Andolana originals

ಭಾರೀ ಗಾಳಿ – ಮಳೆಗೆ ನೆಲ ಕಚ್ಚಿದ ಬಾಳೆ

ಮಂಜು ಕೋಟೆ

ಎಚ್. ಡಿ. ಕೋಟೆ: ಭಾನುವಾರ ರಾತ್ರಿ ಬೀಸಿದ ಗಾಳಿ ಮಳೆಗೆ ನೂರಾರು ಎಕರೆಯಲ್ಲಿ ಬೆಳೆದಿದ್ದ ಬಾಳೆ ಬೆಳೆ ಮತ್ತು ಮುಸುಕಿನ ಜೋಳದ ಬೆಳೆಗಳು ನೆಲಕಚ್ಚಿ, ೮ ಕೋಟಿ ರೂ. ಗೂ ಹೆಚ್ಚು ನಷ್ಟವಾಗಿ ರೈತ ಕುಟುಂಬಗಳು ಕಂಗಾಲಾಗಿವೆ.

ಪಟ್ಟಣದಿಂದ ೧೦ ಕಿ. ಮೀ. ದೂರದಲ್ಲಿರುವ ನಾಗನಹಳ್ಳಿ ಮತ್ತು ಹಿರೇಹಳ್ಳಿ ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ಹೆಗಡಾಪುರ, ನಾಗನಹಳ್ಳಿ, ಚಕ್ಕೋಡನಹಳ್ಳಿ, ಚಾಕಹಳ್ಳಿ, ಸೋನಳ್ಳಿ, ದಟ್ಟಳ್ಳ, ದಾಸನಪುರ, ಹಿರೇಹಳ್ಳಿ, ಕೊತ್ತನಹಳ್ಳಿ, ಅಂಕನಾಥಪುರ ಗ್ರಾಮಗಳ ವ್ಯಾಪ್ತಿಯಲ್ಲಿರುವ ೨೦೦ ಎಕರೆಗೂ ಹೆಚ್ಚು ಪ್ರದೇಶದಲ್ಲಿ ೧೩೦ ಮಂದಿ ರೈತರು ಬೆಳೆದಿದ್ದ ನೇಂದ್ರ ಮತ್ತು ಏಲಕ್ಕಿ ಬಾಳೆ ಬೆಳೆಗಳು ಭಾನುವಾರ ಸಂಜೆ ೭. ೩೦ರ ಸಮಯದಲ್ಲಿ ಸುರಿದ ಗಾಳಿ ಮಳೆಗೆ ಸಂಪೂರ್ಣವಾಗಿ ನೆಲಕಚ್ಚಿವೆ.

