Andolana originals

ಓದುಗರ ಪತ್ರ: ಆನ್‌ಲೈನ್ ಗೇಮಿಂಗ್ ನಿಷೇಧಿಸಿ

ಇತ್ತೀಚೆಗೆ ಮೊಬೈಲ್, ಕಂಪ್ಯೂಟರ್‌ಗಳಿಗೆ ಜೋತುಬಿದ್ದಿರುವ ಯುವ ಸಮೂಹ ಆನ್‌ಲೈನ್ ಗೇಮಿಂಗ್‌ಗಳಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ಬೆಟ್ಟಿಂಗ್ ಗೇಮ್ಗಳು ಯುವ ಸಮೂಹವನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ.

ಇತ್ತೀಚೆಗೆ ‘ಮೆಲ್‌ಬೆಟ್’ ಎಂಬ ಹೊಸ ಆನ್‌ಲೈನ್‌ ಬೆಟ್ಟಿಂಗ್ ಆಟವು ಪ್ರಾರಂಭವಾಗಿದ್ದು, ಅನೇಕ ಭಾಗಗಳಲ್ಲಿ ಇದರ ಜಾಹೀರಾತಿನ ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಇದೊಂದೇ ಅಲ್ಲದೆ ಇಂತಹ ನೂರಾರು ಆನ್‌ಲೈನ್ ಆಟಗಳು ಜಾಹೀರಾತುಗಳ ಮೂಲಕ ಯುವ ಸಮೂಹವನ್ನು ಸೆಳೆಯುತ್ತಿದ್ದು, ಕೆಲ ಸಿನಿಮಾ ನಟ-ನಟಿಯರೂ ಈ ಆಟಗಳನು ಪ್ರಮೋಟ್ ಮಾಡುವ ಮೂಲಕ ಪ್ರಚೋದನೆ ನೀಡುತ್ತಿದ್ದಾರೆ.

ಯುವ ಸಮೂಹವನ್ನೇ ಟಾರ್ಗೆಟ್ ಮಾಡಿಕೊಂಡಿರುವ ಈ ಗೇಮಿಂಗ್ ಈ ಆ್ಯಪ್‌ಗಳು ಅವರಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂಬ ಆಸೆಯನ್ನು ಹುಟ್ಟಿಸಿ ಈ ಗೇಮಿಂಗ್ ದಂಧೆಗೆ ಸಿಲುಕಿಸಿಕೊಂಡು ಹಣ ಕಸಿಯುತ್ತಿವೆ. ಇಂತಹ ಗೇಮಿಂಗ್‌ಗಳಿಂದ ಹಣ ಕಳೆದುಕೊಂಡ ಯುವ ಸಮೂಹ ಮತ್ತೆ ಹಣ ಗಳಿಸಲು ಅಡ್ಡ ದಾರಿ ಹಿಡಿಯುವ ಸಾಧ್ಯತೆಗಳಿರುತ್ತವೆ. ಇವು ಅಪಾಯಕಾರಿ ಆಟಗಳು ಎಂದು ಗೊತ್ತಿದ್ದರೂ ಇವುಗಳನ್ನು ಪ್ರಚಾರ ಮಾಡಲು ಮತ್ತು ಆಡಿಸಲು ಅನುಮತಿ ನೀಡಿರುವುದು ವಿಷಾದಕರ ಸಂಗತಿ. ಈ ಬಗ್ಗೆ ಸರ್ಕಾರ ಕೂಡಲೇ ಗಮನಹರಿಸಿ ಆನ್‌ ಲೈನ್ ಬೆಟ್ಟಿಂಗ್ ಗೇಮ್‌ಗಳನ್ನು ನಿಷೇಧಿಸಬೇಕು.

-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

7 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

7 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago