Andolana originals

21 ಸುತ್ತು ಕುಶಾಲುತೋಪು ಸಿಡಿಸಲು ಫಿರಂಗಿ ಪಡೆ ಸಜ್ಜು

ಜಂಬೂ ಸವಾರಿ ಮೆರವಣಿಗೆಯಲ್ಲಿ ೩೫ ಸಿಬ್ಬಂದಿಗಳಿಂದ ಸಾಹಸ

* ೭ ಫಿರಂಗಿ ಬಳಸಿ ತಲಾ ೩ ಸುತ್ತಿನಲ್ಲಿ ೨೧ ಬಾರಿ ಕುಶಾಲುತೋಪು ಸಿಡಿತ

* ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್ ನೇತೃತ್ವದಲ್ಲಿ ತಯಾರಿ

* ೪ ಫಿರಂಗಿಗಳಿಗೆ ೧ಕೆಜಿ ೮೦೦ ಗ್ರಾಂ ಗನ್ ಪೌಡರ್ ನಿಂದ ತಯಾರಿಸಿದ ಸಿಡಿಮದ್ದು ಬಳಕೆ

* ೩ ಫಿರಂಗಿಗಳಿಗೆ ೧ ಕೆಜಿ ೬೦೦ ಗ್ರಾಂ ಗನ್ ಪೌಡರ್ ಬಳಸಿದ ಸಿಡಿಮದ್ದು ಬಳಕೆ

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾದ ಜಂಬೂ ಸವಾರಿ ಮೆರವಣಿಗೆಯ ಆರಂಭದಲ್ಲಿ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡುವಾಗ ಒಂದು ನಿಮಿಷದೊಳಗೆ ೨೧ ಸುತ್ತು ಕುಶಾಲುತೋಪು ಸಿಡಿಸುವುದಕ್ಕೆ ಫಿರಂಗಿ ದಳ ಸಜ್ಜಾಗಿದೆ.

೭ ಫಿರಂಗಿ ಬಳಸಿ ತಲಾ ೩ ಸುತ್ತಿನಲ್ಲಿ ೨೧ ಬಾರಿ ಕುಶಾಲು ತೋಪು ಸಿಡಿಸುವುದಕ್ಕೆ ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್ ನೇತೃತ್ವದಲ್ಲಿ ಎಸಿಪಿ ಕುಮಾರಸ್ವಾಮಿ ಮಾರ್ಗ ದರ್ಶನದಲ್ಲಿ ೩೬ ಸಿಬ್ಬಂದಿಯನ್ನೊಳಗೊಂಡ ಫಿರಂಗಿ ದಳ ತಮ್ಮ ಪ್ರಾಣ ಲೆಕ್ಕಿಸದೇ ಕುಶಾಲುತೋಪು ಸಿಡಿಸುವುದಕ್ಕೆ ಟೊಂಕ ಕಟ್ಟಿದೆ.

ಈಗಾಗಲೇ ೩ ಬಾರಿ ಕುಶಾಲು ತೋಪು ಸಿಡಿಸುವ ತಾಲೀಮನ್ನು ಯಶಸ್ವಿಯಾಗಿ ನಡೆಸಿರುವ ಫಿರಂಗಿ ದಳ ಇದೀಗ ಅಂತಿಮ ಹಂತದ ಕುಶಾಲುತೋಪು ಸಿಡಿಸುವ ಜವಾಬ್ದಾರಿ ನಿಭಾಯಿಸಲು ಸಂಪೂರ್ಣ ತಯಾರಾಗಿದೆ. ೭ ಫಿರಂಗಿಗಳಲ್ಲಿ ೪ ಫಿರಂಗಿಗಳಿಗೆ ೧ ಕೆಜಿ ೮೦೦ ಗ್ರಾಂ ಗನ್ ಪೌಡರ್‌ನಿಂದ ತಯಾರಿಸಿದ ಸಿಡಿಮದ್ದು ಉಳಿದ ೩ ಫಿರಂಗಿಗಳಿಗೆ ೧ ಕೆಜಿ ೬೦೦ ಗ್ರಾಂ ಗನ್‌ಪೌಡರ್ ಬಳಸಿ ತಯಾರಿಸಿದ ಸಿಡಿಮದ್ದನ್ನು ಬಳಸಿ ಸಿಡಿಸಲಿದ್ದಾರೆ. ಸುಮಾರು ೧೫ ದಿನಗಳು ಒಣ ತಾಲೀಮು ನಡೆಸಿ, ಒಂದೇ ನಿಮಿಷದಲ್ಲಿ ೨೧ ಕುಶಾಲುತೋಪು ಸಿಡಿಸುವ ಚಾಕಚಕ್ಯತೆಯನ್ನು ಫಿರಂಗಿ ದಳ ಮೈಗೂಡಿಸಿ ಕೊಂಡಿದ್ದು, ಇದೀಗ ಜಂಬೂ ಸವಾರಿಯಂದು ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ವೇಳೆ ಕರ್ನಾಟಕ ಪೊಲೀಸ್ ವಾದ್ಯವೃಂದ ರಾಷ್ಟ್ರಗೀತೆ ನುಡಿಸುವಾಗ ಒಂದು ನಿಮಿಷದೊಳಗೆ ೨೧ ಬಾರಿ ಕುಶಾಲುತೋಪು ಸಿಡಿಸಲಿದೆ.

