Andolana originals

ಶೇ.100ರಷ್ಟು ತೆರಿಗೆ ವಿನಾಯಿತಿ ನೀಡಿದ ಸರ್ಕಾರ; ಅರ್ಧ ಶತಕ ಬಾರಿಸಿದ ಅನ್ನ

ಮೈಸೂರು: ಮೈಸೂರಿನ ಗಗನ್ ಪಿಕ್ಚರ್ಸ್ ನಿರ್ಮಿಸಿರುವ ‘ಅನ್ನ’ ಕನ್ನಡ ಚಲನಚಿತ್ರ ೫೦ ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಇನ್ನು ಹೆಚ್ಚಿನ ಜನರನ್ನು ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಚಿತ್ರಕ್ಕೆ ಶೇ. ೧೦೦ರಷ್ಟು ತೆರಿಗೆ ವಿನಾಯಿತಿ ನೀಡಿದೆ ಎಂದು ಚಿತ್ರದ ನಿರ್ದೇಶಕ ಎನ್. ಎಸ್. ಇಸ್ಲಾವುದ್ದೀನ್ ಹರ್ಷ ವ್ಯಕ್ತಪಡಿಸಿದರು.

ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರೇಕ್ಷಕರಷ್ಟೇ ಅಲ್ಲದೆ, ನಗರ ಪ್ರದೇಶದ ಪ್ರೇಕ್ಷಕರೂ ಅನ್ನ ಚಲನಚಿತ್ರಕ್ಕೆ ಮನ ಸೋತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಮೈಸೂರು ಮತ್ತು ಚಾಮರಾಜನಗರದಲ್ಲಿ ಅ.

೨೫ರಂದು ಚಿತ್ರ ೫೦ ದಿನಗಳನ್ನು ಪೂರೈಸುತ್ತಿ ದ್ದು, ಚಿತ್ರಕ್ಕೆ ತೆರಿಗೆ ವಿನಾಯಿತಿ ದೊರೆತಿರುವುದರಿಂದ ಮತ್ತಷ್ಟು ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರಲು ಅನುಕೂಲವಾಗಿದೆ. ಶುಕ್ರವಾರದಿಂದ ಮೈಸೂರಿನ ಪದ್ಮಾ ಹಾಗೂ ಹಾಸನದ ಪೃಥ್ವಿ ಚಿತ್ರಮಂದಿರಗಳಲ್ಲೂ ಅನ್ನ ಚಿತ್ರ ಪ್ರದರ್ಶನವಾಗಲಿದೆ. ರಾಜ್ಯದ ಬೇರೆ ಬೇರೆ ಕಡೆಗಳಿಂದ ಲೂ ಚಿತ್ರ ಪ್ರದರ್ಶನಕ್ಕೆ ಬೇಡಿಕೆ ಇರುವುದರಿಂದ ೫೦ ದಿನಗಳ ಬಳಿಕ ಇನ್ನೂ ೨೦ರಿಂದ ೨೫ ಚಿತ್ರಮಂದಿರಗಳಲ್ಲೂ ಅನ್ನ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುವುದು ಎಂದರು. ಚಿತ್ರ ಕಲಾವಿದರಾದ ಸಿ. ಆರ್. ಪದ್ಮಶ್ರೀ, ಭುವನ ಮೈಸೂರು, ಸಂಭಾಷಣಕಾರ ಸಿದ್ದು ಪ್ರಸನ್ನ, ಚಿತ್ರದ ನಿರ್ಮಾಪಕ ಎಸ್. ಬಸವರಾಜು, ಸಹಾಯಕ ನಿರ್ದೇಶಕ ಶಿಶಿರ್, ಮಹೇಶ್, ಮಹದೇವ್, ಕಾತ್ಯಾಯಿನಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

andolana

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

6 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

6 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

6 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

7 hours ago