Andolana originals

ಓದುಗರ ಪತ್ರ | ಯೂಟ್ಯೂಬರ್ ಗಳ ಮೇಲಿನ ಹಲ್ಲೆ ಖಂಡನಾರ್ಹ

ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು , ಇದರ ಸಂಪೂರ್ಣ ಕಾರ್ಯಾಚರಣೆಯನ್ನು ಮತ್ತು ಕ್ಷಣ ಕ್ಷಣದ ಬೆಳವಣಿಗೆಗಳನ್ನು ಮುಖ್ಯವಾಹಿನಿಗಳಿಗಿಂತಲೂ ಪ್ರಾಮಾಣಿಕವಾಗಿ, ವಸ್ತುನಿಷ್ಠವಾಗಿ ವರದಿ ಮಾಡಿ ಜನರ ಮುಂದಿಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನಾರ್ಹ.

ನ್ಯಾಯಪರವಾಗಿ ವರದಿ ಮಾಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ಏಕಾಏಕಿ ಈ ರೀತಿ ಮಾರಣಾಂತಿಕ ಹಲ್ಲೆ ಮಾಡಿರುವುದು ಸರಿಯಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ರೀತಿ ಗೂಂಡಾಗಿರಿ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಹಾಗೂ ಇದರ ಹಿಂದೆ ಯಾರ ಪ್ರಭಾವ ಕೆಲಸ ಮಾಡಿದೆ ಎಂಬುದನ್ನೂ ಸಹ ಜನರಿಗೆ ತಿಳಿಸುವುದು ಅಗತ್ಯವಾಗಿದೆ. ಧರ್ಮಸ್ಥಳದ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ಕರ್ನಾಟಕ ಸರ್ಕಾರವು ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಅವರಿಗೆ ಭದ್ರತೆ ಒದಗಿಸಬೇಕಿದೆ.

– ಎಂ. ಪಿ.ದರ್ಶನ್ ಚಂದ್ರ , ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

20 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

22 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

25 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

29 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

33 mins ago