ಅಪಾಯಕಾರಿ: ಕುಶಾಲು ತೋಪು ಸಿಡಿಸುವ ಕಾರ್ಯ ಅಪಾಯಕಾರಿಯಾಗಿದ್ದು, ಅಂತಹ ಸವಾಲನ್ನು ಫಿರಂಗಿ ದಳ ಸಮರ್ಥವಾಗಿ ನಿಭಾಯಿಸಲು ಪಣ ತೊಟ್ಟಿದೆ. ಕಿವಿಗಡಚಿಕ್ಕುವ ಭಾರೀ ಪ್ರಮಾಣದ ಶಬ್ದ ದೊಂದಿಗೆ ದಟ್ಟ ಹೊಗೆ ಮತ್ತು ಬೆಂಕಿ ಉಗುಳುವ ಫಿರಂಗಿಯಿಂದ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಸಿಡಿಮದ್ದು ಸಿಡಿಸುವ ಸವಾಲಿನ ಕೆಲಸವನ್ನು ಫಿರಂಗಿ ದಳ ನಿಭಾಯಿಸುತ್ತಿದೆ. ಅ.೨ರಂದು ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ಸಂದರ್ಭದಲ್ಲಿ ಮತ್ತು ಅ.೧ರಂದು ಪಂಜಿನ ಕವಾಯತು ಪೂರ್ವ ತಾಲೀಮಿನ ವೇಳೆ ೨೧ ಬಾರಿ ಕುಶಾಲುತೋಪು ಸಿಡಿಸಲು ಸನ್ನದ್ಧರಾಗಿದ್ದಾರೆ.

ಫಿರಂಗಿ ದಳದ ಸೇನಾನಿಗಳು:  ನಗರ ಸಶಸ್ತ್ರ ಮೀಸಲು ಪಡೆಯ ಆರ್‌ಎಸ್‌ಐ ಸಂತೋಷ್ ಕುಮಾರ್, ಎಆರ್‌ಎಸ್‌ಐಗಳಾದ ಸಿದ್ದರಾಜು, ಕೆ.ಕುಮಾರ, ಚನ್ನಬಸವಯ್ಯ, ಜನಾರ್ಧನ ಜೆಟ್ಟಿ, ಎಎಚ್‌ಸಿಗಳಾದ ಆನಂದ ಕುಮಾರ್, ಮೋಹನ್ ಕುಮಾರ್, ಮಂಜು, ಶ್ರೀನಿವಾಸಚಾರಿ, ಚಿಕ್ಕಣ್ಣ, ರವಿ, ಹೊನ್ನಪ್ಪ, ಶಿವಕುಮಾರ್, ಚಿನ್ನಸ್ವಾಮಿ, ಅಣ್ಣೇಗೌಡ, ಕೆಂಡೇಗೌಡ, ಎಪಿಸಿಗಳಾದ ಬಸವರಾಜ, ರತನ್, ಮಲ್ಲಯ್ಯ, ನಾಗರಾಜ, ವಿಷಕಂಠ, ಶಿವಕುಮಾರ್, ರವಿಚಂದ್ರನ್, ಮಹೇಶ, ಮಂಜುನಾಥ್, ರಮೇಶ, ಗ-ರ್, ಮಂಜುನಾಥ, ಮಲ್ಲಪ್ಪ, ಸಂತೋಷ್, ಅಣ್ಣಪ್ಪ, ಪ್ರದೀಪ್, ರವಿಸ್ವಾಮಿ, ಶ್ರೀಕಾಂತ, ರವಿಚಂದ್ರ ಸಿಡಿಮದ್ದು ಸಿಡಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

5 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

7 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

8 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

9 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

11 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

11 hours ago