Andolana originals

ಬಹುರೂಪಿ ನಾಟಕೋತ್ಸವಕ್ಕೆ ವರ್ಣರಂಜಿತ ತೆರೆ

ಮೈಸೂರು: ‘ಇವ ನಮ್ಮವ… ಇವ ನಮ್ಮವ…’ ಬಸವಣ್ಣನವರ ವಚನದ ಸಾಲಿನ ಆಶಯವನ್ನು ಹೊತ್ತು ಕಳೆದ ಆರು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿಗೆ ರಂಗರಸದೌತಣವನ್ನು ಉಣ ಬಡಿಸಿದ 24ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಸೋಮವಾರ ವರ್ಣರಂಜಿತ ತೆರೆ ಬಿತ್ತು.

ಆರು ವೇದಿಕೆಗಳಲ್ಲಿ ನಿತ್ಯ ನಾನಾ ಭಾಷೆಗಳ ನಾಟಕಗಳು, ವೈವಿಧ್ಯಮಯ ಜನಪದ ಕಾರ್ಯಕ್ರಮ, ಚಲನಚಿತ್ರೋತ್ಸವ, ಕರಕುಶಲ ಹಾಗೂ ಪುಸ್ತಕ ಪ್ರದರ್ಶನ, ಬಸವಣ್ಣನವರ ವಚನದ ಛಾಯಾಚಿತ್ರಗಳ 3ಡಿ ಪ್ರದರ್ಶನ, ವಚನ ವಾಚನದ ಮೂಲಕ ಪ್ರೇಕ್ಷಕ ವರ್ಗಕ್ಕೆ ರಸದೌತಣ ಉಣಬಡಿಸಿತು.

ಪುಸ್ತಕ ಮೇಳ, ದೇಶಿ ತಿನಿಸು ಮೇಳ, ಕರಕುಶಲ ಮೇಳ ಹೀಗೆ ನಾನಾ ಕಾರ್ಯಕ್ರಮಗಳ ಮೂಲಕ ಎಲ್ಲಾ ವಯೋಮಾನದ ಮತ್ತು ವರ್ಗದ ಜನರನು ಬೆಸೆಯಿತು.

ನಾಟಕೋತ್ಸವಕ್ಕಾಗಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 300ಕ್ಕೂ ಹೆಚ್ಚಿನ ಕಲಾವಿದರು ತಮ್ಮ ಕಲಾ ಪ್ರದರ್ಶಿಸಿದರು. ರಂಗಾಯಣದ ಭೂಮಿಗೀತ, ವನರಂಗ, ಕಲಾಮಂದಿರ, ಕಿರುರಂಗಮಂದಿರ ವೇದಿಕೆಗಳಲ್ಲಿ ಕನ್ನಡದ 12 ಹಾಗೂ ತುಳು ಭಾಷೆಯ ಒಂದು, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕೋಲ್ಕತ್ತಾ ಮಣಿಪುರ, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ 6 ನಾಟಕಗಳೂ ಸೇರಿದಂತೆ ಒಟ್ಟು 19 ನಾಟಕಗಳು ಮತ್ತು ಮಹಿಳಾ ಆಶಯವುಳ್ಳ ಒಂದು ಯಕ್ಷಗಾನ ಪ್ರದರ್ಶನಗೊಂಡವು.

ಜನಪದೋತ್ಸವದಲ್ಲಿ ಚಂದದ ದೃಶ್ಯಾವಳಿ

ಮೈಸೂರು: ತುಳುನಾಡಿನ ಕಂಗೀಲು ನೃತ್ಯದ ವೈಭೋಗ, ಉಡುಪಿಯ ಕರಗ ಕೋಲಾಟದ ಸೊಗಡು..! ಇದು 24ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಕೊನೆಯ ದಿನವಾದ ಸೋಮವಾರದ ಜನಪದೊತ್ಸವದಲ್ಲಿ ಕಂಡು ಬಂದ ಚಂದದ ದೃಶ್ಯಾವಳಿಗಳು.

