Andolana originals

ಅಂಗಡಿ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭ!

ಎಸ್.ಎಸ್.ಭಟ್

ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ

ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು, ಅದೇ ಜಾಗದಲ್ಲಿ ಬಾರ್ ಆರಂಭಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಕಸುವಿನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು ನಂತರ ಸಿಎಲ್ ೭ ಬಾರ್ ಆರಂಭಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಜನವರಿ ಮೊದಲ ವಾರದಲ್ಲಿ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ಸದಸ್ಯರ ಹಕ್ಕು ಬಾಧ್ಯತೆಗಳ ಕುರಿತು ಸದಸ್ಯರಿಗೆ ಪಾಠ ಮಾಡಿ ಹೋಗಿದ್ದರು. ನಿಮಗೆ ನೀವೇ ಸುಪ್ರೀಂ, ನಿಮ್ಮ ತೀರ್ಮಾನ ಬದಲಿಸಲು ಯಾರಿಗೂ ಅವಕಾಶವೇ ಇಲ್ಲ ಎಂದಿದ್ದರು.

ಈಗ ಅದೇ ಕಸುವಿನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭಿಸಿರುವುದು ವಿಪರ್ಯಾಸವಾಗಿದೆ. ಕಸುವಿನಹಳ್ಳಿ ವ್ಯಾಪ್ತಿಯ ಎಲಚಗರೆ ಬೋರೆಯ ರಾಷ್ಟ್ರೀಯ ಹೆದ್ದಾರಿ ೭೬೬ಗೆ ತಾಗಿದಂತೆ ಇರುವ ಕಟ್ಟಡದಲ್ಲಿ ಆರಂಭವಾದ ಬಾರ್ ಈಗ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ. ಇಲ್ಲಿ ಹಲವು ಕಾರ್ಖಾನೆಗಳಿದ್ದು, ಐಟಿಸಿ ದಾಸ್ತಾನು ಉಗ್ರಾಣಗಳೂ ಇಲ್ಲಿದ್ದು, ಕಸುವಿನಹಳ್ಳಿ, ಮುದ್ದಳ್ಳಿ, ಮಾಕನಪುರ, ಎಲಚಗರೆ ಕೃಷ್ಣಾಪುರ, ಲಕ್ಷ್ಮಣಾಪುರ ಗ್ರಾಮಗಳ ಮಹಿಳೆಯರು, ವಿದ್ಯಾರ್ಥಿಗಳು ನಿತ್ಯ ಸಂಚರಿಸುವ ಸ್ಥಳವಾಗಿದ್ದು, ಇಲ್ಲಿ ಬಾರ್ ಆರಂಭಿಸಿರುವುದು ಸರಿಯೇ ಎಂದು ಪ್ರಶ್ನಿಸುತ್ತಾರೆ ಕಸುವಿನಹಳ್ಳಿ ಗ್ರಾಮಸ್ಥರು.

” ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಪಂಚಾಯಿತಿಯಿಂದ ಅನುಮತಿ ಪಡೆದು ಈಗ ಮದ್ಯದ ವ್ಯಾಪಾರಕ್ಕೆ ಮುಂದಾಗಿರುವ ಈ ಬಾರ್ ಅನ್ನು ಜಿಲ್ಲಾಧಿಕಾರಿಗಳು ತಕ್ಷಣ ಮುಚ್ಚಿಸಿ ಪಂಚಾಯತ್ ಕಾನೂನು ರಕ್ಷಿಸಬೇಕು.”

-ಸಿದ್ದರಾಜು, ಗ್ರಾಪಂ ಸದಸ್ಯ

” ಈ ಬಾರ್ ವಿರುದ್ಧ ಉಗ್ರ ಹೋರಾಟ ಆರಂಭಿಸುವ ಮೊದಲು ಇದಕ್ಕೆ ಅನುಮತಿ ನೀಡಿದ ಅಧಿಕಾರಿಗಳು ನೀಡಿದ ಅನುಮತಿಯನ್ನು ವಾಪಸ್ ಪಡೆಯಬೇಕು.”

-ಮಹದೇವಮ್ಮ, ಎಲಚಗೆರೆ ನಿವಾಸಿ

” ಈ ಸ್ಥಳದಲ್ಲಿ ಬಾರ್ ಮುಂದುವರಿದರೆ ಮುಂದಾಗಬಹುದಾದ ಅನಾಹುತಕ್ಕೆ ಅಧಿಕಾರಿಗಳೇ ಹೊಣೆ.”

-ಶಿವರುದ್ರಪ್ಪ, ಲಕ್ಷ್ಮಣಾಪುರ 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

15 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

18 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

18 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

18 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

18 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

18 hours ago