ಮೈಸೂರು: ಮೈಸೂರಿನ ಗಗನ್ ಪಿಕ್ಚರ್ಸ್ ನಿರ್ಮಿಸಿರುವ ‘ಅನ್ನ’ ಕನ್ನಡ ಚಲನಚಿತ್ರ ೫೦ ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಇನ್ನು ಹೆಚ್ಚಿನ ಜನರನ್ನು ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಚಿತ್ರಕ್ಕೆ ಶೇ. ೧೦೦ರಷ್ಟು ತೆರಿಗೆ ವಿನಾಯಿತಿ ನೀಡಿದೆ ಎಂದು ಚಿತ್ರದ ನಿರ್ದೇಶಕ ಎನ್. ಎಸ್. ಇಸ್ಲಾವುದ್ದೀನ್ ಹರ್ಷ ವ್ಯಕ್ತಪಡಿಸಿದರು.
ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರೇಕ್ಷಕರಷ್ಟೇ ಅಲ್ಲದೆ, ನಗರ ಪ್ರದೇಶದ ಪ್ರೇಕ್ಷಕರೂ ಅನ್ನ ಚಲನಚಿತ್ರಕ್ಕೆ ಮನ ಸೋತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಮೈಸೂರು ಮತ್ತು ಚಾಮರಾಜನಗರದಲ್ಲಿ ಅ.
೨೫ರಂದು ಚಿತ್ರ ೫೦ ದಿನಗಳನ್ನು ಪೂರೈಸುತ್ತಿ ದ್ದು, ಚಿತ್ರಕ್ಕೆ ತೆರಿಗೆ ವಿನಾಯಿತಿ ದೊರೆತಿರುವುದರಿಂದ ಮತ್ತಷ್ಟು ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರಲು ಅನುಕೂಲವಾಗಿದೆ. ಶುಕ್ರವಾರದಿಂದ ಮೈಸೂರಿನ ಪದ್ಮಾ ಹಾಗೂ ಹಾಸನದ ಪೃಥ್ವಿ ಚಿತ್ರಮಂದಿರಗಳಲ್ಲೂ ಅನ್ನ ಚಿತ್ರ ಪ್ರದರ್ಶನವಾಗಲಿದೆ. ರಾಜ್ಯದ ಬೇರೆ ಬೇರೆ ಕಡೆಗಳಿಂದ ಲೂ ಚಿತ್ರ ಪ್ರದರ್ಶನಕ್ಕೆ ಬೇಡಿಕೆ ಇರುವುದರಿಂದ ೫೦ ದಿನಗಳ ಬಳಿಕ ಇನ್ನೂ ೨೦ರಿಂದ ೨೫ ಚಿತ್ರಮಂದಿರಗಳಲ್ಲೂ ಅನ್ನ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುವುದು ಎಂದರು. ಚಿತ್ರ ಕಲಾವಿದರಾದ ಸಿ. ಆರ್. ಪದ್ಮಶ್ರೀ, ಭುವನ ಮೈಸೂರು, ಸಂಭಾಷಣಕಾರ ಸಿದ್ದು ಪ್ರಸನ್ನ, ಚಿತ್ರದ ನಿರ್ಮಾಪಕ ಎಸ್. ಬಸವರಾಜು, ಸಹಾಯಕ ನಿರ್ದೇಶಕ ಶಿಶಿರ್, ಮಹೇಶ್, ಮಹದೇವ್, ಕಾತ್ಯಾಯಿನಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…