Andolana originals

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್

ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ 

ಭೇರ್ಯ: ಭೇರ್ಯ ಗ್ರಾಮದ ಗ್ರಾಮದೇವತೆ ಶ್ರೀ ಕರಿಯಮ್ಮ ದೊಡ್ಡಮ್ಮ ದೇವಿಯ ಸಿಡಿ ಮಹೋತ್ಸವವು ಏಪ್ರಿಲ್ ೭ರ ಮಂಗಳವಾರ ಮತ್ತು ಏ.೮ರ ಬುಧವಾರ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಶ್ರೀ ಕರಿಯಮ್ಮ ದೊಡ್ಡಮ್ಮ ಟ್ರಸ್ಟ್ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಗ್ರಾಮದೇವತೆ ಶ್ರೀ ಕರಿಯಮ್ಮ ದೊಡ್ಡಮ್ಮ ಸಿಡಿಗೆ ಮಂಗಳವಾರ ಸಂಜೆ ಸಂಪ್ರದಾಯದಂತೆ ಬಾಳೆಗೊನೆ ಕಟ್ಟಿ ಅಲಂಕಾರ ಮಾಡಿ, ರಾತ್ರಿ ವೇಳೆ ಸಾವಿರಾರು ಜನರ ಸಮ್ಮುಖದಲ್ಲಿ ಕೊಂಬು, ಕಹಳೆ, ಕೀಲು ಕುದುರೆ ಮತ್ತು ಡೊಳ್ಳು, ನಗಾರಿ ಮಂಗಳವಾದ್ಯದೊಂದಿಗೆ ಸುಮಾರು ಒಂದು ಕಿ.ಮೀ. ದೂರ ಎಳೆದು ತಂದು ನಂತರ ಶ್ರೀ ಕರಿಯಮ್ಮ ದೊಡ್ಡಮ್ಮ ದೇವಸ್ಥಾನದ ಸುತ್ತ ಮೂರು ಬಾರಿ ಪ್ರದಕ್ಷಿಣೆ ಹಾಕುತ್ತಾರೆ. ನಂತರ ಜನರು ತಮ್ಮ ಹರಕೆ, ಕಾಣಿಕೆ, ಮುಡುಪು ಗಳನ್ನು ಸಲ್ಲಿಸುತ್ತಾರೆ.

ಬಾಯಿ ಬೀಗ: ವಿವಿಧ ಕಾರಣಗಳಿಗೆ ಹರಕೆ ಹೊತ್ತವರು ಸಿಡಿ ಎಳೆಯುವಾಗ ಬೆಳಿಗ್ಗೆಯಿಂದಲೇ ಉಪವಾಸವಿದ್ದು, ಬಾಯಿಗೆ ಬೀಗ ಹಾಕಿಕೊಂಡು ನಡೆಯುತ್ತಾರೆ. ಮಂಗಳವಾರ ರಾತ್ರಿ ಸಿಡಿ ಎಳೆಯುವಾಗ ಮುತ್ತೈದೆಯರು ತಂಬಿಟ್ಟಿನ ಆರತಿ ಬೆಳಗುತ್ತಾರೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಿಡಿ ಮತ್ತು ಜಾತ್ರಾ ಮಹೋತ್ಸವ ಬಹಳ ದೊಡ್ಡ ಹಬ್ಬವಾಗಿದೆ.

ವಿದ್ಯುತ್ ದೀಪಾಲಂಕಾರ: ಈಗಾಗಲೇ ಮೂರು ದಿನಗಳಿಂದ ಗ್ರಾಮದ ಹಾಸನ- ಮೈಸೂರು ರಸ್ತೆ, ಸಾಲಿಗ್ರಾಮ- ಕೆ.ಆರ್.ಪೇಟೆ ರಸ್ತೆಯ ಉದ್ದಕ್ಕೂ ಎಲ್‌ಇಡಿ ಬಲ್ಬ್‌ಗಳಿಂದ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಇಡೀ ಭೇರ್ಯ ಗ್ರಾಮವೇ ಜಗಜಗಿಸುತ್ತಿದೆ.

ಜಾತ್ರೆ ವಿಜೃಂಭಣೆಯಿಂದ ನಡೆಯಲಿದ್ದು, ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ. ಹೊರರಾಜ್ಯದಿಂದ ಜನರು ಬಂದು ದೇವಿಗೆ ಹರಕೆ ಕಾಣಿಕೆ ಒಪ್ಪಿಸಿ ಹೋಗುತ್ತಾರೆ. ಜೊತೆಗೆ ಇಲ್ಲಿಯೇ ಹರಕೆ ಒಪ್ಪಿಸಿ ಪರ ಮಾಡಿ ನಾಲ್ಕಾರು ಜನರಿಗೆ ದಾಸೋಹ ಮಾಡುವುದು ಈ ದೇವಸ್ಥಾನದ ಸಂಪ್ರದಾಯವಾಗಿದೆ.

ಗ್ರಾಮವು ಮಂಗಳವಾರ ಮತ್ತು ಬುಧವಾರ ಮಧುವಣಿಗಿತ್ತಿಯಂತೆ ತಳಿರು-ತೋರಣಗಳಿಂದ ಅಲಂಕೃತಗೊಂಡು ಹಾಗೂ ವಿದ್ಯುತ್ ದೀಪಾಲಂಕಾರದಿಂದ ನೋಡುಗರ ಕಣ್ಮನ ಸೆಳೆಯುತಿದೆ. ಎಲ್ಲಾ ಜಾತಿ ಜನಾಂಗದವರು ಒಟ್ಟಾಗಿ ಸೇರಿ ಆಚರಿಸುವ ಜಾತ್ರಾ ಮಹೋತ್ಸವ ಇದಾಗಿದೆ.

ಪೌರಾಣಿಕ ನಾಟಕ: ಜಾತ್ರಾ ಮಹೋತ್ಸವ ದಿನವಾದ ಬುಧವಾರ ರಾತ್ರಿ ೯ ಗಂಟೆಗೆ ಶ್ರೀ ದೊಡ್ಡಮ್ಮ ಕರಿಯಮ್ಮ ಕೃಪಾಪೋಷಿತ ನಾಟಕ ಮಂಡಳಿಯ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದ್ದು, ಗ್ರಾಮಸ್ಥರ ಮನರಂಜಿಸಲಿದೆ.

” ನಮ್ಮ ಪೂರ್ವಿಕರ ಕಾಲದಿಂದಲೂ ಶ್ರೀ ಕರಿಯಮ್ಮ ಸಿಡಿ ಮತ್ತು ದೊಡ್ಡಮ್ಮ ಜಾತ್ರಾ ಮಹೋತ್ಸವವನ್ನು ಜಾತಿ-ಭೇದವಿಲ್ಲದೆ ಎಲ್ಲಾ ಜನಾಂಗದವರು ಒಗ್ಗೂಡಿ ಸಿಡಿ ಎಳೆಯುವ ಮೂಲಕ ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ದೇವಿಯ ಮಹಿಮೆಯನ್ನು ಮೆಚ್ಚಿ ಸಾವಿರಾರು ಭಕ್ತಾದಿಗಳು ಕಾಣಿಕೆ, ಹರಕೆ, ಮುಡುಪು, ಸಲ್ಲಿಸಲು ಆಗುಮಿಸುತ್ತಾರೆ. ಎರಡು ದಿನಗಳವರೆಗೆ ನಡೆಯುವ ಗ್ರಾಮ ದೇವತೆಯ ಜಾತ್ರೆಗೆ ವಿಶೇಷ ಮೆರುಗು ನೀಡಲಾಗುತ್ತಿದೆ.”

-ನಾಡಗೌಡ ಕುಮಾರಸ್ವಾಮಿ, ಅಧ್ಯಕ್ಷ, ಶ್ರೀಕರಿಯಮ್ಮ ದೊಡ್ಡಮ್ಮ ಟ್ರಸ್ಟ್ ಸಮಿತಿ

 

 

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago