Andolana originals

ಜಂಬೂಸವಾರಿಗೆ ಕಳೆ ತಂದ ಕಲಾ ತಂಡಗಳು

ಎಚ್. ಎಸ್.ದಿನೇಶ್ ಕುಮಾರ್

೮೦ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿ; ಮೆರವಣಿಗೆಯಲ್ಲಿ ನಾಡು, ನುಡಿ, ಕಲೆ, ಸಂಸ್ಕೃತಿ ಅನಾವರಣ

ಮೈಸೂರು: ವೀರಭದ್ರ ಕುಣಿತ.., ನಂದಿ ಕಂಬ.., ಜಗ್ಗಲಿಗೆ ಮೇಳ.., ಕಂಗೀಲು ಕುಣಿತ.., ಹುಲಿ ವೇಷ.., ಪಟ ಕುಣಿತ.., ತಮಿಳುನಾಡಿನ ಕರಗ ತಪ್ಪಟಂ.., ದೊಣ್ಣೆ ವರಸೆ.., ಕರಡಿ, ಮಹಿಷ ವೇಷ… ಹೀಗೆ ೮೦ಕ್ಕೂ ಹೆಚ್ಚು ಕಲಾ ತಂಡಗಳು ದಸರಾ ಮಹೋತ್ಸವದ ಅಂತಿಮ ದಿನವಾದ ಗುರುವಾರ ನಡೆದ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಾರ್ವಜನಿಕರ ಮನಸೂರೆಗೊಂಡವು.

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮೈಸೂರು ಅರಮನೆ ಮುಂಭಾಗದಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಕಲಾ ತಂಡಗಳು ಸಾಗಿದವು.

ಪ್ರತಿಯೊಂದು ಕಲಾ ತಂಡವೂ ಆಯಾಯ ಜಿಲ್ಲೆಯ ಕಲೆ, ಸಂಸ್ಕೃತಿ ಹಾಗೂ ವಿಶೇಷತೆಗಳನ್ನು ಬಿಂಬಿಸಿದವು. ಮೊದಲಿಗೆ ಉಡಿಗಾಲ ಮಹದೇವಪ್ಪ ತಂಡದವರು ನಂದಿ ಧ್ವಜ ಕುಣಿತ, ಕೆ.ಆರ್.ಮೊಹಲ್ಲಾ ನಿವಾಸಿಗಳು ಹಾಗೂ ಆಕಾಶವಾಣಿ ಕಲಾವಿದರ ತಂಡದಿಂದ ವೀರಭದ್ರ ಕುಣಿತ, ಬೆಂಗಳೂರು ಹಾಗೂ ಮಂಡ್ಯ ಕಲಾವಿದರು ಕೊಂಬು-ಕಹಳೆ, ಉಡುಪಿಯ ಕಲಾವಿದರಿಂದ ಕುಡುಬಿ ಗುಮಟೆ ನೃತ್ಯ, ಬೆಳಗಾವಿ ಕಲಾವಿದರ ಕರಪಾಲ ನೃತ್ಯ, ಚಿಕ್ಕಬಳ್ಳಾಪುರ ಕಲಾವಿದರ ಗಾರುಡಿ ಗೊಂಬೆ ನೃತ್ಯ, ದಕ್ಷಿಣ ಕನ್ನಡ ಜಿಲ್ಲೆಯ ಕಂಗೀಲು ಕುಣಿತ, ತಮಿಳುನಾಡಿನ ಕರಗ ತಪ್ಪಟಂ, ಉತ್ತರ ಕನ್ನಡ ಜಿಲ್ಲೆಯ ಢಕ್ಕೆ ಕುಣಿತ, ಹಾವೇರಿ, ಶಿವಮೊಗ್ಗ ಹಾಗೂ ದಾವಣಗೆರೆಯ ಡೊಳ್ಳು ಕುಣಿತಗಳು ಸಾರ್ವಜನಿಕರ ಗಮನ  ಸೆಳೆದವು.

ಬಳ್ಳಾರಿಯ ಬುಡಕಟ್ಟು ಜನರ ಹಕ್ಕಿಪಿಕ್ಕಿ ನೃತ್ಯ, ಮಹರ್ಷಿ ವಾಲ್ಮೀಕಿ ತಂಡದವರ ಮರಗಾಲು ಕುಣಿತ, ಪದ್ಮಶ್ರೀ ಪ್ರಸನ್ನಕುಮಾರ್ ಹಾಗೂ ನಾಡೋಜ ಮುನಿವೆಂಕಟಪ್ಪ ಅವರ ತಮಟೆ ವಾದನ, ಶಹನಾಯಿ ವಾದನ, ಗಣಿ ವಾದನ, ಗುಜರಾತ್‌ನ ಗರ್ಭಾ ಬುಡಕಟ್ಟು ನೃತ್ಯ, ನಾದಸ್ವರ, ಲೇಂಗಿ ನೃತ್ಯ, ಬೇಡರ ವೇಷ, ಚಂಡೆ ವಾದನ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ತಂದವು.

ಬಸವಳಿದ ಕಲಾವಿದರು: ಅರಮನೆ ಆವರಣದಲ್ಲಿ ಆರಂಭವಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅದ್ಭುತವಾಗಿ ಹೆಜ್ಜೆ ಹಾಕಿದ ಕಲಾವಿದರು. ಆಯುರ್ವೇದ ಆಸ್ಪತ್ರೆ ಬಳಿ ಬರುತ್ತಿದ್ದಂತೆ ಮಂಕಾದಂತೆ ಕಂಡುಬಂದರು. ಈ ವೇಳೆ ಬಿಸಿಲು ಇಲ್ಲದ ಕಾರಣ ಸಮಾಧಾನಚಿತ್ತದಿಂದಲೇ ಕಲಾವಿದರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ನೀರು, ಮಜ್ಜಿಗೆ ವಿತರಣೆ: ದಾರಿಯುದ್ದಕ್ಕೂ ಕಲಾವಿದರಿಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳವರು ಹಾಗೂ ದಸರಾ ಸಮಿತಿ ವತಿಯಿಂದ ನೀರು, ಮಜ್ಜಿಗೆ ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

3 mins ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

32 mins ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

43 mins ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

53 mins ago

ಫೆ.1ರಂದು ನಿಮಿಷಾಂಬದಲ್ಲಿ ಮಾಘ ಶುದ್ಧ ಪೌರ್ಣಮಿ : ನದಿಯ ತೀರದಲ್ಲಿ ಸೂಕ್ತ ಭದ್ರತೆಗೆ ಶಾಸಕರ ಸೂಚನೆ

ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…

1 hour ago

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

2 hours ago