ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ.
ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದ್ದ ಗಂಡಾನೆಯ ಎರಡು ದಂತಗಳು ಪತ್ತೆಯಾಗಿತ್ತು.
ಇದಾದ ಎರಡೇ ದಿನಕ್ಕೆ ಆಗಸ್ಟ್ 30ರಂದು ಬೈಲೂರು ವನ್ಯಜೀವಿ ವಲಯ ಪಿಜಿ ಪಾಳ್ಯ ಮಾವತ್ತೂರು ಶಾಖೆ ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆ ಮೃತಪಟ್ಟ ಎಂಟು ದಿನಗಳ ನಂತರ ಪತ್ತೆಯಾಗಿತ್ತು.
ಇದೀಗ ಸೆಪ್ಟೆಂಬರ್ 16ರಂದು ಬಿ.ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವುದು ಕಂಡುಬಂದಿದೆ. ಹೆಣ್ಣಾನೆ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಿ ಆರ್ ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಎಸಿಎಫ್ ಕೆ ಸುರೇಶ್, ಆರ್ ಎಫ್ ಒ ಪ್ರಮೋದ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿ ಡಾ. ವಾಸಿಂ ಮಿರ್ಜಾರವರು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವನ್ಯ ಜೀವಿ ಪ್ರಿಯರಲ್ಲಿ ಆತಂಕ: ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ 20 ದಿನಗಳ ಅವಧಿಯಲ್ಲಿ ನಾಲ್ಕು ಆನೆಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆನೆಗಳು ಸಾಲುಸಾಲಾಗಿ ಮೃತಪಡುತ್ತಿದ್ದರು ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಬೇಕು ಇಲ್ಲದಿದ್ದರೆ ಇನ್ನಷ್ಟು ಆನೆಗಳು ಸಾಯುವುದರಲ್ಲಿ ಯಾವುದೇ ಅನುಮಾನವಿಲ್ಲ ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಮುಂದೆ ಆನೆಗಳು ಸಾಯದಂತೆ ಎಚ್ಚರ ವಹಿಸಬೇಕು ಎಂದು ವನ್ಯಜೀವಿ ಪ್ರಿಯರು ಒತ್ತಾಯಿಸಿದ್ದಾರೆ.
ಬೈಲೂರು ವನ್ಯಜೀವಿ ವಲಯದ ಪಿಜಿ ಪಾಳ್ಯ ಮಾವತ್ತೂರು ಎ ಮತ್ತು ಬಿ ಗಸ್ತಿನಲ್ಲಿ 15 ದಿನಗಳ ಅಂತರದಲ್ಲಿ ಎರಡು ಆನೆಗಳು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…