Andolana originals

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ

ಭೇರ್ಯ ಮಹೇಶ್

ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಇಲಾಖೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರಕ್ಕೆ (ಮೊದಲ ಬಾರಿಗೆ ೨೦೨೪- ೨೫ನೇ ಸಾಲಿನಲ್ಲಿ) ಎರಡನೇ ಬಾರಿಗೆ ಆಯ್ಕೆಯಾಗುವ ಮೂಲಕ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದೆ.

ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿ, ಪಾರದರ್ಶಕ ಆಡಳಿತ ಮತ್ತು ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ತೋರಿದ ಅಪ್ರತಿಮ ಕಾರ್ಯಕ್ಷಮತೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಯಶಸ್ಸಿನ ಹಿಂದಿನ ಶಕ್ತಿಗಳು: ಈ ಐತಿಹಾಸಿಕ ಸಾಧನೆಯ ಹಿಂದೆ ಗ್ರಾಮ ಪಂಚಾಯಿತಿಯ ನೋಡಲ್ ಅಧಿಕಾರಿ ಮೇಘನಾ ಅವರ ಮಾರ್ಗ ದರ್ಶನ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ.ಟಿ.ಸಂತೋಷ್ ಅವರ ದಕ್ಷ ಕಾರ್ಯವೈಖರಿ ಅಡಗಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಸದಸ್ಯರು ಹಾಗೂ ಸಿಬ್ಬಂದಿ ವರ್ಗದ ಸಂಘಟಿತ ಪ್ರಯತ್ನದಿಂದಾಗಿ ಅರ್ಜುನಹಳ್ಳಿ ಪಂಚಾಯಿತಿಯು ಮಾದರಿ ಪಂಚಾಯಿತಿಯಾಗಿ ಹೊರಹೊಮ್ಮಿದೆ.

ಅಧಿಕಾರಿಗಳ ಹರ್ಷ: ಈ ಸಂದರ್ಭದಲ್ಲಿ ಮಾತನಾಡಿದ ಆಡಳಿತ ಅಧಿಕಾರಿ ಮೇಘನಾ ಅವರು, ಸತತ ಎರಡನೇ ಬಾರಿಗೆ ಈ ಪ್ರಶಸ್ತಿ ಲಭಿಸಿರುವುದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಇದು ಸಾರ್ವಜನಿಕರ ಸಹಕಾರ ಮತ್ತು ಆಡಳಿತ ಮಂಡಳಿಯ ಶ್ರಮಕ್ಕೆ ಸಂದ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.

ಆಯ್ಕೆಗೆ ಕಾರಣವಾದ ಪ್ರಮುಖ ಅಂಶಗಳು: 

ಸ್ವಚ್ಛ ಭಾರತ್ ಮಿಷನ್: ಗ್ರಾಮದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಯಶಸ್ವಿ ಅನುಷ್ಠಾನ

ಜಲ ಜೀವನ್ ಮಿಷನ್: ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿರುವುದು

ತೆರಿಗೆ ಸಂಗ್ರಹ: ಶೇ.೧೦೦ ರಷ್ಟು ತೆರಿಗೆ ಸಂಗ್ರಹಣೆ ಮಾಡುವ ಮೂಲಕ ಆರ್ಥಿಕ ಶಿಸ್ತು ಕಾಪಾಡಿರುವುದು

ಡಿಜಿಟಲೀಕರಣ: ಪಂಚಾಯತ್ ಸೌಲಭ್ಯಗಳನ್ನು ಆನ್‌ಲೈನ್ ಮೂಲಕ ಶೀಘ್ರವಾಗಿ ಜನರಿಗೆ ತಲುಪಿಸುತ್ತಿರುವುದು.

ಮೂಲಸೌಕರ್ಯ: ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಸುಸಜ್ಜಿತ ನಿರ್ವಹಣೆ

” ಸರ್ಕಾರದ ಪ್ರತಿಯೊಂದು ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದೇ ನಮ್ಮ ಗುರಿ. ಹಾಗಾಗಿ ಅರ್ಜುನಹಳ್ಳಿ ಗ್ರಾಮ ಪಂಚಾಯತಿ ೨೦೨೩-೨೪ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿ ಪ್ರಶಸ್ತಿ ಪಡೆದಿತ್ತು. ಪ್ರಶಸ್ತಿಯ ನಗದು ಹಣ ಐದು ಲಕ್ಷ ರೂ. ಅನ್ನು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಅಭಿವೃದ್ಧಿಗೆ ಬಳಸಲಾಗಿದೆ. ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಲು ಸಹಕರಿಸಿದ ಮೇಲಧಿಕಾರಿಗಳಿಗೆ ಮತ್ತು ಗ್ರಾಮಸ್ಥರಿಗೆ ಧನ್ಯವಾದಗಳು.”

ಜಿ.ಟಿ ಸಂತೋಷ್, ಅರ್ಜುನಹಳ್ಳಿ ಗ್ರಾಪಂ ಪಿಡಿಒ

” ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯು ಗ್ರಾಮದ ಜನರಲ್ಲಿ ಹರ್ಷ ತಂದಿದ್ದು, ಅರ್ಜುನಹಳ್ಳಿ ಗ್ರಾಮ ಪಂಚಾಯಿತಿಯು ತಾಲ್ಲೂಕಿಗೆ ಮಾತ್ರವಲ್ಲದೆ ಜಿಲ್ಲೆಗೇ ಮಾದರಿಯಾಗಿದೆ. ಕೆ.ಆರ್.ನಗರ ತಾಲ್ಲೂಕಿನಲ್ಲಿ ಮುಂದೆಯೂ ಇದೇ ರೀತಿಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳು ಸಾಧನೆಯ ಹಾದಿಯಲ್ಲಿ ಸಾಗಲಿ.”

-ವಿ.ಪಿ.ಕುಲದೀಪ್, ಕೆ.ಆರ್.ನಗರ ತಾಪಂ ಇಒ

 

 

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

2 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

4 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

5 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

6 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

10 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

10 hours ago