Andolana originals

ಅಶೋಕ ರಸ್ತೆಯ ತುಂಬಾ ಗುಂಡಿಗಳು

 

ಮೈಸೂರು: ಅತಿ ಹೆಚ್ಚು ವಾಹನಗಳು ಓಡಾಡುವ ನಗರದ ರಸ್ತೆಗಳಲ್ಲಿ ಒಂದಾದ ಅಶೋಕ ರಸ್ತೆಯಲ್ಲಿ ಗುಂಡಿಗಳು ವಾಹನ ಹಾಳಾಗಿರುವ ರಸ್ತೆಯಲ್ಲಿ ಬಿದ್ದು ತೊಂದರೆಯಾಗುತ್ತಿದ್ದರೂ ರಸ್ತೆ ದುರಸ್ತಿಗೆ ಕೆಪ್ಪ ಕೈಕಾಲು ಮುರಿದುಕೊಂಡಿರುವ
ಕೈಗೊಳ್ಳದ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಲಷ್ಕರ್ ಪೊಲೀಸ್ ಠಾಣೆಯಿಂದ ಸಂತ ಫಿಲೋಮಿನಾ ಚರ್ಚ್ ಕಡೆಗೆ ಹೋಗುವ ಅಶೋಕ ರಸ್ತೆ ಸುಮಾರು 7 ತಿಂಗಳಿಂದಲೂ ಗುಂಡಿಮಯವಾಗಿದೆ. ಈ ರಸ್ತೆಯಿಂದ ಮಂಡಿ ಮೊಹಲ್ಲಾದ ಚಿಕ್ಕ ಮಾರುಕಟ್ಟೆ ಕಡೆ ತಿರುವು ಪಡೆಯುವ ಒಂದೇ ವಿಶೇಷ ಸ್ಥಳದಲ್ಲಿ ಹತ್ತಾರು ಗುಂಡಿಗಳಿವೆ ಮಾರ್ಗದಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿರುವ ಪ್ರಕರಣಗಳು ನಡೆದಿವೆ.

ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಲ್ಲುವುದರಿಂದ ದ್ವಿಚಕ್ರವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ.

ಈ ಸಂಬಂಧವಾಗಿ ಸಾರ್ವಜನಿಕರು ಪಾಲಿಕೆ ವಲಯ ಕಚೇರಿ-7ಕ್ಕೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಇದು ಈ ಭಾಗದ ಜನರಿಗೆ ಶೋಕ ರಸ್ತೆಯಾಗಿ ಪರಿಣಮಿಸಿದೆ.

ಈಗ ಟೆಂಡರ್ ಪ್ರಕ್ರಿಯೆ
ರಸ್ತೆ ಹಾಳಾಗಿ ಹಲವಾರು ತಿಂಗಳುಗಳೇ ಕಳೆದಿದ್ದರೂ ದುರಸ್ತಿ ಮಾಡಲು ಈಗಷ್ಟೇ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದೀಗ ಟೆಂಡರ್ ಕರೆಯಲಾಗಿದೆ. ಈ ಟೆಂಡರ್‌ನಲ್ಲಿ ಇನ್ನು ಯಾರೂ ಗುತ್ತಿಗೆ ಪಡೆದಿಲ್ಲ. ಗುತ್ತಿಗೆಗೆ ನೀಡಿ ಪಾಲಿಕೆಯಿಂದ ಕ್ರಿಯಾ ಯೋಜನೆಗೆ ಅನುಮತಿ ನೀಡಿದ ನಂತರವೇ ಕೆಲಸ ಆರಂಭವಾಗಲಿದೆ ಎಂದು ಪಾಲಿಕೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧಿಕಾರಿಗೆ ಅನೇಕ ಸಾರಿ ದೂರು ನೀಡಿದ್ದೇವೆ. ದುರಸ್ತಿ ಮಾಡಿಸುತ್ತೇವೆ, ಸದ್ಯಕ್ಕೆ ಗುಂಡಿ ಮುಚ್ಚಿಸುತ್ತೇವೆ ಎಂದೆಲ್ಲ ಹೇಳಿದ್ದರು. ಪ್ರವಾಸಿಗರು ಭೇಟಿ ನೀಡುವ ಸಂತ ಫಿಲೋಮಿನ ಚರ್ಚ್ ಹತ್ತಿರ ಒಮ್ಮೆ ಮಣ್ಣು ಹಾಕಿದ್ದರು. ಮಳೆ ಬಂದು ಕೊಚ್ಚಿಕೊಂಡು ಹೋಗಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಿದ ಹಲವಾರು ವಾಹನ ಸವಾರರು ಬಿದ್ದು ಗಾಯಗೊಂಡಿದ್ದರೂ ಜನರ ಸಂಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.
ರಸೂಲ್, ಸ್ಥಳೀಯರು

ಅಶೋಕ ರಸ್ತೆಯಲ್ಲಿರುವ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡರೆ ರಸ್ತೆ ಯಾವುದು, ಗುಂಡಿ ಯಾವುದು ಎನ್ನುವುದು ಗೊತ್ತಾಗುವುದಿಲ್ಲ. ಗುಂಡಿಗಳ ಬಗ್ಗೆ ಗೊತ್ತಿಲ್ಲದವರು ವೇಗವಾಗಿ ಬಂದರೆ ಗಾಡಿ ಕಂಟ್ರೋಲ್ ತಪ್ಪುತ್ತದೆ. ಈ ಬಗ್ಗೆ ಪಾಲಿಕೆಯವರು ಗಮನ ಹರಿಸಿ ದುರಸ್ತಿ ಮಾಡಿಸಿದರೆ ಜನಕ್ಕೆ ಅನುಕೂಲ ಆಗುತ್ತದೆ.
ಸೈಯದ್ ಫಾರೂಖ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿ

ದಸರೆಗೂ ಮುಂಚೆ ರಸ್ತೆ ದುರಸ್ತಿ
ಅಶೋಕ ರಸ್ತೆಯಲ್ಲಿ ಹಲವೆಡೆ ಗುಂಡಿ ಬಿದ್ದಿರುವುದು ನಮ್ಮ ಗಮನಕ್ಕೆ ಬಂದಿದೆ. ರಸ್ತೆ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿದ್ದೇವೆ. ಈ ರಸ್ತೆ ದುರಸ್ತಿಗೆ ಈಗ ಟೆಂಡರ್ ಕರೆಯಲಾಗಿದೆ. ಯಾರಾದರೂ ಟೆಂಡರ್ ತೆಗೆದುಕೊಂಡರೆ ವರ್ಕ್ ಆರ್ಡರ್ ನೀಡಿ ತಕ್ಷಣ ದುರಸ್ತಿ ಮಾಡುತ್ತೇವೆ. ದಸರೆಗೂ ಮುಂಚೆ ರಸ್ತೆಗಳ ದುರಸ್ತಿ ಮಾಡಿಸುತ್ತೇವೆ. ಸದ್ಯಕ್ಕೆ ಆದಷ್ಟು ಬೇಗ ಗುಂಡಿ ಮುಚ್ಚಲು ವ್ಯವಸ್ಥೆ ಮಾಡುತ್ತೇವೆ.
• ರಾಜೀವ್‌ನಾಥ್, ಡಿಒ, ಪಾಲಿಕೆ ವಲಯ ಕಚೇರಿ-7

 

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

34 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

39 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

44 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

48 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

54 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

55 mins ago