Andolana originals

ಓದುಗರ ಪತ್ರ: ಆನ್‌ಲೈನ್ ಗೇಮಿಂಗ್ ನಿಷೇಧಿಸಿ

ಇತ್ತೀಚೆಗೆ ಮೊಬೈಲ್, ಕಂಪ್ಯೂಟರ್‌ಗಳಿಗೆ ಜೋತುಬಿದ್ದಿರುವ ಯುವ ಸಮೂಹ ಆನ್‌ಲೈನ್ ಗೇಮಿಂಗ್‌ಗಳಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ಬೆಟ್ಟಿಂಗ್ ಗೇಮ್ಗಳು ಯುವ ಸಮೂಹವನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ.

ಇತ್ತೀಚೆಗೆ ‘ಮೆಲ್‌ಬೆಟ್’ ಎಂಬ ಹೊಸ ಆನ್‌ಲೈನ್‌ ಬೆಟ್ಟಿಂಗ್ ಆಟವು ಪ್ರಾರಂಭವಾಗಿದ್ದು, ಅನೇಕ ಭಾಗಗಳಲ್ಲಿ ಇದರ ಜಾಹೀರಾತಿನ ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಇದೊಂದೇ ಅಲ್ಲದೆ ಇಂತಹ ನೂರಾರು ಆನ್‌ಲೈನ್ ಆಟಗಳು ಜಾಹೀರಾತುಗಳ ಮೂಲಕ ಯುವ ಸಮೂಹವನ್ನು ಸೆಳೆಯುತ್ತಿದ್ದು, ಕೆಲ ಸಿನಿಮಾ ನಟ-ನಟಿಯರೂ ಈ ಆಟಗಳನು ಪ್ರಮೋಟ್ ಮಾಡುವ ಮೂಲಕ ಪ್ರಚೋದನೆ ನೀಡುತ್ತಿದ್ದಾರೆ.

ಯುವ ಸಮೂಹವನ್ನೇ ಟಾರ್ಗೆಟ್ ಮಾಡಿಕೊಂಡಿರುವ ಈ ಗೇಮಿಂಗ್ ಈ ಆ್ಯಪ್‌ಗಳು ಅವರಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂಬ ಆಸೆಯನ್ನು ಹುಟ್ಟಿಸಿ ಈ ಗೇಮಿಂಗ್ ದಂಧೆಗೆ ಸಿಲುಕಿಸಿಕೊಂಡು ಹಣ ಕಸಿಯುತ್ತಿವೆ. ಇಂತಹ ಗೇಮಿಂಗ್‌ಗಳಿಂದ ಹಣ ಕಳೆದುಕೊಂಡ ಯುವ ಸಮೂಹ ಮತ್ತೆ ಹಣ ಗಳಿಸಲು ಅಡ್ಡ ದಾರಿ ಹಿಡಿಯುವ ಸಾಧ್ಯತೆಗಳಿರುತ್ತವೆ. ಇವು ಅಪಾಯಕಾರಿ ಆಟಗಳು ಎಂದು ಗೊತ್ತಿದ್ದರೂ ಇವುಗಳನ್ನು ಪ್ರಚಾರ ಮಾಡಲು ಮತ್ತು ಆಡಿಸಲು ಅನುಮತಿ ನೀಡಿರುವುದು ವಿಷಾದಕರ ಸಂಗತಿ. ಈ ಬಗ್ಗೆ ಸರ್ಕಾರ ಕೂಡಲೇ ಗಮನಹರಿಸಿ ಆನ್‌ ಲೈನ್ ಬೆಟ್ಟಿಂಗ್ ಗೇಮ್‌ಗಳನ್ನು ನಿಷೇಧಿಸಬೇಕು.

-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರಬೆಟ್ಟ ಠಾಣೆ ಮುಖ್ಯಪೇದೆ ಅಮಾನತ್ತು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಲಾರಿ ಚಾಲಕನ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಮುಖ್ಯಪೇದೆಯನ್ನು ಕೊಳ್ಳೇಗಾಲ…

6 hours ago

ಸಾಕು ನಾಯಿ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ನಂಜನಗೂಡು: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ತಾಲ್ಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

7 hours ago

ಹನೂರು| ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಮತ್ತೊಂದು ಚಿರತೆ ಸೆರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಇಂಡಿಗನತ್ತ, ನಾಗಮಲೆ ಗ್ರಾಮಗಳಲ್ಲಿ ಹಲವಾರು…

7 hours ago

ಮೈಸೂರು ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್‌ ಪೂರ್ಣ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

8 hours ago

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ: ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೆಆರ್‌ಎಸ್‌ನಲ್ಲಿ ಸದ್ಯಕ್ಕೆ ನೀರಿನ ಕೊರತೆಯಿಲ್ಲ ಎಂದು ಶಾಸಕ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು…

8 hours ago