Andolana originals

ಕೆ.ಜಿ.ಹಳ್ಳಿ ಆಸ್ಪತ್ರೆಗೆ ವೈದ್ಯರನ್ನು ನೇಮಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಜಿ.ಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 5 ವರ್ಷಗಳಿಂದ ವೈದ್ಯರೇ ಇಲ್ಲದೇ ವೈದ್ಯಕೀಯ ಸೌಲಭ್ಯಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ.
20 ವರ್ಷಗಳ ಹಿಂದೆ ಲಕ್ಷಾಂತರ ರೂ. ವ್ಯಯಿಸಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅಲ್ಲದೆ ಆಗಾಗ್ಗೆ ಆಸ್ಪತ್ರೆಯ ನವೀಕರಣವನ್ನೂ ಮಾಡಲಾಗಿದೆ. ಆದರೆ ಕಳೆದ 5 ವರ್ಷಗಳಿಂದ ಇಲ್ಲಿಗೆ ಯಾವುದೇ ವೈದ್ಯರು
ನಿಯೋಜನೆಯಾಗದೆ ಸಾರ್ವಜನಿಕರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಾದರೂ ಎಚ್.ಡಿ.ಕೋಟೆ ಅಥವಾ ಮೈಸೂರಿಗೆ ಹೋಗಿಬರಬೇಕಿದೆ. ಸುಮಾರು 4 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಈ ಗ್ರಾಮದಲ್ಲಿ ಬಹುಪಾಲು ಬಡ ಕುಟುಂಬಗಳಿವೆ. ಆದ್ದರಿಂದ ಈ ಆಸ್ಪತ್ರೆಗೆ ವೈದ್ಯರನ್ನು ನೇಮಿಸಿ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಸಾಕಷ್ಟು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕ್ಷೇತ್ರದ ಶಾಸಕರು ಈ ಬಗ್ಗೆ ಗಮನಹರಿಸಿ ಈ ಆಸ್ಪತ್ರೆಗೆ ವೈದ್ಯರೊಬ್ಬರನ್ನು ನೇಮಕ ಮಾಡಬೇಕಿದೆ.

-ಕೆ.ಎಸ್.ಸುರೇಶ್, ಕೆ.ಜಿ.ಹಳ್ಳಿ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

3 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

4 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

7 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

7 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

7 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

7 hours ago