ಓದುಗರ ಪತ್ರ
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ಲಕ್ಷ್ಮಣತೀರ್ಥ ನದಿಗೆ ಹೊಂದಿಕೊಂಡಂತೆ ಕೆ.ಆರ್ ನಗರ – ಹುಣಸೂರು ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಸುಮಾರು ೬-೭ ಮೀನು ಮಾರಾಟ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರವನ್ನು ಮಾಡುತ್ತಾರೆ.
ಮೀನುಗಳನ್ನು ಖರೀದಿಸುವವರು ಸ್ಕೂಟರ್, ಕಾರುಗಳನ್ನು ರಸ್ತೆಗೆ ಹೊಂದಿಕೊಂಡಂತೆ ನಿಲ್ಲಿಸಿ ರಸ್ತೆಯಲ್ಲೇ ನಿಂತಿರುತ್ತಾರೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಈ ಸ್ಥಳದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗೂ ಪ್ರತಿದಿನ ಮೀನು ಮಾರಾಟ ಮಾಡುವ ಜಾಗದಲ್ಲಿ ಗಲಾಟೆಗಳೂ ನಡೆಯುತ್ತಿವೆ. ಅಲ್ಲದೇ ಈ ಮೀನು ಮಾರಾಟಗಾರರು ನದಿಗೆ ತ್ಯಾಜ್ಯ ಪದಾರ್ಥಗಳನ್ನು ಹಾಕುತ್ತಿರುವುದರಿಂದ ವಾತಾವರಣ ಕಲುಷಿತಗೊಂಡಿದೆ. ಆದ್ದರಿಂದ ಇಲ್ಲಿನ ಮೀನು ಮಾರಾಟ ಮಳಿಗೆಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಿದೆ.
-ಮಹದೇವಮ್ಮ, ಕಟ್ಟೆಮಳಲವಾಡಿ, ಹುಣಸೂರು ತಾ
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…