Andolana originals

ಓದುಗರ ಪತ್ರ: ʼಅನ್ನ’ ಉಳ್ಳವರು ಮತ್ತು ಇಲ್ಲದವರ ನಡುವಿನ ಕಂದಕ

ಅಪ್ಪ-ಅವ್ವ ಕಳೆದುಹೋದ ಮಗನನ್ನು ಹುಡುಕಿ ಬರುತ್ತಾರೆ. ಅಪ್ಪ-ಅವ್ವನನ್ನು ನೋಡಿದ ಮಗ ಓಡಿ ಹೋಗುತ್ತಾನೆ. ಮಧ್ಯೆ ಒಂದು ಕಂದಕ ಹಾಗೆಯೇ ಇದೆ. ಅಪ್ಪ-ಅವ್ವನನ್ನು ನೋಡಿ ಓಡಿ ಹೋಗುವಂತೆ ಮಾಡಿದ್ದು, ಅದೇನು? ‘ಅನ್ನ’.

ಅಕ್ಕಿ ಮೂಟೆಯನ್ನು ಮುಟ್ಟುವ ಬಸವರಾಜು… ಒಂದು ಹಿಡಿ ಅನ್ನಕ್ಕೆ ಒಂದು ಕಡೆ ಮೂಟೆ ಮೂಟೆ ಪೇರಿಸಿರುವ ಅಕ್ಕಿ ಮೂಟೆ… ಮತ್ತೊಂದೆಡೆ ತುತ್ತು ಅನ್ನ ತಿನ್ನುವುದಕ್ಕೆ ಹಂಬಲಿಸುವ ಗುಡಿಸಲುಗಳು… ಇದರ ಮಧ್ಯೆ ನಡೆಯುವುದೇ ‘ಅನ್ನ’ ಸಿನೆಮಾ.

ಹನೂರು ಚನ್ನಪ್ಪ ಅವರ ಕತೆಯನ್ನು ನಿರ್ದೇಶಕ ಇಸ್ಲಾಹುದ್ದೀನ್ ಸಿನೆಮಾ ಮಾಡಿದ್ದಾರೆ. ಅನ್ನಕ್ಕಾಗಿ ಅಷ್ಟು ಆಸೆ ಪಡುವ ಪರಿಸ್ಥಿತಿ ಇಂದು ಇಲ್ಲ. ಆದರೆ ಇಲ್ಲಿಯತನಕ ಬರುವುದಕ್ಕೆ ಒಂದು ವರ್ಗ ಪಟ್ಟಪಾಡು, ಅದರ ದಾರುಣತೆಯನ್ನು ತೆರೆದಿಡುವ ಅನ್ನ ಸಿನೆಮಾ ನೋಡಿದ ಪ್ರೇಕ್ಷಕರನ್ನು ಅಲ್ಲಾಡಿಸಿಬಿಡುತ್ತದೆ. ಸಂಪತ್ ಮೈತ್ರೇಯ ಮತ್ತು ಪದ್ಮಶ್ರೀ ಅವರು ಸಿನಿಮಾದಲ್ಲಿ ಪಾತ್ರಗಳಲ್ಲಿ ಜೀವಿಸಿಬಿಟ್ಟಿದ್ದಾರೆ ಎನ್ನುವಂತಿದೆ. ಸಿನೆಮಾದುದ್ದಕ್ಕೂ ಯಾವ ಪಾತ್ರವೂ ಕಪ್ಪು ಬಿಳುಪಾಗಿರದೇ ಅಪಟ ಮನುಷ್ಯರಾಗಿ ಕಾಣಿಸುವುದರಿಂದ ಇದು ಭಿನ್ನವಾಗಿ ಕಾಣುತ್ತದೆ. ಬಹುತೇಕ ಚಾಮರಾಜನಗರ ಭಾಗದ ಕಲಾವಿದರನ್ನೇ ಆಯ್ಕೆ ಮಾಡಿಕೊಂಡಿರುವುದು ಅಲ್ಲಿನ ಭಾಷಾ ಸೊಗಡನ್ನು ಅದು ಇರುವ ಹಾಗೆಯೇ ಅನುಭವಕ್ಕೆ ಬರುತ್ತದೆ. ‘ನನ್ನ ಮಗ ಮಾದೇವ ಚಿನ್ನ ಕೇಳಿಲ್ಲ ಬೆಳ್ಳಿ ಕೇಳಿಲ್ಲ. ಅನ್ನ ಕೇಳ ಅದ್ದೂ ಕೊಡಕ್ಕಾಗಿಲ್ಲ’ ಅಂತ ಹೇಳುವ ತಂದೆಯ ಮಾತು’, ‘ನೀನು ಆಟ ಸಾಮಾನು ತೆಕ್ಕೊಟ್ಟಿದ್ರೆ ಒಯ್ದಿದ್ದಾ ಮಗ’ ಎನ್ನುವ ತಾಯಿಯ ಮಾತು ಎಂಥವರನ್ನೂ ಸಂಕಟಕ್ಕೆ ಒಯ್ಯುತ್ತದೆ. ಒಂದೇ ದೃಶ್ಯದಲ್ಲಿ ಮಗನನ್ನು ಕಳೆದುಕೊಂಡ ಇಬ್ಬರು ತಾಯಿಯರು ಬದುಕಿನ ಸಂದಿಗ್ಧತೆಯನ್ನು ಎದುರಿಗಿಟ್ಟರೆ, ಎಲ್ಲಿಗೆ ಹೋಗಬೇಕು ಎನ್ನುವ ಮಾದೇವನ ಆಯ್ಕೆಯ ಸಂಕಟದಲ್ಲಿ ಬಡತನ ದಾರುಣತೆ ಅನುಭವಕ್ಕೆ ಬರುತ್ತದೆ. ಅನ್ನ ಕೊಡಲಿಕ್ಕಾಗದೇ ತನ್ನ ಮಗನನ್ನೇ ಬೇಡುವ ಅಪ್ಪ-ಅವ್ವ ನೋಡುಗರನ್ನು ಕಾಡುತ್ತಲೇ ಇರುತ್ತಾರೆ. ಅನ್ನಕ್ಕಾಗಿ ಅಪ್ಪ-ಅವ್ವನನ್ನೆ ಬಿಟ್ಟು ಓಡಿ ಹೋಗುವ ಮಾದೇವನಿಗೆ ಅವರ ಮೇಲೆ ಅಪಾರ ಪ್ರೀತಿಯಿದೆ. ಅವರನ್ನು ನೆನಪಿಸಿಕೊಂಡು ಅಳುತ್ತಾನೆ. ಆದರೆ ಅವರ ಬಳಿ ಹೋಗಲಾರ. ಇಂಥ ಮಾದೇವರು ನಮ್ಮ ಸುತ್ತಲೂ ಕಾಣುತ್ತಾರೆ.
-ಚಿತ್ರಾ ವೆಂಕಟರಾಜು, ಚಾಮರಾಜನಗರ

 

ಆಂದೋಲನ ಡೆಸ್ಕ್

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

2 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

2 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

2 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

3 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago