Andolana originals

ಚಿಕ್ಕ ಗಡಿಯಾರದ ಸುತ್ತಲೂ ಮುರುಕಲು ಬೆಂಚು, ಕೊಳಕು

ಮೈಸೂರು: ದಸರಾ ಜಂಬೂ ಸವಾರಿ ಸಾಗುವ ಮಾರ್ಗ ಸಯ್ಯಾಜಿರಾವ್ ರಸ್ತೆಯ ಇರುವ ಹೆಸರಾಂತ ಚಿಕ್ಕ ಗಡಿಯಾರದ ಸುತ್ತಲಿನ ಪ್ರದೇಶ ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆ ಮುಂಭಾಗದ ಇರುವ ಈ ಗಡಿಯಾರದ ಸುತ್ತಲಿನ ಸ್ಥಳವನ್ನು ಕಳೆದ ೨೦೧೨ರಲ್ಲಿ ಮೈಸೂರು ಮಹಾನಗರಪಾಲಿಕೆ ಅಭಿವೃದ್ಧಿ ಮಾಡಿತ್ತು. ಆಗ ಅಲ್ಲಿ ಆಕರ್ಷಕ ನೆಲಹಾಸು, ಕುಳಿತುಕೊಳ್ಳಲು ಬೆಂಚುಗಳು, ಅಲ್ಲಲ್ಲಿ ಹೂ ಕುಂಡಗಳು ಮತ್ತು ಅಲಂಕಾರಿಕ ದೀಪಗಳನ್ನು ಅಳವಡಿಸಿ, ಕಾರಂಜಿಯನ್ನೂ ನಿರ್ಮಾಣ ಮಾಡಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಗಡಿಯಾರದ ಸುತ್ತಲೂ ಇದ್ದ ಬೆಂಚುಗಳು ಮುರಿದು ಬಿದ್ದಿದೆ. ಆದರೂ ಪಾಲಿಕೆ ತಲೆಕೆಡಿಸಿಕೊಂಡಿಲ್ಲ.

ಗಡಿಯಾರ ಕೆಟ್ಟು ನಿಂತರೂ ದುರಸ್ತಿ ಮಾಡಿಸುತ್ತಿಲ್ಲ. ಸುತ್ತಲೂ ಅನೈರ್ಮಲ್ಯ ಆವರಿಸಿಕೊಂಡಿದೆ. ಈ ಭಾಗದಲ್ಲಿ ಹಣ್ಣು, ತರಕಾರಿ ವ್ಯಾಪಾರಿಗಳು ವಹಿವಾಟು ನಡೆಸುತ್ತಿದ್ದು ತ್ಯಾಜ್ಯ ಇಲ್ಲೇ ಹಾಕುತ್ತಾರೆ ಹಾಗೂ ಇದೇ ಸ್ಥಳದಲ್ಲಿ ಎಲೆ ಅಡಕೆ, ಗುಟ್ಕಾ, ಪಾನ್ ಹಾಕುವ ಜನರು ಇಲ್ಲೇ ಉಗುಳುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳಿಗೆ ಈ ಮುರಿದ ಬೆಂಚುಗಳನ್ನು ದುರಸ್ತಿ ಪಡಿಸಬೇಕೆಂಬ ಆಲೋಚನೆ ಏಕೆ ಬರುತ್ತಿಲ್ಲ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ದಸರಾಕ್ಕೆ ದಿನಗಣನೆ ಆರಂಭವಾಗಿದೆ. ನಗರದ ಎಡೆ, ರಸ್ತೆ ದುರಸ್ತಿ, ಬಣ್ಣ ಬಳಿಯುವುದು, ದೀಪಾಲಂಕಾರ ಸಿದ್ಧತಾ ಕಾರ್ಯಗಳನ್ನು ಪಾಲಿಕೆ ನಡೆಸುತ್ತಿದೆ. ಆದರೆ, ಚಿಕ್ಕಗಡಿಯಾರದ ಸುತ್ತಲೂ ದುರಸ್ತಿ ಕಾರ್ಯದ ಕಡೆಗೆ ಗಮನ ಕೊಡುತ್ತಿಲ್ಲ. ಇನ್ನಾದರೂ ಇತ್ತ ಗಮನ ಕೊಡುತ್ತಾರೋ ಇಲ್ಲವೋ ನೋಡಬೇಕಿದೆ.

ನಗರದ ಹೆಸರಾಂತ ಚಿಕ್ಕ ಗಡಿಯಾರದ ಸುತ್ತಲೂ ಇರುವ ಮುರಿದು ಬೆಂಚುಗಳು ವರ್ಷದಿಂದ ಹೀಗೇ ಬಿದ್ದಿವೆ. ಈ ಬೆಂಚುಗಳನ್ನು ತೆರವು ಮಾಡಿ ಹೊಸ ಬೆಂಚುಗಳನ್ನು ಅಳವಡಿಸಲು ಪಾಲಿಕೆ ಅಧಿಕಾರಿಗಳು ತಡ ಮಾಡುತ್ತಿರುವುದನ್ನು ನೋಡಿದರೆ ಮನಸ್ಸಿಗೆ ಬೇಸರ ಆಗುತ್ತದೆ. -ಸಿ. ಶಿವಣ್ಣ, ಸ್ಥಳೀಯರು

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

3 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

4 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

5 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

5 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

5 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 hours ago