ಕಿಂದರಿಜೋಗಿ ಆವರಣದಲ್ಲಿ ಸುಳ್ಯದ ಬಂಗ್ಲೆ ಗುಡ್ಡೆಯ ಸುಗಿಪು ಜಾನಪದ ಕಲಾ ತಂಡದ ಕಂಗೀಲು ಪಾತ್ರಧಾರಿಗಳು ತೆಂಗಿನ ತಿಲಂಗ ಧರಿಸಿ ಕುಣಿಯುತ್ತಿದ್ದ ಬಗೆ ನೋಡುಗರನ್ನು ಒಂದು ಕ್ಷಣ ಅವಕ್ಕಾಗಿಸಿತು. ಕಂಗೀಲು ಒಂದು ಜಾನಪದ ಕುಣಿತವೂ ಹೌದು, ಆಚರಣೆಯೂ ಹೌದು. ಊರಿಗೆ ಬಂದ ಮಾರಿಯನ್ನು ಓಡಿಸುವ ಆಶಯವಿರುವ ಈ ಜನಪದ ಕುಣಿತ ತುಳುನಾಡಿನ ಪ್ರಮುಖ ಪ್ರದರ್ಶಕ ಕಲೆ ಆಗಿದ್ದು, ಸಾಂಸ್ಕೃತಿಕ ನಗರಿಯ ರಂಗಾಸಕ್ತರು ಈ ಕಲೆಯ ಸವಿ ಸವಿದರು.

ಉಡುಪಿಯ ಉದ್ಯಾವರದ ಪುನೀತ್ ತಂಡದ ಕಲಾವಿದರು ನಡೆಸಿಕೊಟ್ಟ ಕರಗ ಕೋಲಾಟ ಅದ್ಭುತವಾಗಿ ಮೂಡಿಬಂತು. ತಮಟೆ ಮತ್ತು ನಾದಸ್ವರದ ನಾದಕ್ಕೆ ತಲೆ ಮೇಲೆ ಅಲಂಕೃತಗೊಂಡ ಕರಗ ಹೊತ್ತು ಕೈಯಲ್ಲಿ ಬಣ್ಣ ಬಳಿದ ಕೋಲುಗಳನ್ನು ಹಿಡಿದು ಕಲಾವಿದರು ಪ್ರದರ್ಶಿಸಿದ ನೃತ್ಯ ಬಹರೂಪಿಗೆ ಮೆರುಗು ತಂದಿತು.

ಕೊನೆಯ ದಿನ ಮೇಳೈಸಿದ ರಂಗಕಲೆ

ಮೈಸೂರು: ಕೊನೆಯ ದಿನದ ಬಹುರೂಪಿಯಲ್ಲಿ ರಂಗಾಯಣದ ಅಂಗಳದಲ್ಲಿ ರಂಗ ಕಲೆ ಮೇಳೈಸಿತು. ಮಧ್ಯಾಹ್ನದವರೆಗೂ ರಂಗಾಯಣದ ಆವರಣ ಭಣಗುಟ್ಟುತ್ತಿತ್ತು. ಸಂಜೆಯಾಗುತ್ತಲೇ ರಂಗಾಯಣದತ್ತ ಆಗಮಿಸಿದ ನೂರಾರು ಸಾರ್ವಜನಿಕರು ನಾಟಕೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.

ಅಂತಿಮ ದಿನದಂದು ಪ್ರದರ್ಶನಗೊಂಡ ಪ್ರಶಾಂತ್ ಹಿರೇಮಠ ನಿರ್ದೆಶನದ ಕನ್ನಡ ಭಾಷೆಯ ‘ಪಾರ್ಶ್ವಸಂಗೀತ’, ಹೌದಮ್ ವಿಕ್ಟರ್‌ ಸಿಂಗ್ ನಿರ್ದೆಶನದ ಸಂಭಾಷಣಾ ‘ಅಬೊರಿಜಿನಲ್ ಕೈ’, ದಿನೇಶ್ ಚಮಾಳಿಗೆ ನಿರ್ದೇಶನದ ಕನ್ನಡ ಭಾಷೆಯ ‘ಬೆರಳೆ ಕೊರಳ್’, ಜೆ.ಪಿ.ತೂಮಿನಾಡು ನಿರ್ದೆಶನದ ತುಳು ಭಾಷೆಯ ಕಥೆ ಎಡೇಂಡು’ ನಾಟಕಗಳು ಪ್ರಮುಖ ಆಕರ್ಷಣೆಯಾಗಿದ್ದವು.

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

7 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago