Andolana originals

ಅಶೋಕಪುರಂ ಶಾಂತಿಧಾಮಕ್ಕೆ ಬೇಕಿದೆ ಕಾಯಕಲ್ಪ

ಪ್ರಶಾಂತ್ ಎಸ್.

ಆಳೆತ್ತರ ಬೆಳೆದು ನಿಂತಿರುವ ಜಾಲಿ, ಪಾರ್ಥೇನಿಯಂ, ಎಲ್ಲೆಂದರಲ್ಲಿ ಬಿದ್ದಿರುವ ಕಸ

ಸಮಸ್ಯೆ ಬಿಚ್ಚಿಟ್ಟು ಅಳಲು ತೋಡಿಕೊಂಡ ನಿವಾಸಿಗಳು

ಮೈಸೂರು:ನಗರದ ಅಶೋಕಪುರಂ ಶಾಂತಿಧಾಮ ಕತ್ತಲಾಗುತ್ತಿದ್ದಂತೆ ಪುಂಡ- ಪೋಕರಿಗಳ ತಾಣವಾಗಿ ಮಾರ್ಪಾಡಾಗಿದ್ದು, ಸಮಾಧಿಗಳ ಮೇಲೆಯೇ ಮದ್ಯ, ಮಾದಕ ಪದಾರ್ಥಗಳನ್ನು ಸೇವನೆ ಮಾಡುವ ‘ಕತ್ತಲ ಲೋಕ’ ಉದಯವಾಗಿರುವ ಬಗ್ಗೆ ಸ್ಥಳೀಯರು ಕಳವಳ ವ್ಯಕ್ತಪಡಿಸುತ್ತಾರೆ.

ಪರಿಶಿಷ್ಟ ಸಮುದಾಯದವರ ಈ ಶಾಂತಿಧಾಮದಲ್ಲಿ ವಿದ್ಯುತ್, ನೀರಿನ ವ್ಯವಸ್ಥೆಯೂ ಇಲ್ಲ. ಆದರೆ, ಶಾಂತಿಧಾಮಕ್ಕೆ ಸುತ್ತಲೂ ಕಾಂಪೌಂಡ್, ಆಳೆತ್ತರದ ಕಬ್ಬಿಣದ ಗೇಟ್ ಅಳವಡಿಸಲಾಗಿದೆ. ಸಂಜೆ ಸೂರ್ಯ ಮುಳುಗುತ್ತಲೇ ಸಾರ್ವಜನಿಕರು ಇತ್ತ ಬಾರದಿರುವುದರಿಂದ ಪುಂಡರ ಕತ್ತಲ ಲೋಕ ತೆರೆದುಕೊಳ್ಳುತ್ತದೆ. ಎಲ್ಲೆಂದರಲ್ಲಿ ಬಿದ್ದಿರುವ ಮದ್ಯದ ಬಾಟಲಿಗಳು, ಒಡೆದ ಗಾಜಿನ ಲೋಟ, ಪ್ಲಾಸ್ಟಿಕ್, ಬೀಡಿ ಹಾಗೂ ಸಿಗರೇಟು ತುಂಡುಗಳು ಕಣ್ಣಿಗೆ ರಾಚುತ್ತಿವೆ.

ಸಂಬಂಧಪಟ್ಟ ಅಧಿಕಾರಿ ವರ್ಗ, ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಬರುವವರಿಗೆ ನೀರು, ವಿದ್ಯುತ್ ವ್ಯವಸ್ಥೆ ಕಲ್ಪಿಸುವುದಿರಲಿ, ಕನಿಷ್ಠ ಸ್ವಚ್ಛತೆ ಕಡೆಗೂ ಗಮನಹರಿಸುತ್ತಿಲ್ಲ. ಮೂಲ ಸೌಲಭ್ಯವೇ ಇಲ್ಲದಿರುವಾಗ ಇಲ್ಲಿ ಶವ ಸಂಸ್ಕಾರ ನಡೆಸುವುದಾದರೂ ಹೇಗೆ ಎಂದು ಅಶೋಕಪುರಂ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಾರೆ.

