ಎಸ್.ಎಸ್.ಭಟ್
ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ
ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು, ಅದೇ ಜಾಗದಲ್ಲಿ ಬಾರ್ ಆರಂಭಿಸಿರುವ ಸಂಗತಿ ಬೆಳಕಿಗೆ ಬಂದಿದೆ.
ಕಸುವಿನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು ನಂತರ ಸಿಎಲ್ ೭ ಬಾರ್ ಆರಂಭಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಜನವರಿ ಮೊದಲ ವಾರದಲ್ಲಿ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ಸದಸ್ಯರ ಹಕ್ಕು ಬಾಧ್ಯತೆಗಳ ಕುರಿತು ಸದಸ್ಯರಿಗೆ ಪಾಠ ಮಾಡಿ ಹೋಗಿದ್ದರು. ನಿಮಗೆ ನೀವೇ ಸುಪ್ರೀಂ, ನಿಮ್ಮ ತೀರ್ಮಾನ ಬದಲಿಸಲು ಯಾರಿಗೂ ಅವಕಾಶವೇ ಇಲ್ಲ ಎಂದಿದ್ದರು.
ಈಗ ಅದೇ ಕಸುವಿನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭಿಸಿರುವುದು ವಿಪರ್ಯಾಸವಾಗಿದೆ. ಕಸುವಿನಹಳ್ಳಿ ವ್ಯಾಪ್ತಿಯ ಎಲಚಗರೆ ಬೋರೆಯ ರಾಷ್ಟ್ರೀಯ ಹೆದ್ದಾರಿ ೭೬೬ಗೆ ತಾಗಿದಂತೆ ಇರುವ ಕಟ್ಟಡದಲ್ಲಿ ಆರಂಭವಾದ ಬಾರ್ ಈಗ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ. ಇಲ್ಲಿ ಹಲವು ಕಾರ್ಖಾನೆಗಳಿದ್ದು, ಐಟಿಸಿ ದಾಸ್ತಾನು ಉಗ್ರಾಣಗಳೂ ಇಲ್ಲಿದ್ದು, ಕಸುವಿನಹಳ್ಳಿ, ಮುದ್ದಳ್ಳಿ, ಮಾಕನಪುರ, ಎಲಚಗರೆ ಕೃಷ್ಣಾಪುರ, ಲಕ್ಷ್ಮಣಾಪುರ ಗ್ರಾಮಗಳ ಮಹಿಳೆಯರು, ವಿದ್ಯಾರ್ಥಿಗಳು ನಿತ್ಯ ಸಂಚರಿಸುವ ಸ್ಥಳವಾಗಿದ್ದು, ಇಲ್ಲಿ ಬಾರ್ ಆರಂಭಿಸಿರುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಕಸುವಿನಹಳ್ಳಿ ಗ್ರಾಮಸ್ಥರು.
” ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಪಂಚಾಯಿತಿಯಿಂದ ಅನುಮತಿ ಪಡೆದು ಈಗ ಮದ್ಯದ ವ್ಯಾಪಾರಕ್ಕೆ ಮುಂದಾಗಿರುವ ಈ ಬಾರ್ ಅನ್ನು ಜಿಲ್ಲಾಧಿಕಾರಿಗಳು ತಕ್ಷಣ ಮುಚ್ಚಿಸಿ ಪಂಚಾಯತ್ ಕಾನೂನು ರಕ್ಷಿಸಬೇಕು.”
-ಸಿದ್ದರಾಜು, ಗ್ರಾಪಂ ಸದಸ್ಯ
” ಈ ಬಾರ್ ವಿರುದ್ಧ ಉಗ್ರ ಹೋರಾಟ ಆರಂಭಿಸುವ ಮೊದಲು ಇದಕ್ಕೆ ಅನುಮತಿ ನೀಡಿದ ಅಧಿಕಾರಿಗಳು ನೀಡಿದ ಅನುಮತಿಯನ್ನು ವಾಪಸ್ ಪಡೆಯಬೇಕು.”
-ಮಹದೇವಮ್ಮ, ಎಲಚಗೆರೆ ನಿವಾಸಿ
” ಈ ಸ್ಥಳದಲ್ಲಿ ಬಾರ್ ಮುಂದುವರಿದರೆ ಮುಂದಾಗಬಹುದಾದ ಅನಾಹುತಕ್ಕೆ ಅಧಿಕಾರಿಗಳೇ ಹೊಣೆ.”
-ಶಿವರುದ್ರಪ್ಪ, ಲಕ್ಷ್ಮಣಾಪುರ
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…
ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…
ದಿನೇಶ್ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…