Andolana originals

ಭಾರೀ ಗಾಳಿ – ಮಳೆಗೆ ನೆಲ ಕಚ್ಚಿದ ಬಾಳೆ

ಮಂಜು ಕೋಟೆ

ಎಚ್. ಡಿ. ಕೋಟೆ: ಭಾನುವಾರ ರಾತ್ರಿ ಬೀಸಿದ ಗಾಳಿ ಮಳೆಗೆ ನೂರಾರು ಎಕರೆಯಲ್ಲಿ ಬೆಳೆದಿದ್ದ ಬಾಳೆ ಬೆಳೆ ಮತ್ತು ಮುಸುಕಿನ ಜೋಳದ ಬೆಳೆಗಳು ನೆಲಕಚ್ಚಿ, ೮ ಕೋಟಿ ರೂ. ಗೂ ಹೆಚ್ಚು ನಷ್ಟವಾಗಿ ರೈತ ಕುಟುಂಬಗಳು ಕಂಗಾಲಾಗಿವೆ.

ಪಟ್ಟಣದಿಂದ ೧೦ ಕಿ. ಮೀ. ದೂರದಲ್ಲಿರುವ ನಾಗನಹಳ್ಳಿ ಮತ್ತು ಹಿರೇಹಳ್ಳಿ ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ಹೆಗಡಾಪುರ, ನಾಗನಹಳ್ಳಿ, ಚಕ್ಕೋಡನಹಳ್ಳಿ, ಚಾಕಹಳ್ಳಿ, ಸೋನಳ್ಳಿ, ದಟ್ಟಳ್ಳ, ದಾಸನಪುರ, ಹಿರೇಹಳ್ಳಿ, ಕೊತ್ತನಹಳ್ಳಿ, ಅಂಕನಾಥಪುರ ಗ್ರಾಮಗಳ ವ್ಯಾಪ್ತಿಯಲ್ಲಿರುವ ೨೦೦ ಎಕರೆಗೂ ಹೆಚ್ಚು ಪ್ರದೇಶದಲ್ಲಿ ೧೩೦ ಮಂದಿ ರೈತರು ಬೆಳೆದಿದ್ದ ನೇಂದ್ರ ಮತ್ತು ಏಲಕ್ಕಿ ಬಾಳೆ ಬೆಳೆಗಳು ಭಾನುವಾರ ಸಂಜೆ ೭. ೩೦ರ ಸಮಯದಲ್ಲಿ ಸುರಿದ ಗಾಳಿ ಮಳೆಗೆ ಸಂಪೂರ್ಣವಾಗಿ ನೆಲಕಚ್ಚಿವೆ.

