Andolana originals

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ

ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ

ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯಿದ್ದು,ಈ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಾಗಿದೆ.

ಕೊಡಗಿನ ತಂಪಾದ ವಾತಾವರಣ, ಹರಿಯುವ ನದಿಗಳು, ಜಲಪಾತಗಳು ಜನರನ್ನು ತಮ್ಮತ್ತ ಸೆಳೆಯುತ್ತವೆ. ಆದರೆ ಇದೇ ಆಕರ್ಷಣೆ ಅನೇಕ ಬಾರಿ ಅವಗಢಗಳಿಗೆ ಕಾರಣವಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರು ಗುಂಪಾಗಿ ಹೋಗಿ ನದಿ, ಹೊಳೆಗಳಲ್ಲಿ ಇಳಿದು ಆಟವಾಡುವ ವೇಳೆ ಅಜಾಗರೂಕತೆಯಿಂದಾಗಿ ದುರ್ಘಟನೆಗಳು ಸಂಭವಿಸುತ್ತಿವೆ.

ನೀರಿನ ಆಳ, ಹರಿವಿನ ತೀವ್ರತೆ, ತಕ್ಷಣ ಬದಲಾಗುವ ಪರಿಸ್ಥಿತಿಗಳ ಬಗ್ಗೆ ಅರಿವು ಇಲ್ಲದೆ ನೀರಿಗೆ ಇಳಿಯುವುದು ಅಪಾಯಕಾರಿಯಾಗಿದೆ. ಹೊರಗೆ ಶಾಂತವಾಗಿ ಕಾಣುವ ನೀರಿನ ಅಡಿಯಲ್ಲಿ ಆಳವಾದ ಕುಣಿಗಳು, ತೀವ್ರ ಸುಳಿಗಳು ಇರುತ್ತವೆ. ಈ ಎಲ್ಲ ಕಾರಣಗಳಿಂದ ಕೊಡಗಿನಲ್ಲಿ ಬೇಸಿಗೆ ಸಮಯದಲ್ಲಿಯೇ ಹಲವರು ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ.

ಪ್ರವಾಸಿಗರು ಸೆಲಿ, ವಿಡಿಯೋ ತೆಗೆದುಕೊಳ್ಳುವ ಉತ್ಸಾಹದಲ್ಲಿ ಎಚ್ಚರಿಕೆ ಫಲಕಗಳನ್ನು ಕಡೆಗಣಿಸುತ್ತಾರೆ. ಮದ್ಯಪಾನ ಮಾಡಿದ ಬಳಿಕ ನೀರಿಗೆ ಇಳಿಯುವುದು, ಸ್ನೇಹಿತರ ಒತ್ತಾಯಕ್ಕೆ ಮಣಿದು ನೀರಿನಲ್ಲಿ ಆಟವಾಡಲು ಮುಂದಾಗುವುದು, ಸ್ಥಳೀಯರ ಸೂಚನೆಗಳನ್ನು ನಿರ್ಲಕ್ಷಿಸುವುದು. ಇಂತಹ ವಿಷಯಗಳು ಅವಗಢಗಳು ಸಂಭವಿಸಲು ಕಾರಣವಾಗುತ್ತವೆ. ಸ್ಥಳೀಯ ಆಡಳಿತ ಹಾಗೂ ಅರಣ್ಯ ಇಲಾಖೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿದ್ದರೂ ಅವುಗಳನ್ನು ಉದಾಸೀನ ಮಾಡುವುದರಿಂದ ಅಪಾಯಗಳು ಸಂಭವಿಸುತ್ತಿವೆ. ಜೀವಕ್ಕಿಂತ ಮೋಜು ಮುಖ್ಯವಲ್ಲ ಎಂಬ ಅರಿವು ಎಲ್ಲರಲ್ಲೂ ಮೂಡಬೇಕಿದೆ.

ಈಗ ಬೇಸಿಗೆ ರಜೆಯ ಸಮಯ. ಮಕ್ಕಳು (ಗಂಡು ಮಕ್ಕಳು) ತಮ್ಮ ಸ್ನೇಹಿತರೊಂದಿಗೆ ಸುತ್ತಾಡಲು, ಆಟವಾಡಲು ತೆರಳುತ್ತಾರೆ. ಕೆಲವೊಮ್ಮೆ ಪೋಷಕರಿಗೆ ತಿಳಿಸದೇ ತೋಟಗಳಲ್ಲಿನ ಕೆರೆಗಳಲ್ಲಿ, ಹೊಳೆ, ಜಲಪಾತಗಳಲ್ಲಿ ಆಟವಾಡಲು ತೆರಳುತ್ತಾರೆ. ಇಂತಹ ಸಂದರ್ಭಗಳಲ್ಲಿ ಮಕ್ಕಳ ಪ್ರಾಣಕ್ಕೇ ತೊಂದರೆಯಾಗಿರುವ ಅನೇಕ ಘಟನೆಗಳು ನಡೆದ ನಿದರ್ಶನಗಳು ಸಾಕಷ್ಟಿವೆ. ಹೀಗಾಗಿ ಮಕ್ಕಳ ಪೋಷಕರು ಬೇಸಿಗೆ ರಜೆಯ ಸಮಯದಲ್ಲಿ ಮಕ್ಕಳ ಚಟುವಟಿಕೆ ಬಗ್ಗೆ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಕೆರೆ, ನದಿ, ಜಲಪಾತಗಳ ಬಳಿ ಇರುವ ಸ್ಥಳೀಯರೂ ಈ ಬಗ್ಗೆ ಎಚ್ಚರ ವಹಿಸಿದರೆ ಅವಘಡಗಳನ್ನು ತಪ್ಪಿಸಬಹುದಾಗಿದೆ.

