Andolana originals

ಅಂಗಡಿ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭ!

ಎಸ್.ಎಸ್.ಭಟ್

ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ

ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು, ಅದೇ ಜಾಗದಲ್ಲಿ ಬಾರ್ ಆರಂಭಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಕಸುವಿನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು ನಂತರ ಸಿಎಲ್ ೭ ಬಾರ್ ಆರಂಭಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಜನವರಿ ಮೊದಲ ವಾರದಲ್ಲಿ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ಸದಸ್ಯರ ಹಕ್ಕು ಬಾಧ್ಯತೆಗಳ ಕುರಿತು ಸದಸ್ಯರಿಗೆ ಪಾಠ ಮಾಡಿ ಹೋಗಿದ್ದರು. ನಿಮಗೆ ನೀವೇ ಸುಪ್ರೀಂ, ನಿಮ್ಮ ತೀರ್ಮಾನ ಬದಲಿಸಲು ಯಾರಿಗೂ ಅವಕಾಶವೇ ಇಲ್ಲ ಎಂದಿದ್ದರು.

ಈಗ ಅದೇ ಕಸುವಿನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭಿಸಿರುವುದು ವಿಪರ್ಯಾಸವಾಗಿದೆ. ಕಸುವಿನಹಳ್ಳಿ ವ್ಯಾಪ್ತಿಯ ಎಲಚಗರೆ ಬೋರೆಯ ರಾಷ್ಟ್ರೀಯ ಹೆದ್ದಾರಿ ೭೬೬ಗೆ ತಾಗಿದಂತೆ ಇರುವ ಕಟ್ಟಡದಲ್ಲಿ ಆರಂಭವಾದ ಬಾರ್ ಈಗ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ. ಇಲ್ಲಿ ಹಲವು ಕಾರ್ಖಾನೆಗಳಿದ್ದು, ಐಟಿಸಿ ದಾಸ್ತಾನು ಉಗ್ರಾಣಗಳೂ ಇಲ್ಲಿದ್ದು, ಕಸುವಿನಹಳ್ಳಿ, ಮುದ್ದಳ್ಳಿ, ಮಾಕನಪುರ, ಎಲಚಗರೆ ಕೃಷ್ಣಾಪುರ, ಲಕ್ಷ್ಮಣಾಪುರ ಗ್ರಾಮಗಳ ಮಹಿಳೆಯರು, ವಿದ್ಯಾರ್ಥಿಗಳು ನಿತ್ಯ ಸಂಚರಿಸುವ ಸ್ಥಳವಾಗಿದ್ದು, ಇಲ್ಲಿ ಬಾರ್ ಆರಂಭಿಸಿರುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಕಸುವಿನಹಳ್ಳಿ ಗ್ರಾಮಸ್ಥರು.

” ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಪಂಚಾಯಿತಿಯಿಂದ ಅನುಮತಿ ಪಡೆದು ಈಗ ಮದ್ಯದ ವ್ಯಾಪಾರಕ್ಕೆ ಮುಂದಾಗಿರುವ ಈ ಬಾರ್ ಅನ್ನು ಜಿಲ್ಲಾಧಿಕಾರಿಗಳು ತಕ್ಷಣ ಮುಚ್ಚಿಸಿ ಪಂಚಾಯತ್ ಕಾನೂನು ರಕ್ಷಿಸಬೇಕು.”

-ಸಿದ್ದರಾಜು, ಗ್ರಾಪಂ ಸದಸ್ಯ

” ಈ ಬಾರ್ ವಿರುದ್ಧ ಉಗ್ರ ಹೋರಾಟ ಆರಂಭಿಸುವ ಮೊದಲು ಇದಕ್ಕೆ ಅನುಮತಿ ನೀಡಿದ ಅಧಿಕಾರಿಗಳು ನೀಡಿದ ಅನುಮತಿಯನ್ನು ವಾಪಸ್ ಪಡೆಯಬೇಕು.”

-ಮಹದೇವಮ್ಮ, ಎಲಚಗೆರೆ ನಿವಾಸಿ

” ಈ ಸ್ಥಳದಲ್ಲಿ ಬಾರ್ ಮುಂದುವರಿದರೆ ಮುಂದಾಗಬಹುದಾದ ಅನಾಹುತಕ್ಕೆ ಅಧಿಕಾರಿಗಳೇ ಹೊಣೆ.”

-ಶಿವರುದ್ರಪ್ಪ, ಲಕ್ಷ್ಮಣಾಪುರ 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

13 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

13 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

13 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

14 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

14 hours ago