ಎಕರೆಗೆ ೪ ಲಕ್ಷ ರೂ. ಗಳೆಂದರೂ ೨೦೦ ಎಕರೆಯಲ್ಲಿ ಬೆಳೆದಿದ್ದ ೮ ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ರೈತರುಗಳಾದ ದೊರೆದಾಸ್, ಭಾಗ್ಯಮ್ಮ, ನಾಗನಹಳ್ಳಿ ಶಾಂತ, ಪ್ರದೀಪ , ಸೀತಮ್ಮ, ನಂಜಪ್ಪ, ಸುರೇಂದ್ರ ನಾಯಕ, ಬಸವ ಶೆಟ್ಟಿ, ಮುರುಗನ್, ಅಂತೋಣಿ, ರಾಜು, ರಾಜೇಂದ್ರ, ಪ್ರಸಾದು, ಕಾಂತರಾಜು, ಮಾರ್ಟಿನ್, ಜೋಶಪ್ಪ, ಸುಂದರ, ಶಿವರಾಜು, ಜೇಕಬ್, ರಾಯಪ್ಪ, ಚೌಕಪ್ಪ, ತಮ್ಮಯ್ಯ, ಕೆಂಡಗಣ್ಣ, ಮುತ್ತಣ್ಣ, ನಂಜಪ್ಪ, ಮಂಜು, ನಿಂಗೇಗೌಡ, ರಾಜಪ್ಪ, ದೊಡ್ಡಯ್ಯ, ಬಸವ ನಾಯಕ, ಚಂದ್ರು, ಸಂದೇಶ, ರಾಜೇಶ್, ಈರಯ್ಯ, ಸಣ್ಣ ತಾಯಮ್ಮ, ಕೆಂಚಯ್ಯ, ಮಾರಯ್ಯ, ಹನುಮಂತಯ್ಯ ಮುಂತಾದವರ ಜಮೀನುಗಳಲ್ಲಿ ಸಾಲ ಮಾಡಿ ಲಕ್ಷಾಂತರ ರೂ. ಖರ್ಚು ಮಾಡಿ ನೇಂದ್ರ ಮತ್ತು ಏಲಕ್ಕಿ ಬಾಳೆಯನ್ನು ಬೆಳೆಯಲಾಗಿತ್ತು. ಆದರೆ, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಬಾಳೆ ಗೊನೆ ಕೊಯ್ಲಿಗೆ ಬಂದಿದ್ದವು. ಅನೇಕ ರೈತರು ತಮ್ಮ ಜಮೀನಿಗೆ ಹೋಗಿ ಮುರಿದುಬಿದ್ದ ಬೆಳೆಗಳನ್ನು ನೋಡಿ ಗೋಳಾಡುತ್ತಿದ್ದುದು ಕಂಡುಬಂದಿತು. ಸರ್ಕಾರ, ಅಽಕಾರಿಗಳು, ಜನಪ್ರತಿನಿಽಗಳು ನೊಂದ ರೈತರಿಗೆ ಪರಿಹಾರ ನೀಡಬೇಕಿದೆ. ಆದರೆ, ಕಂದಾಯ ಇಲಾಖೆಯ ಆರ್‌ಐ ಮತ್ತು ವಿಎಗಳು ಜಮೀನುಗಳತ್ತ ಭೇಟಿ ನೀಡಿಲ್ಲ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕಂದಾಯ ಇಲಾಖೆಯ ನೌಕರರು ಪ್ರತಿಭಟನೆ ನಡೆಸುತ್ತಿರುವುದರಿಂದ ರೈತರ ಗೋಳು ಕೇಳುವವರಿಲ್ಲದಂತಾಗಿದೆ. ತೋಟಗಾರಿಕೆ ಇಲಾಖೆ ಅಽಕಾರಿಯ ನೇತ್ರಾವತಿ ಮತ್ತು ಶಿವನಾಗ ಅವರು ಕೆಲವೊಂದು ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಕಂದಾಯ ಅಧಿಕಾರಿಗಳನ್ನು ರೈತರ ಜಮೀನು ಗಳಿಗೆ ಕಳುಹಿಸಲಾಗಿದ್ದು ಸಮಗ್ರ ವರದಿಯನ್ನು ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಕಳಿಸಲಾಗುವುದು. -ಶ್ರೀನಿವಾಸ್, ತಹಸಿಲ್ದಾರ್

೨ ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದೆ. ಗಾಳಿ-ಮಳೆಗೆ ಸಂಪೂರ್ಣ ನಾಶವಾಗಿ ೮ ಲಕ್ಷ ರೂ. ಗಳಿಗೂ ಹೆಚ್ಚು ನಷ್ಟವಾಗಿದೆ. ಸೂಕ್ತ ಪರಿಹಾರ ಸರ್ಕಾರ ನೀಡದಿದ್ದರೆ ಈ ಭಾಗದ ರೈತರ ಬದುಕು ಬೀದಿ ಪಾಲಾಗಲಿದೆ. -ದೊರೆದಾಸ್, ರೈತ, ದಾಸನಪುರ.

 

 

 

andolana

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

8 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

8 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago