೮ ಗಂಟೆ ಮೊದಲು ಟಿಕೆಟ್ ರದ್ದಾಗದಿದ್ದರೆ ಸಂಪೂರ್ಣ ಹಣ ಖೋತಾ
ಹೊಸದಿಲ್ಲಿ: ರೈಲು ಪ್ರಯಾಣ ಆರಂಭವಾಗುವ ೮ ಗಂಟೆ ಮೊದಲು ನಿಮ್ಮ ಟಿಕೆಟ್ ರದ್ದುಪಡಿಸದಿದ್ದರೆ ಟಿಕೆಟ್ನ ಸಂಪೂರ್ಣ ಹಣ ಖೋತಾ ಆಗಲಿದೆ.
ಟಿಕೆಟ್ ವಿತರಣೆ ಮತ್ತು ಮರು ಪಾವತಿ ನೀತಿಯಲ್ಲಿ ಪ್ರಮುಖ ಬದಲಾವಣೆ ತರುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಈ ಗಮನಾರ್ಹ ಬದಲಾವಣೆಯನ್ನು ಬುಧವಾರದಿಂದ ಜಾರಿಗೆ ತಂದಿದೆ. ಏ.೧ರಿಂದ ನೀವು ನಿಮ್ಮ ಪ್ರಯಾಣ ರದ್ದುಗೊಳಿಸ ಬೇಕಾದರೆ ರೈಲು ಪ್ರಯಾಣ ಆರಂಭವಾಗುವ ೮ ಗಂಟೆ ಮೊದಲು ಟಿಕೆಟ್ ರದ್ದು ಮಾಡಬೇಕಾಗುತ್ತದೆ.
ನಿರ್ಗಮನಕ್ಕೆ ೨೪ ಗಂಟೆಗಳಿಂದ ೮ ಗಂಟೆಗಳ ಮೊದಲು ಮಾಡಿದ ರದ್ದತಿಗೆ, ಶೇ.೫೦ರಷ್ಟು ಮರು ಪಾವತಿಗೆ ಅರ್ಹರಾಗಿರುತ್ತಾರೆ. ೭೨ ಗಂಟೆಗಳಿಂದ ೨೪ ಗಂಟೆಗಳ ಮೊದಲು ರದ್ದತಿ ಮಾಡಿದರೆ, ಶೇ.೭೫ರಷ್ಟು ಮರು ಪಾವತಿಯನ್ನು ಒದಗಿಸಲಾಗುತ್ತದೆ. ಇದಕ್ಕೂ ಮೊದಲು, ಪ್ರಯಾಣಕ್ಕೆ ೭೨ ಗಂಟೆಗಳ ಮೊದಲು ರದ್ದುಗೊಳಿಸಿದಾಗ ಪೂರ್ಣ ಮರುಪಾವತಿಯನ್ನು ಪಡೆಯುತ್ತಿದ್ದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ನೆಟ್ವರ್ಕ್ ಅನ್ನು ಮೇಲ್ದರ್ಜೆಗೇರಿಸುವುದು ಮತ್ತು ಪ್ರಯಾಣಿಕರ ಸೇವೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.
ಪರಿಷ್ಕೃತ ಟಿಕೆಟ್ ರದ್ದತಿ ನಿಯಮ: ನಿರ್ಗಮನಕ್ಕೆ ೭೨ ಗಂಟೆಗಳಿಗಿಂತ ಮೊದಲು ರದ್ದುಪಡಿಸಿದ ದೃಢೀಕೃತ ಟಿಕೆಟ್ಗಳಿಗೆ, ಪ್ರಯಾಣಿಕರಿಗೆ ಗರಿಷ್ಟ ಮರುಪಾವತಿ ದೊರೆಯುತ್ತದೆ ಮತ್ತು ಪ್ರತಿ ಪ್ರಯಾಣಿಕರಿಗೆ ಕನಿಷ್ಠ ಫ್ಲಾಟ್ ರದ್ದತಿ ಶುಲ್ಕವನ್ನು ಮಾತ್ರ ಕಡಿತಗೊಳಿಸಲಾಗುತ್ತದೆ ಎಂದರು. ರೈಲ್ವೆ ಇಲಾಖೆ ಆಫ್ಲೈನ್ ಟಿಕೆಟ್ ಹೊಂದಿರುವವರಿಗೆ ರದ್ದತಿ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಪ್ರಯಾಣಿಕರು ಈಗ ಯಾವುದೇ ರೈಲ್ವೆ ನಿಲ್ದಾಣದಿಂದ ಟಿಕೆಟ್ಗಳನ್ನು ರದ್ದುಗೊಳಿಸಬಹುದು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…