ಎರಡು ಎಕರೆ ಪ್ರದೇಶದಲ್ಲಿರುವ ಶಾಂತಿಧಾಮ: ಅಶೋಕಪುರಂ ೧ನೇ ಕ್ರಾಸ್ ನಿಂದ ೧೩ನೇ ಕ್ರಾಸ್ ಒಳಗೊಂಡು ಒಟ್ಟು ೬ ವಾರ್ಡ್‌ಗಳಲ್ಲಿನ ನಿವಾಸಿಗಳು ಈ ಸ್ಮಶಾನವನ್ನು ಬಳಕೆ ಮಾಡುತ್ತಾರೆ. ಎರಡು ಎಕರೆಗೂ ಹೆಚ್ಚು ವಿಸ್ತೀರ್ಣದ ಈ ಸ್ಮಶಾನದಲ್ಲಿ ಸ್ವಚ್ಛತೆಯ ಕೊರತೆಯೂ ಇದೆ. ಶವ ದಹನದ ನಂತರ ಉಳಿಯುವ ಅರೆ ಸುಟ್ಟ ಕಟ್ಟಿಗೆ, ಬಂಬುಗಳು ಸುತ್ತಲೂ ಬಿದ್ದಿರುತ್ತವೆ. ಇನ್ನು ಸ್ಮಶಾನದ ತುಂಬಾ ಜಾಲಿ ಮುಳ್ಳು ಗಿಡಗಳು, ಪಾರ್ಥೇನಿಯಂ ಬೆಳೆದು ನಿಂತಿದೆ. ಇದರ ನಡುವೆಯೇ ಶವ ಸಂಸ್ಕಾರ ನಡೆಸಬೇಕಾದ ಪರಿಸ್ಥಿತಿ ಇಲ್ಲಿದೆ.

” ತಮ್ಮ ಪೂರ್ವಜರ ಸಮಾಧಿಗಳ ಮೇಲೆ ಕುಳಿತು ಪುಂಡ- ಪೋಕರಿಗಳು ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆ ಮಾಡುತ್ತಿರುವುದು ಅಶೋಕಪುರಂನ ಬಹುತೇಕರಿಗೆ ನೋವುಂಟು ಮಾಡಿದೆ. ಅಶೋಕಪುರಂ ಶಾಂತಿಧಾಮ ದಲ್ಲಿ ಜಾಗದ ಕೊರತೆ ಇಲ್ಲ. ಆದರೆ, ನಿರ್ವಹಣೆಯಲ್ಲಿ ಮಾತ್ರ ಸುಧಾರಣೆ ಕಾಣುತ್ತಿಲ್ಲ.”

” ಅಶೋಕಪುರಂ ಶಾಂತಿಧಾಮಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಿ, ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಿಬ್ಬಂದಿಯನ್ನು ನೇಮಿಸಬೇಕು. ಈ ಹೊಣೆಗಾರಿಕೆ ನಿಭಾಯಿಸುವುದು ನಗರ ಪಾಲಿಕೆ ಅಧಿಕಾರಿಗಳ ಕರ್ತವ್ಯವಾಗಿದ್ದು, ಈ ಕೂಡಲೇ ಇಲ್ಲಿನ ಅವ್ಯ ವಸ್ಥೆ ಸರಿಪಡಿಸಿ ಶಾಂತಿಧಾಮಕ್ಕೆ ಬರುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.”

– ವಿಶ್ವ ( ವಿಶ್ವೇಶ್ವರಯ್ಯ),ಅಶೋಕಪುರಂ ನಿವಾಸಿ.

” ನಗರಪಾಲಿಕೆ ಅಧಿಕಾರಿಗಳು ನಗರವನ್ನು ಸ್ವಚ್ಛ ಮಾಡಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಶಾಂತಿ ಧಾಮವನ್ನು ಯಾವಾಗ ಸ್ವಚ್ಛ ಮಾಡುತ್ತಾರೆ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿ ಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಶಾಂತಿಧಾಮದ ಅಸ್ವಚ್ಛತೆಗೆ ಮುಕ್ತಿ ನೀಡಿ, ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಇಲ್ಲದಿದ್ದರೆ ನಗರಪಾಲಿಕೆ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ.”

-ಪುರುಷೋತ್ತಮ್, ಮಾಜಿ ಮಹಾಪೌರ

” ಅಶೋಕಪುರಂ ಸ್ಮಶಾನದಲ್ಲಿ ಪುಂಡರ ಹಾವಳಿ ಕುರಿತು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಂಬಂಧ ಸಿಬ್ಬಂದಿಗಳ ಜೊತೆಗೆ ಚರ್ಚಿಸಿ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ ಅನುಕೂಲ ಮಾಡುತ್ತೇನೆ.”

-ಶೇಕ್ ತನ್ವೀರ್ ಆಸಿಫ್, ನಗರಪಾಲಿಕೆ ಆಯುಕ್ತ

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago