* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ
*ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ.
* ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ
* ಹೂಕುಂಡಗಳಿಗೆ ಬೆಂಕಿ ಹಚ್ಚುವಾಗ ಅಂತರ ಕಾಪಾಡಬೇಕು
* ಅನಾಹುತ ಸಂಭವಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಬೇಕು
* ಆಕಸ್ಮಿಕವಾಗಿ ಕಣ್ಣಿಗೆ ಗಾಯವಾದರೆ ವೈದ್ಯರ ಸಲಹೆ ಪಡೆಯದೆ ಯಾವುದೇ ಕಣ್ಣಿನ ಡ್ರಾಪ್ಗಳನ್ನು ಬಳಸಬಾರದು
ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ೧೫ ಹಾಸಿಗೆಗಳು ಸಿದ್ಧ: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಿದ ಸಂದರ್ಭದಲ್ಲಿ ಅನಾಹುತವಾದಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆಸ್ಪತ್ರೆಯ ಕಲ್ಲು ಕಟ್ಟಡದ ಸುಟ್ಟಗಾಯಗಳ ವಿಭಾಗದಲ್ಲಿ ೧೫ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ದಿನದ ೨೪ ಗಂಟೆಗಳೂ ವೈದ್ಯರು ಲಭ್ಯವಿರಲಿದ್ದಾರೆ.
” ಕಳೆದ ೪ ವರ್ಷಗಳಿಂದ ಪಟಾಕಿ ಅನಾಹುತದ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಹೆಚ್ಚಿನ ಪ್ರಕರಣಗಳು ದಾಖಲಾಗಿಲ್ಲ. ಪಟಾಕಿ ಸಿಡಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿರುವುದರಿಂದ ಅನಾಹುತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಗಾಯಗೊಂಡವರಿಗಾಗಿ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಅಗತ್ಯವಿದ್ದಲ್ಲಿ ಸಂಪರ್ಕಿಸಬಹುದು.”
-ಡಾ.ಶೋಭಾ, ವೈದ್ಯಕೀಯ ಅಧೀಕ್ಷಕರು, ಕೆ.ಆರ್.ಆಸ್ಪತ್ರೆ
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…