ಓದುಗರ ಪತ್ರ
ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆ ಮಾಡಿರುವುದು ಸ್ವಾಗತಾರ್ಹ ನು ಮುಷ್ತಾಕ್ ಅವರು ಹೆಣ್ಣಿನ ಶೋಷಣೆಯ ಕುರಿತಾಗಿ ಸುಮಾರು ಐವತ್ತು ಕತೆಗಳನ್ನು ಬರೆದಿದ್ದಾರೆ. ಯಾವುದೇ ಧರ್ಮದಲ್ಲಿ ಹೆಣ್ಣಿನ ಮೇಲೆ ನಡೆಯುವ ಶೋಷಣೆಯನ್ನು ವಿರೋಧಿಸುವ ಅವರನ್ನು ಸರ್ವ ಧರ್ಮದವರೂ ಸ್ವಾಗತಿಸಬೇಕು.
ಸರ್ ಮಿರ್ಜಾ ಇಸ್ಮಾಯಿಲ್ ಅವರು ದಿವಾನರಾಗಿದ್ದಾಗ, ಹಿಂದೂಯೇತರ ಅನೇಕ ಪೈಲ್ವಾನರು, ಪಟುಗಳು, ಪೇದೆಗಳು, ಬ್ಯಾಂಡ್-ಭಾಜಂತ್ರಿಗಳು, ಸಂಗೀತಗಾರರು, ಮಂತ್ರಿಗಳು, ಬ್ರಿಟಿಷ್ ಅಧಿಕಾರಿಗಳು ಇತ್ಯಾದಿ ವರಿಷ್ಠರೂ , ಸಾಮಾನ್ಯರೂ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದಾರೆ. ಕವಿ ನಿಸಾರ್ಅಹಮದ್ ಅವರೂ ಈ ಹಿಂದೆ ನಾಡಹಬ್ಬ ದಸರಾವನ್ನು ಉದ್ಘಾಟಿಸಿದ್ದಾರೆ. ಹಾಗಾಗಿ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಸೂಕ್ತವಾಗಿದೆ.
-ರವಿ ಬಳೆ, ಯಾದವಗಿರಿ , ಮೈಸೂರು
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…