ಎಕರೆಗೆ ೪ ಲಕ್ಷ ರೂ. ಗಳೆಂದರೂ ೨೦೦ ಎಕರೆಯಲ್ಲಿ ಬೆಳೆದಿದ್ದ ೮ ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ರೈತರುಗಳಾದ ದೊರೆದಾಸ್, ಭಾಗ್ಯಮ್ಮ, ನಾಗನಹಳ್ಳಿ ಶಾಂತ, ಪ್ರದೀಪ , ಸೀತಮ್ಮ, ನಂಜಪ್ಪ, ಸುರೇಂದ್ರ ನಾಯಕ, ಬಸವ ಶೆಟ್ಟಿ, ಮುರುಗನ್, ಅಂತೋಣಿ, ರಾಜು, ರಾಜೇಂದ್ರ, ಪ್ರಸಾದು, ಕಾಂತರಾಜು, ಮಾರ್ಟಿನ್, ಜೋಶಪ್ಪ, ಸುಂದರ, ಶಿವರಾಜು, ಜೇಕಬ್, ರಾಯಪ್ಪ, ಚೌಕಪ್ಪ, ತಮ್ಮಯ್ಯ, ಕೆಂಡಗಣ್ಣ, ಮುತ್ತಣ್ಣ, ನಂಜಪ್ಪ, ಮಂಜು, ನಿಂಗೇಗೌಡ, ರಾಜಪ್ಪ, ದೊಡ್ಡಯ್ಯ, ಬಸವ ನಾಯಕ, ಚಂದ್ರು, ಸಂದೇಶ, ರಾಜೇಶ್, ಈರಯ್ಯ, ಸಣ್ಣ ತಾಯಮ್ಮ, ಕೆಂಚಯ್ಯ, ಮಾರಯ್ಯ, ಹನುಮಂತಯ್ಯ ಮುಂತಾದವರ ಜಮೀನುಗಳಲ್ಲಿ ಸಾಲ ಮಾಡಿ ಲಕ್ಷಾಂತರ ರೂ. ಖರ್ಚು ಮಾಡಿ ನೇಂದ್ರ ಮತ್ತು ಏಲಕ್ಕಿ ಬಾಳೆಯನ್ನು ಬೆಳೆಯಲಾಗಿತ್ತು. ಆದರೆ, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಬಾಳೆ ಗೊನೆ ಕೊಯ್ಲಿಗೆ ಬಂದಿದ್ದವು. ಅನೇಕ ರೈತರು ತಮ್ಮ ಜಮೀನಿಗೆ ಹೋಗಿ ಮುರಿದುಬಿದ್ದ ಬೆಳೆಗಳನ್ನು ನೋಡಿ ಗೋಳಾಡುತ್ತಿದ್ದುದು ಕಂಡುಬಂದಿತು. ಸರ್ಕಾರ, ಅಽಕಾರಿಗಳು, ಜನಪ್ರತಿನಿಽಗಳು ನೊಂದ ರೈತರಿಗೆ ಪರಿಹಾರ ನೀಡಬೇಕಿದೆ. ಆದರೆ, ಕಂದಾಯ ಇಲಾಖೆಯ ಆರ್‌ಐ ಮತ್ತು ವಿಎಗಳು ಜಮೀನುಗಳತ್ತ ಭೇಟಿ ನೀಡಿಲ್ಲ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕಂದಾಯ ಇಲಾಖೆಯ ನೌಕರರು ಪ್ರತಿಭಟನೆ ನಡೆಸುತ್ತಿರುವುದರಿಂದ ರೈತರ ಗೋಳು ಕೇಳುವವರಿಲ್ಲದಂತಾಗಿದೆ. ತೋಟಗಾರಿಕೆ ಇಲಾಖೆ ಅಽಕಾರಿಯ ನೇತ್ರಾವತಿ ಮತ್ತು ಶಿವನಾಗ ಅವರು ಕೆಲವೊಂದು ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಕಂದಾಯ ಅಧಿಕಾರಿಗಳನ್ನು ರೈತರ ಜಮೀನು ಗಳಿಗೆ ಕಳುಹಿಸಲಾಗಿದ್ದು ಸಮಗ್ರ ವರದಿಯನ್ನು ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಕಳಿಸಲಾಗುವುದು. -ಶ್ರೀನಿವಾಸ್, ತಹಸಿಲ್ದಾರ್

೨ ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದೆ. ಗಾಳಿ-ಮಳೆಗೆ ಸಂಪೂರ್ಣ ನಾಶವಾಗಿ ೮ ಲಕ್ಷ ರೂ. ಗಳಿಗೂ ಹೆಚ್ಚು ನಷ್ಟವಾಗಿದೆ. ಸೂಕ್ತ ಪರಿಹಾರ ಸರ್ಕಾರ ನೀಡದಿದ್ದರೆ ಈ ಭಾಗದ ರೈತರ ಬದುಕು ಬೀದಿ ಪಾಲಾಗಲಿದೆ. -ದೊರೆದಾಸ್, ರೈತ, ದಾಸನಪುರ.

 

 

 

andolana

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

5 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

7 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

7 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

7 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

8 hours ago