Andolana originals

‘ಬಡವರಿಗೆ ನೀಡಿದ ಭೂಮಿಯನ್ನು ಕಬಳಿಸುವ ಯತ್ನ’

ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ

ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ ವರ್ಗದ ಬಡವರಿಗೆಂದು ಸರ್ಕಾರವು ನೀಡಿರುವ ಸರ್ಕಾರಿ ಭೂಮಿಯನ್ನು ಬಡವರಿಂದ ಉಳ್ಳವರು ಅಕ್ರಮವಾಗಿ ಕಬಳಿಸುವ ಯತ್ನವನ್ನು ಮಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಘಟನಾ ಸಂಚಾಲಕ ಕಳ್ಳಿಮುದ್ದನಹಳ್ಳಿ ಚಂದ್ರು ಆರೋಪಿಸಿದರು.

ತಾಲ್ಲೂಕಿನ ತಿಂಗಳ ಮಾವನ ಕಟ್ಟೆಯ ಬಳಿ ರೈತರ ಜಮೀನಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಹರದನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.೧೯೭ರಲ್ಲಿ ಹಲವಾರು ಬಡ ರೈತರುಗಳನ್ನು ಗುರುತಿಸಿ ಸರ್ಕಾರಿ ಗೋಮಾಳದ ಜಾಗವನ್ನು ನೀಡಿದೆ. ಅದಕ್ಕಾಗಿ ಆ ರೈತರುಗಳಿಗೆ ಈಗಾಗಲೇ ಸಾಗುವಳಿ ಚೀಟಿಯನ್ನು ಕೂಡ ನೀಡಲಾಗಿದೆ. ಅದರ ಆಧಾರದ ಮೇಲೆ ರೈತರು ಆ ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಅಂತಹ ಬಡ ರೈತರುಗಳಿಗೆ ಸರ್ಕಾರವು ನೀಡಿರುವ ಭೂಮಿಯನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಹಲವರು ಮಾಡುತ್ತಿದ್ದಾರೆ. ಸರ್ಕಾರವು ಬಡವರಿಗಾಗಿ ನೀಡಿರುವ ಸರ್ಕಾರಿ ಜಮೀನಿನ ಸಾಗುವಳಿಯ ಚೀಟಿಯ ಜೊತೆಗೆ ಅವರು ಅನುಭವದಲ್ಲಿರುವ ಭೂಮಿಯನ್ನು ಆ ರೈತರುಗಳಿಗೆ ದುರಸ್ತಿ ಮಾಡಿಕೊಡದಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ.

ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳು ಕೂಡಲೇ ಇದರ ಬಗ್ಗೆ ಅಗತ್ಯ ಕ್ರಮವಹಿಸಿ ಈ ಭಾಗದ ರೈತರುಗಳಿಗೆ ನೀಡಿರುವ ಸಾಗುವಳಿ ಚೀಟಿ ಮತ್ತು ಅನುಭವದ ಆಧಾರದ ಮೇಲೆ ಭೂಮಿಯನ್ನು ದುರಸ್ತಿ ಮಾಡಿಕೊಟ್ಟು ಅನುಕೂಲ ಕಲ್ಪಿಸಿ ಕೊಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸದಿದ್ದರೆ ತಾಲ್ಲೂಕು ಆಡಳಿತದ ಕಚೇರಿಯ ಮುಂದೆ ಸಂಘಟನೆಯ ವತಿಯಿಂದ ಈ ಭಾಗದ ರೈತರುಗಳನ್ನು ಒಗ್ಗೂಡಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಲಿತ ಮುಖಂಡರುಗಳಾದ ಲಕ್ಕಿಕುಪ್ಪೆ ರಮೇಶ್, ರಾಮಕೃಷ್ಣ, ಸಾಲಿಗ್ರಾಮ ಶ್ರೀನಿವಾಸ, ಬೆಟ್ಟಹಳ್ಳಿ ಸಣ್ಣಯ್ಯ, ಸುರೇಶ, ರಮೇಶ್, ದಡದಹಳ್ಳಿ ಪ್ರೀತಮ್, ರೈತ ಮಹಿಳೆಯರು ಹಾಜರಿದ್ದರು.

‘ಆತ್ಮಹತ್ಯೆಯೊಂದೇ ದಾರಿ’:  ಸಾಗುವಳಿ ಚೀಟಿ ಪಡೆದ ರೈತರುಗಳಾದ ಸಿದ್ದರಾಜು, ಯೋಗೇಶ, ಕುಮಾರ, ದೇವೇಗೌಡ ಅವರುಗಳು ಮಾತನಾಡಿ, ಬಡತನದಿಂದ ಜೀವನ ಸಾಗಿಸುತ್ತಿರುವ ನಮಗೆ ಸರ್ಕಾರವು ಸಾಗುವಳಿ ಚೀಟಿಯನ್ನು ನೀಡಿದೆ. ಅದರಂತೆ ನಮ್ಮ ಹೆಸರಿಗೆ ಖಾತೆಯೂ ಆಗಿದೆ. ಆದರೆ ಇದುವರೆಗೂ ನಮಗೆ ನೀಡಿರುವ ಸಾಗುವಳಿ ಚೀಟಿ ಮತ್ತು ನಾವು ಅನುಭವದಲ್ಲಿರುವ ಆಧಾರದ ಮೇಲೆ ಭೂಮಿಯನ್ನು ದುರಸ್ತಿ ಮಾಡಿಕೊಟ್ಟಿಲ್ಲ. ಇರುವ ಭೂಮಿಯ ಜಾಗವನ್ನೇ ಬೇರೆಯವರು ಅಕ್ರಮವಾಗಿ ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ. ಆಕಸ್ಮಿಕವಾಗಿ ಈ ಭೂಮಿಯನ್ನು ಯಾರಾದರೂ ನಮ್ಮಿಂದ ಕಿತ್ತುಕೊಂಡರೆ ಈ ಭೂಮಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ನಾವು ಬೀದಿಗೆ ಬರುವಂತಾಗುತ್ತದೆ. ಅಂತಹ ಸಂದರ್ಭದಲ್ಲಿ ನಾವುಗಳೆಲ್ಲರೂ ಆತ್ಮಹತ್ಯೆಯ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

8 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

9 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

11 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

12 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

15 hours ago