Andolana originals

ಮಹಿಳೆಯರಿಗೆ ಬಾಗಿನ, ಜನರಿಗೆ ಬಾದಾಮಿ ಹಾಲು

ದಿನೇಶ್‌ಕುಮಾರ್ ಎಚ್.ಎಸ್.

ಈ ಬಾರಿಯ ಆಷಾಢ ಶುಕ್ರವಾರದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಭಕ್ತರಿಗೆ ವಿಶೇಷ ವ್ಯವಸ್ಥೆ 

ಮೈಸೂರು: ಉಚಿತ ಬಾದಾಮಿ ಹಾಲು, ರವಿಕೆ ಕಣ, ಡ್ರೈಫ್ರೂಟ್ಸ್ ಹೀಗೆ ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟಕ್ಕೆ ದೇವಿಯ ದರ್ಶನಕ್ಕೆ ಬರುವ ಸಾರ್ವಜನಿಕರಿಗೆ ತಿರುಪತಿ ಮಾದರಿಯಲ್ಲಿ ಇದೇ ಪ್ರಥಮ ಬಾರಿಗೆ ಸಾಕಷ್ಟು ವ್ಯವಸ್ಥೆಗಳನ್ನು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಲ್ಪಿಸಿದೆ.

ಆಷಾಢ ಮಾಸ ಬಂತೆಂದರೆ ಸಾಕು ಚಾಮುಂಡಿಬೆಟ್ಟ ಜನರಿಂದ ತುಂಬಿ ತುಳುಕುತ್ತದೆ. ಸ್ಥಳೀಯ ನಿವಾಸಿ ಗಳಲ್ಲದೆ, ದೇಶ- ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಜನರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಾರೆ.

ಅದರಲ್ಲಿಯೂ ಆಷಾಢ ಶುಕ್ರವಾರದಂದು ಭಕ್ತ ಸಾಗರವೇ ಅಲ್ಲಿ ನೆರೆದಿರುತ್ತದೆ. ಸರತಿ ಸಾಲಿನಲ್ಲಿ ನಿಂತು ದೇವಾಲಯದ ಒಳಗೆ ತೆರಳಬೇಕಾದ ಪರಿಸ್ಥಿತಿ ಇದೆ. ಈ ವೇಳೆ ಹಲವಾರು ಮಂದಿ ಕುಡಿಯಲು ನೀರಿಲ್ಲದೆ, ಹಸಿವಿನಿಂದ ಸುಸ್ತಾಗು ವುದು ಸೇರಿದಂತೆ ನಾನಾ ತೊಂದರೆ ಎದುರಿಸಬೇಕಾಗುತ್ತದೆ. ಅಂತಹ ವರ ನೆರವಿಗೆ ಧಾವಿಸುವ ಉದ್ದೇಶದಿಂದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆಷಾಢ ಶುಕ್ರವಾರಗಳಂದು ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ಬರುವವರಿಗೆ ಅನೇಕ ಅನುಕೂಲತೆಗಳನ್ನು ಮಾಡಿಕೊಟ್ಟಿದೆ.

೫ ಸ್ಥಳಗಳಲ್ಲಿ ನೀರಿಗೆ ವ್ಯವಸ್ಥೆ: ಈ ಬಾರಿಯ ಆಷಾಢ ಶುಕ್ರವಾರದಲ್ಲಿ ಚಾಮುಂಡಿಬೆಟ್ಟದಲ್ಲಿ ಸರತಿ ಸಾಲಿನಲ್ಲಿ ನಿಂತವರಿಗೆ ಕುಡಿಯುವ ನೀರು ಒದಗಿಸುವ ಕೌಂಟರ್‌ಗಳನ್ನು ಆರಂಭಿಸಲಾಗುತ್ತಿದೆ. ಸುಮಾರು ೫ ಸ್ಥಳಗಳಲ್ಲಿ ಉಚಿತವಾಗಿ ಖನಿಜಯುಕ್ತ ನೀರಿನ ವ್ಯವಸ್ಥೆ ಮಾಡಿ ಕೊಡಲಾಗಿದೆ. ಹಣ ನೀಡಿ ನೀರಿನ ಬಾಟಲ್‌ಅನ್ನು ಸಹ ಖರೀದಿಸುವ ವ್ಯವಸ್ಥೆ ಮಾಡಲಾಗಿದೆ.

ಡ್ರೈ ಫ್ರೂಟ್ಸ್: ಸರತಿ ಸಾಲಿನಲ್ಲಿ ನಿಲ್ಲುವ ಪ್ರತಿಯೊಬ್ಬರಿಗೂ ಇದೇ ಮೊದಲ ಬಾರಿಗೆ ಸ್ವಲ್ಪ ಮಟ್ಟಿಗಿನ ತಿನಿಸನ್ನು ನೀಡಲು ಉದ್ದೇಶಿಸಲಾಗಿದೆ. ಯಾರೂ ಕೂಡ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಬಾದಾಮಿ, ಗೋಡಂಬಿ, ಖರ್ಜೂರ, ದ್ರಾಕ್ಷಿ ಹಾಗೂ ಕಲ್ಲು ಸಕ್ಕರೆಯನ್ನು ಒಳಗೊಂಡ ಸಣ್ಣ ಪೊಟ್ಟಣವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಿದೆ.