ಕೊಡಗು ಜಿಲ್ಲೆಯ ನದಿ, ಜಲಾಶಯಗಳ ಬದಿಯಲ್ಲಿ ಅನೇಕ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳಿವೆ. ಅಲ್ಲಿಗೆ ಆಗಮಿಸುವ ಪ್ರವಾಸಿಗರು ನೀರಿಗಿಳಿದು ಅಪಾಯವನ್ನು ತಂದುಕೊಳ್ಳುವ ಘಟನೆಗಳು ಸಂಭವಿಸುತ್ತಿರುತ್ತವೆ. ಇತ್ತೀಚೆಗೆ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿಯೂ ಇಂತಹದ್ದೇ ಘಟನೆ ನಡೆದು ಪ್ರವಾಸಿಗರೊಬ್ಬರು ಪ್ರಾಣ ಕಳೆದು ಕೊಂಡಿದ್ದರು. ಹೀಗಾಗಿ ಇಂತಹ ಹೋಂಸ್ಟೇ ಮತ್ತು ರೆಸಾರ್ಟ್‌ನವರೇ ಈ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು. ಸುರಕ್ಷತಾ ಕ್ರಮವಾಗಿ ಸೂಚನಾ ಫಲಕಗಳನ್ನು ಅಳವಡಿಸುವುದು, ಈಜು ತಜ್ಞರನ್ನು ನೇಮಿಸಿಕೊಳ್ಳುವುದು, ಲೈಫ್ ಜಾಕೆಟ್‌ನಂತಹ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದು ಅಗ್ನಿಶಾಮಕ ಅಧಿಕಾರಿ ಚಂದ್ರಶೇಖರ ಪಿ.ಭಂಡಾರಿ ತಿಳಿಸಿದ್ದಾರೆ.

ಕೊಡಗಿನಲ್ಲಿ ಅಪಾಯದ ಸ್ಥಳಗಳು: 

* ಹಾರಂಗಿ ಹಿನ್ನೀರು

* ದುಬಾರೆ ಕಾವೇರಿ ನದಿ ತಟ

* ಚೇಲಾವರ ಜಲಪಾತ

* ಇರ್ಪು ಜಲಪಾತ

* ನಿಸರ್ಗಧಾಮ

* ಬರಪೊಳೆ ನದಿ

* ಕೋಟೆ ಅಬ್ಬಿ

* ತೋಟಗಳಲ್ಲಿನ ಖಾಸಗಿ ಕೆರೆಗಳು

ತಪ್ಪದೇ ವಹಿಸಬೇಕಾದ ಎಚ್ಚರಿಕೆಗಳು: 

* ನೀರಿನ ಆಳ ತಿಳಿಯದೆ ಇಳಿಯಬೇಡಿ

* ಎಚ್ಚರಿಕೆ ಫಲಕಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ

ಪಾಲಿಸಿ

* ಮದ್ಯಪಾನ ಮಾಡಿ ನೀರಿಗೆ ಇಳಿಯಬೇಡಿ

* ಮಕ್ಕಳನ್ನು ಒಂಟಿಯಾಗಿ ಬಿಡಬೇಡಿ

* ಜಾರು ಬಂಡೆಗಳ ಮೇಲೆ ನಿಲ್ಲಬೇಡಿ

* ಲೈಫ್ ಜಾಕೆಟ್ ಇಲ್ಲದೆ ಸಾಹಸ ಚಟುವಟಿಕೆ ಬೇಡ

* ಸ್ಥಳೀಯರ ಸೂಚನೆಗಳನ್ನು ಪಾಲಿಸಿ

” ಬೇಸಿಗೆಯಲ್ಲಿ ನೀರಿಗಿಳಿದು ಅಪಾಯ ತಂದುಕೊಳ್ಳುವವರ ಸಂಖ್ಯೆ ಹೆಚ್ಚು. ಮಕ್ಕಳ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು. ನದಿ ತೀರದಲ್ಲಿರುವ ಹೋಂಸ್ಟೇ, ರೆಸಾರ್ಟ್ ಮಾಲೀಕರು ಈ ಬಗ್ಗೆ ಎಚ್ಚರ ವಹಿಸಿ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು.”

-ಚಂದ್ರಶೇಖರ್ ಪಿ.ಭಂಡಾರಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ

 

 

ಆಂದೋಲನ ಡೆಸ್ಕ್

Recent Posts

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

12 mins ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

41 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

6 hours ago