Andolana originals

ಹನೂರು ಬಿಆರ್‌ಟಿ ವ್ಯಾಪ್ತಿಯಲ್ಲಿ ಹೆಣ್ಣಾನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ.

ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದ್ದ ಗಂಡಾನೆಯ ಎರಡು ದಂತಗಳು ಪತ್ತೆಯಾಗಿತ್ತು.

ಇದಾದ ಎರಡೇ ದಿನಕ್ಕೆ ಆಗಸ್ಟ್ 30ರಂದು ಬೈಲೂರು ವನ್ಯಜೀವಿ ವಲಯ ಪಿಜಿ ಪಾಳ್ಯ ಮಾವತ್ತೂರು ಶಾಖೆ ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆ ಮೃತಪಟ್ಟ ಎಂಟು ದಿನಗಳ ನಂತರ ಪತ್ತೆಯಾಗಿತ್ತು.

ಇದೀಗ ಸೆಪ್ಟೆಂಬರ್ 16ರಂದು ಬಿ.ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವುದು ಕಂಡುಬಂದಿದೆ. ಹೆಣ್ಣಾನೆ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಿ ಆರ್ ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಎಸಿಎಫ್ ಕೆ ಸುರೇಶ್, ಆರ್ ಎಫ್ ಒ ಪ್ರಮೋದ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿ ಡಾ. ವಾಸಿಂ ಮಿರ್ಜಾರವರು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವನ್ಯ ಜೀವಿ ಪ್ರಿಯರಲ್ಲಿ ಆತಂಕ: ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ 20 ದಿನಗಳ ಅವಧಿಯಲ್ಲಿ ನಾಲ್ಕು ಆನೆಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆನೆಗಳು ಸಾಲುಸಾಲಾಗಿ ಮೃತಪಡುತ್ತಿದ್ದರು ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಬೇಕು ಇಲ್ಲದಿದ್ದರೆ ಇನ್ನಷ್ಟು ಆನೆಗಳು ಸಾಯುವುದರಲ್ಲಿ ಯಾವುದೇ ಅನುಮಾನವಿಲ್ಲ ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಮುಂದೆ ಆನೆಗಳು ಸಾಯದಂತೆ ಎಚ್ಚರ ವಹಿಸಬೇಕು ಎಂದು ವನ್ಯಜೀವಿ ಪ್ರಿಯರು ಒತ್ತಾಯಿಸಿದ್ದಾರೆ.

ಬೈಲೂರು ವನ್ಯಜೀವಿ ವಲಯದ ಪಿಜಿ ಪಾಳ್ಯ ಮಾವತ್ತೂರು ಎ ಮತ್ತು ಬಿ ಗಸ್ತಿನಲ್ಲಿ 15 ದಿನಗಳ ಅಂತರದಲ್ಲಿ ಎರಡು ಆನೆಗಳು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

35 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago