ಗಿರೀಶ್ ಹುಣಸೂರು
ಮೈಸೂರು: ಫೆಂಗಲ್ ಚಂಡಮಾರುತದ ಹೊಡೆತದಿಂದ ತತ್ತರಿಸಿ ಹೋಗಿರುವ ಜನತೆ ವಾರಾಂತ್ಯದ ವೇಳೆಗೆ ಪ್ರಕೃತಿಯ ಮತ್ತೊಂದು ಹೊಡೆತಕ್ಕೆ ಸಿದ್ಧರಾಗಬೇಕಾಗಿದೆ.
ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದ್ದು, ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸು ತ್ತಿದ್ದಂತೆಯೇ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಆದರೆ, ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪರಿಣಾಮದಿಂದ ಅಲ್ಲಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ.
ಈಗಿನ ವಿದ್ಯಮಾನಗಳ ಪ್ರಕಾರ ಡಿ.೭ರ ವೇಳೆಗೆ ಬಂಗಾಳಕೊಲ್ಲಿಯ ನಿಕೋಬಾರ್ ದ್ವೀಪ ಪ್ರದೇಶದಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಆದರೆ, ಆ ವೇಳೆ ಗಾಳಿಯ ಒತ್ತಡದ ಮೇಲೆ ವಾಯುಭಾರ ಕುಸಿತದ ಪರಿಣಾಮವನ್ನು ಅಂದಾಜಿಸಬಹುದಾಗಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಡಿ.೪ರಂದು ಬೆಳಿಗ್ಗೆ ೮ ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ ಕೇರಳದ ಕಾಸರಗೋಡು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈಗಿನ ಮಳೆಯ ವಾತಾವರಣವು ಮಧ್ಯಾಹ್ನದ ನಂತರ ಕಡಿಮೆ ಯಾಗುವ ಮುನ್ಸೂಚನೆ ಇದೆ. ಈಗಿನಂತೆ ಡಿ.೪ರಿಂದ ೨ ದಿನಗಳವರೆಗೆ ಉತ್ತರ ಕನ್ನಡ ಜಿಯ ಅಲ್ಲಲ್ಲಿ ಮಳೆ ಮುನ್ಸೂಚನೆ ಇದ್ದು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಗಳಲ್ಲಿ ಮೋಡ ಹಾಗೂ ಒಳನಾಡು ಕಡೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಡಿ.೮ರವರೆಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಕೊಡಗು ಜಿಯಲ್ಲಿ ಮಳೆ ಕಡಿಮೆಯಾಗಿ ಮೋಡದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಜಿಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಭಾಗದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಗಳಲ್ಲಿ ಮೋಡ ಆವರಿಸಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ.೬ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಹಾವೇರಿ-ದಾವಣಗೆರೆ ಗಡಿ ಭಾಗಗಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದಂತೆ ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ತುಮಕೂರು(ಪಾವಗಡ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ ಎಂದು ನಾಗನಹಳ್ಳಿ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ತಾಂತ್ರಿಕ ಅಧಿಕಾರಿ ಡಾ.ಜಿ.ವಿ. ಸುಮಂತ್ ಕುಮಾರ್ ತಿಳಿಸಿದ್ದಾರೆ.
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…