ನಾಲ್ಕು ಸ್ಥಳಗಳಲ್ಲಿ ನಂದಿನಿ ಬೂತ್ ಆರಂಭ : ಇದೇ ಮೊದಲ ಬಾರಿಗೆ ನಂದಿನಿ ಉತ್ಪನ್ನಗಳ ಮಾರಾಟಕ್ಕೂ ಮುಂದಾಗಿದ್ದು, ಧರ್ಮದರ್ಶನಕ್ಕೆ ಬರುವ ಸರತಿ ಸಾಲಿನ ಬಳಿ ಸುಮಾರು ನಾಲ್ಕು ಸ್ಥಳಗಳಲ್ಲಿ ನಂದಿನಿ ಬೂತ್ ಆರಂಭಿಸಲಾಗುತ್ತಿದೆ. ಅಲ್ಲಿ ಮಜ್ಜಿಗೆ, ಲಸ್ಸಿ, ಸಿಹಿ ತಿನಿಸುಗಳು, ಬಿಸ್ಕತ್ತುಗಳು, ಬ್ರೆಡ್, ಐಸ್ ಕ್ರೀಂ, ನೀರಿನ ಬಾಟಲ್ ಹಾಗೂ ಇನ್ನಿತರ ವಸ್ತುಗಳ ಮಾರಾಟಕ್ಕೆ ಅನುವು ಮಾಡಿ ಕೊಡಲಾಗುತ್ತಿದೆ. ಅಗತ್ಯವಿರುವವರು ಹಣವನ್ನು ಪಾವತಿಸಿ ನಂದಿನಿ ಉತ್ಪನ್ನಗಳನ್ನು ಖರೀದಿಸಬಹುದಾಗಿದೆ.

ಉಚಿತ ಬಾದಾಮಿ ಹಾಲು, ೫ ರೂ.ಗೆ ಕಾಫಿ ವಿತರಣೆ ವ್ಯವಸ್ಥೆ: ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಮತ್ತಷ್ಟು ಅನುಕೂಲತೆಗಳನ್ನು ನೀಡುವ ಉದ್ದೇಶದಿಂದ ಈ ಬಾರಿ ದರ್ಶನಕ್ಕೆ ಬರುವ ವರಿಗೆ ದೇವಾಲಯದ ವತಿಯಿಂದ ಉಚಿತವಾಗಿ ಬಾದಾಮಿ ಹಾಲನ್ನು ನೀಡಲು ನಿರ್ಧರಿಸಲಾಗಿದೆ. ಜೊತೆಗೆ ಖಾಸಗಿ ಯವರಿಂದ ೫ ರೂ. ದರದಲ್ಲಿ ಕಾಫಿ ಮಾರಾಟಕ್ಕೂ ಅನುವು ಮಾಡಿಕೊಡಲಾಗಿದೆ

” ಮಹಿಳೆಯರಿಗೆ ಉಚಿತವಾಗಿ ಬಾಗಿನ ವಿತರಣೆ ದೇವಿಯ ದರ್ಶನ ಪಡೆದು ವಾಪಸ್ಸಾಗುವ ಎಲ್ಲ ಭಕ್ತರಿಗೂ ಹೊರ ಹೋಗುವ ಗೇಟ್ ಬಳಿ ಉಚಿತ ವಾಗಿ ಪೂಜಾ ಕುಂಕುಮದ ಪ್ಯಾಕೆಟ್‌ಗಳನ್ನು ನೀಡಲು ಉದ್ದೇಶಿಸಲಾಗಿದೆ. ಆಷಾಢ ಶುಕ್ರವಾರ ಎಂದರೆ ದೇವಾಲಯಕ್ಕೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ. ಹೀಗಾಗಿ ದೇವಾಲಯಕ್ಕೆ ಬಂದ ನೆನಪನ್ನು ಮಹಿಳೆಯರು ಉಳಿಸಿ ಕೊಳ್ಳ ಬೇಕು ಎಂಬ ಉದ್ದೇಶದಿಂದ ಇದೇ ಮೊದಲ ಬಾರಿಗೆ ಎಲ್ಲಾ ಮಹಿಳೆಯರಿಗೆ ರವಿಕೆ ಕಣ, ಬಳೆ ಹಾಗೂ ಕುಂಕುಮದ ಪ್ಯಾಕೆಟ್ ಗಳನ್ನು ಒಳ ಗೊಂಡ ಬಾಗಿನವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ.”

ಆಂದೋಲನ ಡೆಸ್ಕ್

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

1 hour ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

1 hour ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

2 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

2 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

3 hours ago