ಓದುಗರ ಪತ್ರ
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ಲಕ್ಷ್ಮಣತೀರ್ಥ ನದಿಗೆ ಹೊಂದಿಕೊಂಡಂತೆ ಕೆ.ಆರ್ ನಗರ – ಹುಣಸೂರು ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಸುಮಾರು ೬-೭ ಮೀನು ಮಾರಾಟ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರವನ್ನು ಮಾಡುತ್ತಾರೆ.
ಮೀನುಗಳನ್ನು ಖರೀದಿಸುವವರು ಸ್ಕೂಟರ್, ಕಾರುಗಳನ್ನು ರಸ್ತೆಗೆ ಹೊಂದಿಕೊಂಡಂತೆ ನಿಲ್ಲಿಸಿ ರಸ್ತೆಯಲ್ಲೇ ನಿಂತಿರುತ್ತಾರೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಈ ಸ್ಥಳದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗೂ ಪ್ರತಿದಿನ ಮೀನು ಮಾರಾಟ ಮಾಡುವ ಜಾಗದಲ್ಲಿ ಗಲಾಟೆಗಳೂ ನಡೆಯುತ್ತಿವೆ. ಅಲ್ಲದೇ ಈ ಮೀನು ಮಾರಾಟಗಾರರು ನದಿಗೆ ತ್ಯಾಜ್ಯ ಪದಾರ್ಥಗಳನ್ನು ಹಾಕುತ್ತಿರುವುದರಿಂದ ವಾತಾವರಣ ಕಲುಷಿತಗೊಂಡಿದೆ. ಆದ್ದರಿಂದ ಇಲ್ಲಿನ ಮೀನು ಮಾರಾಟ ಮಳಿಗೆಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಿದೆ.
-ಮಹದೇವಮ್ಮ, ಕಟ್ಟೆಮಳಲವಾಡಿ, ಹುಣಸೂರು ತಾ
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…