ ಬಸವರಾಜು… ಒಂದು ಹಿಡಿ ಅನ್ನಕ್ಕೆ ಒಂದು ಕಡೆ ಮೂಟೆ ಮೂಟೆ ಪೇರಿಸಿರುವ ಅಕ್ಕಿ ಮೂಟೆ… ಮತ್ತೊಂದೆಡೆ ತುತ್ತು ಅನ್ನ ತಿನ್ನುವುದಕ್ಕೆ ಹಂಬಲಿಸುವ ಗುಡಿಸಲುಗಳು… ಇದರ ಮಧ್ಯೆ ನಡೆಯುವುದೇ ‘ಅನ್ನ’ ಸಿನೆಮಾ.

ಹನೂರು ಚನ್ನಪ್ಪ ಅವರ ಕತೆಯನ್ನು ನಿರ್ದೇಶಕ ಇಸ್ಲಾಹುದ್ದೀನ್ ಸಿನೆಮಾ ಮಾಡಿದ್ದಾರೆ. ಅನ್ನಕ್ಕಾಗಿ ಅಷ್ಟು ಆಸೆ ಪಡುವ ಪರಿಸ್ಥಿತಿ ಇಂದು ಇಲ್ಲ. ಆದರೆ ಇಲ್ಲಿಯತನಕ ಬರುವುದಕ್ಕೆ ಒಂದು ವರ್ಗ ಪಟ್ಟಪಾಡು, ಅದರ ದಾರುಣತೆಯನ್ನು ತೆರೆದಿಡುವ ಅನ್ನ ಸಿನೆಮಾ ನೋಡಿದ ಪ್ರೇಕ್ಷಕರನ್ನು ಅಲ್ಲಾಡಿಸಿಬಿಡುತ್ತದೆ. ಸಂಪತ್ ಮೈತ್ರೇಯ ಮತ್ತು ಪದ್ಮಶ್ರೀ ಅವರು ಸಿನಿಮಾದಲ್ಲಿ ಪಾತ್ರಗಳಲ್ಲಿ ಜೀವಿಸಿಬಿಟ್ಟಿದ್ದಾರೆ ಎನ್ನುವಂತಿದೆ. ಸಿನೆಮಾದುದ್ದಕ್ಕೂ ಯಾವ ಪಾತ್ರವೂ ಕಪ್ಪು ಬಿಳುಪಾಗಿರದೇ ಅಪಟ ಮನುಷ್ಯರಾಗಿ ಕಾಣಿಸುವುದರಿಂದ ಇದು ಭಿನ್ನವಾಗಿ ಕಾಣುತ್ತದೆ. ಬಹುತೇಕ ಚಾಮರಾಜನಗರ ಭಾಗದ ಕಲಾವಿದರನ್ನೇ ಆಯ್ಕೆ ಮಾಡಿಕೊಂಡಿರುವುದು ಅಲ್ಲಿನ ಭಾಷಾ ಸೊಗಡನ್ನು ಅದು ಇರುವ ಹಾಗೆಯೇ ಅನುಭವಕ್ಕೆ ಬರುತ್ತದೆ. ‘ನನ್ನ ಮಗ ಮಾದೇವ ಚಿನ್ನ ಕೇಳಿಲ್ಲ ಬೆಳ್ಳಿ ಕೇಳಿಲ್ಲ. ಅನ್ನ ಕೇಳ ಅದ್ದೂ ಕೊಡಕ್ಕಾಗಿಲ್ಲ’ ಅಂತ ಹೇಳುವ ತಂದೆಯ ಮಾತು’, ‘ನೀನು ಆಟ ಸಾಮಾನು ತೆಕ್ಕೊಟ್ಟಿದ್ರೆ ಒಯ್ದಿದ್ದಾ ಮಗ’ ಎನ್ನುವ ತಾಯಿಯ ಮಾತು ಎಂಥವರನ್ನೂ ಸಂಕಟಕ್ಕೆ ಒಯ್ಯುತ್ತದೆ. ಒಂದೇ ದೃಶ್ಯದಲ್ಲಿ ಮಗನನ್ನು ಕಳೆದುಕೊಂಡ ಇಬ್ಬರು ತಾಯಿಯರು ಬದುಕಿನ ಸಂದಿಗ್ಧತೆಯನ್ನು ಎದುರಿಗಿಟ್ಟರೆ, ಎಲ್ಲಿಗೆ ಹೋಗಬೇಕು ಎನ್ನುವ ಮಾದೇವನ ಆಯ್ಕೆಯ ಸಂಕಟದಲ್ಲಿ ಬಡತನ ದಾರುಣತೆ ಅನುಭವಕ್ಕೆ ಬರುತ್ತದೆ. ಅನ್ನ ಕೊಡಲಿಕ್ಕಾಗದೇ ತನ್ನ ಮಗನನ್ನೇ ಬೇಡುವ ಅಪ್ಪ-ಅವ್ವ ನೋಡುಗರನ್ನು ಕಾಡುತ್ತಲೇ ಇರುತ್ತಾರೆ. ಅನ್ನಕ್ಕಾಗಿ ಅಪ್ಪ-ಅವ್ವನನ್ನೆ ಬಿಟ್ಟು ಓಡಿ ಹೋಗುವ ಮಾದೇವನಿಗೆ ಅವರ ಮೇಲೆ ಅಪಾರ ಪ್ರೀತಿಯಿದೆ. ಅವರನ್ನು ನೆನಪಿಸಿಕೊಂಡು ಅಳುತ್ತಾನೆ. ಆದರೆ ಅವರ ಬಳಿ ಹೋಗಲಾರ. ಇಂಥ ಮಾದೇವರು ನಮ್ಮ ಸುತ್ತಲೂ ಕಾಣುತ್ತಾರೆ.
-ಚಿತ್ರಾ ವೆಂಕಟರಾಜು, ಚಾಮರಾಜನಗರ

 

ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago