Andolana originals

ಅಶೋಕ ರಸ್ತೆಯ ತುಂಬಾ ಗುಂಡಿಗಳು

 

ಮೈಸೂರು: ಅತಿ ಹೆಚ್ಚು ವಾಹನಗಳು ಓಡಾಡುವ ನಗರದ ರಸ್ತೆಗಳಲ್ಲಿ ಒಂದಾದ ಅಶೋಕ ರಸ್ತೆಯಲ್ಲಿ ಗುಂಡಿಗಳು ವಾಹನ ಹಾಳಾಗಿರುವ ರಸ್ತೆಯಲ್ಲಿ ಬಿದ್ದು ತೊಂದರೆಯಾಗುತ್ತಿದ್ದರೂ ರಸ್ತೆ ದುರಸ್ತಿಗೆ ಕೆಪ್ಪ ಕೈಕಾಲು ಮುರಿದುಕೊಂಡಿರುವ
ಕೈಗೊಳ್ಳದ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಲಷ್ಕರ್ ಪೊಲೀಸ್ ಠಾಣೆಯಿಂದ ಸಂತ ಫಿಲೋಮಿನಾ ಚರ್ಚ್ ಕಡೆಗೆ ಹೋಗುವ ಅಶೋಕ ರಸ್ತೆ ಸುಮಾರು 7 ತಿಂಗಳಿಂದಲೂ ಗುಂಡಿಮಯವಾಗಿದೆ. ಈ ರಸ್ತೆಯಿಂದ ಮಂಡಿ ಮೊಹಲ್ಲಾದ ಚಿಕ್ಕ ಮಾರುಕಟ್ಟೆ ಕಡೆ ತಿರುವು ಪಡೆಯುವ ಒಂದೇ ವಿಶೇಷ ಸ್ಥಳದಲ್ಲಿ ಹತ್ತಾರು ಗುಂಡಿಗಳಿವೆ ಮಾರ್ಗದಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿರುವ ಪ್ರಕರಣಗಳು ನಡೆದಿವೆ.

ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಲ್ಲುವುದರಿಂದ ದ್ವಿಚಕ್ರವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ.

ಈ ಸಂಬಂಧವಾಗಿ ಸಾರ್ವಜನಿಕರು ಪಾಲಿಕೆ ವಲಯ ಕಚೇರಿ-7ಕ್ಕೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಇದು ಈ ಭಾಗದ ಜನರಿಗೆ ಶೋಕ ರಸ್ತೆಯಾಗಿ ಪರಿಣಮಿಸಿದೆ.

ಈಗ ಟೆಂಡರ್ ಪ್ರಕ್ರಿಯೆ
ರಸ್ತೆ ಹಾಳಾಗಿ ಹಲವಾರು ತಿಂಗಳುಗಳೇ ಕಳೆದಿದ್ದರೂ ದುರಸ್ತಿ ಮಾಡಲು ಈಗಷ್ಟೇ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದೀಗ ಟೆಂಡರ್ ಕರೆಯಲಾಗಿದೆ. ಈ ಟೆಂಡರ್‌ನಲ್ಲಿ ಇನ್ನು ಯಾರೂ ಗುತ್ತಿಗೆ ಪಡೆದಿಲ್ಲ. ಗುತ್ತಿಗೆಗೆ ನೀಡಿ ಪಾಲಿಕೆಯಿಂದ ಕ್ರಿಯಾ ಯೋಜನೆಗೆ ಅನುಮತಿ ನೀಡಿದ ನಂತರವೇ ಕೆಲಸ ಆರಂಭವಾಗಲಿದೆ ಎಂದು ಪಾಲಿಕೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧಿಕಾರಿಗೆ ಅನೇಕ ಸಾರಿ ದೂರು ನೀಡಿದ್ದೇವೆ. ದುರಸ್ತಿ ಮಾಡಿಸುತ್ತೇವೆ, ಸದ್ಯಕ್ಕೆ ಗುಂಡಿ ಮುಚ್ಚಿಸುತ್ತೇವೆ ಎಂದೆಲ್ಲ ಹೇಳಿದ್ದರು. ಪ್ರವಾಸಿಗರು ಭೇಟಿ ನೀಡುವ ಸಂತ ಫಿಲೋಮಿನ ಚರ್ಚ್ ಹತ್ತಿರ ಒಮ್ಮೆ ಮಣ್ಣು ಹಾಕಿದ್ದರು. ಮಳೆ ಬಂದು ಕೊಚ್ಚಿಕೊಂಡು ಹೋಗಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಿದ ಹಲವಾರು ವಾಹನ ಸವಾರರು ಬಿದ್ದು ಗಾಯಗೊಂಡಿದ್ದರೂ ಜನರ ಸಂಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.
ರಸೂಲ್, ಸ್ಥಳೀಯರು

ಅಶೋಕ ರಸ್ತೆಯಲ್ಲಿರುವ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡರೆ ರಸ್ತೆ ಯಾವುದು, ಗುಂಡಿ ಯಾವುದು ಎನ್ನುವುದು ಗೊತ್ತಾಗುವುದಿಲ್ಲ. ಗುಂಡಿಗಳ ಬಗ್ಗೆ ಗೊತ್ತಿಲ್ಲದವರು ವೇಗವಾಗಿ ಬಂದರೆ ಗಾಡಿ ಕಂಟ್ರೋಲ್ ತಪ್ಪುತ್ತದೆ. ಈ ಬಗ್ಗೆ ಪಾಲಿಕೆಯವರು ಗಮನ ಹರಿಸಿ ದುರಸ್ತಿ ಮಾಡಿಸಿದರೆ ಜನಕ್ಕೆ ಅನುಕೂಲ ಆಗುತ್ತದೆ.
ಸೈಯದ್ ಫಾರೂಖ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿ

ದಸರೆಗೂ ಮುಂಚೆ ರಸ್ತೆ ದುರಸ್ತಿ
ಅಶೋಕ ರಸ್ತೆಯಲ್ಲಿ ಹಲವೆಡೆ ಗುಂಡಿ ಬಿದ್ದಿರುವುದು ನಮ್ಮ ಗಮನಕ್ಕೆ ಬಂದಿದೆ. ರಸ್ತೆ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿದ್ದೇವೆ. ಈ ರಸ್ತೆ ದುರಸ್ತಿಗೆ ಈಗ ಟೆಂಡರ್ ಕರೆಯಲಾಗಿದೆ. ಯಾರಾದರೂ ಟೆಂಡರ್ ತೆಗೆದುಕೊಂಡರೆ ವರ್ಕ್ ಆರ್ಡರ್ ನೀಡಿ ತಕ್ಷಣ ದುರಸ್ತಿ ಮಾಡುತ್ತೇವೆ. ದಸರೆಗೂ ಮುಂಚೆ ರಸ್ತೆಗಳ ದುರಸ್ತಿ ಮಾಡಿಸುತ್ತೇವೆ. ಸದ್ಯಕ್ಕೆ ಆದಷ್ಟು ಬೇಗ ಗುಂಡಿ ಮುಚ್ಚಲು ವ್ಯವಸ್ಥೆ ಮಾಡುತ್ತೇವೆ.
• ರಾಜೀವ್‌ನಾಥ್, ಡಿಒ, ಪಾಲಿಕೆ ವಲಯ ಕಚೇರಿ-7

 

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

10 mins ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

15 mins ago

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…

46 mins ago

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

2 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

2 hours ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

2 hours ago