Andolana originals

ಓದುಗರ ಪತ್ರ: ಆನ್‌ಲೈನ್ ಗೇಮಿಂಗ್ ನಿಷೇಧಿಸಿ

ಇತ್ತೀಚೆಗೆ ಮೊಬೈಲ್, ಕಂಪ್ಯೂಟರ್‌ಗಳಿಗೆ ಜೋತುಬಿದ್ದಿರುವ ಯುವ ಸಮೂಹ ಆನ್‌ಲೈನ್ ಗೇಮಿಂಗ್‌ಗಳಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ಬೆಟ್ಟಿಂಗ್ ಗೇಮ್ಗಳು ಯುವ ಸಮೂಹವನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ.

ಇತ್ತೀಚೆಗೆ ‘ಮೆಲ್‌ಬೆಟ್’ ಎಂಬ ಹೊಸ ಆನ್‌ಲೈನ್‌ ಬೆಟ್ಟಿಂಗ್ ಆಟವು ಪ್ರಾರಂಭವಾಗಿದ್ದು, ಅನೇಕ ಭಾಗಗಳಲ್ಲಿ ಇದರ ಜಾಹೀರಾತಿನ ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಇದೊಂದೇ ಅಲ್ಲದೆ ಇಂತಹ ನೂರಾರು ಆನ್‌ಲೈನ್ ಆಟಗಳು ಜಾಹೀರಾತುಗಳ ಮೂಲಕ ಯುವ ಸಮೂಹವನ್ನು ಸೆಳೆಯುತ್ತಿದ್ದು, ಕೆಲ ಸಿನಿಮಾ ನಟ-ನಟಿಯರೂ ಈ ಆಟಗಳನು ಪ್ರಮೋಟ್ ಮಾಡುವ ಮೂಲಕ ಪ್ರಚೋದನೆ ನೀಡುತ್ತಿದ್ದಾರೆ.

ಯುವ ಸಮೂಹವನ್ನೇ ಟಾರ್ಗೆಟ್ ಮಾಡಿಕೊಂಡಿರುವ ಈ ಗೇಮಿಂಗ್ ಈ ಆ್ಯಪ್‌ಗಳು ಅವರಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂಬ ಆಸೆಯನ್ನು ಹುಟ್ಟಿಸಿ ಈ ಗೇಮಿಂಗ್ ದಂಧೆಗೆ ಸಿಲುಕಿಸಿಕೊಂಡು ಹಣ ಕಸಿಯುತ್ತಿವೆ. ಇಂತಹ ಗೇಮಿಂಗ್‌ಗಳಿಂದ ಹಣ ಕಳೆದುಕೊಂಡ ಯುವ ಸಮೂಹ ಮತ್ತೆ ಹಣ ಗಳಿಸಲು ಅಡ್ಡ ದಾರಿ ಹಿಡಿಯುವ ಸಾಧ್ಯತೆಗಳಿರುತ್ತವೆ. ಇವು ಅಪಾಯಕಾರಿ ಆಟಗಳು ಎಂದು ಗೊತ್ತಿದ್ದರೂ ಇವುಗಳನ್ನು ಪ್ರಚಾರ ಮಾಡಲು ಮತ್ತು ಆಡಿಸಲು ಅನುಮತಿ ನೀಡಿರುವುದು ವಿಷಾದಕರ ಸಂಗತಿ. ಈ ಬಗ್ಗೆ ಸರ್ಕಾರ ಕೂಡಲೇ ಗಮನಹರಿಸಿ ಆನ್‌ ಲೈನ್ ಬೆಟ್ಟಿಂಗ್ ಗೇಮ್‌ಗಳನ್ನು ನಿಷೇಧಿಸಬೇಕು.

-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

2 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

3 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

3 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

4 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

5 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

8 hours ago