Andolana originals

ಚಿಕ್ಕ ಗಡಿಯಾರದ ಸುತ್ತಲೂ ಮುರುಕಲು ಬೆಂಚು, ಕೊಳಕು

ಮೈಸೂರು: ದಸರಾ ಜಂಬೂ ಸವಾರಿ ಸಾಗುವ ಮಾರ್ಗ ಸಯ್ಯಾಜಿರಾವ್ ರಸ್ತೆಯ ಇರುವ ಹೆಸರಾಂತ ಚಿಕ್ಕ ಗಡಿಯಾರದ ಸುತ್ತಲಿನ ಪ್ರದೇಶ ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆ ಮುಂಭಾಗದ ಇರುವ ಈ ಗಡಿಯಾರದ ಸುತ್ತಲಿನ ಸ್ಥಳವನ್ನು ಕಳೆದ ೨೦೧೨ರಲ್ಲಿ ಮೈಸೂರು ಮಹಾನಗರಪಾಲಿಕೆ ಅಭಿವೃದ್ಧಿ ಮಾಡಿತ್ತು. ಆಗ ಅಲ್ಲಿ ಆಕರ್ಷಕ ನೆಲಹಾಸು, ಕುಳಿತುಕೊಳ್ಳಲು ಬೆಂಚುಗಳು, ಅಲ್ಲಲ್ಲಿ ಹೂ ಕುಂಡಗಳು ಮತ್ತು ಅಲಂಕಾರಿಕ ದೀಪಗಳನ್ನು ಅಳವಡಿಸಿ, ಕಾರಂಜಿಯನ್ನೂ ನಿರ್ಮಾಣ ಮಾಡಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಗಡಿಯಾರದ ಸುತ್ತಲೂ ಇದ್ದ ಬೆಂಚುಗಳು ಮುರಿದು ಬಿದ್ದಿದೆ. ಆದರೂ ಪಾಲಿಕೆ ತಲೆಕೆಡಿಸಿಕೊಂಡಿಲ್ಲ.

ಗಡಿಯಾರ ಕೆಟ್ಟು ನಿಂತರೂ ದುರಸ್ತಿ ಮಾಡಿಸುತ್ತಿಲ್ಲ. ಸುತ್ತಲೂ ಅನೈರ್ಮಲ್ಯ ಆವರಿಸಿಕೊಂಡಿದೆ. ಈ ಭಾಗದಲ್ಲಿ ಹಣ್ಣು, ತರಕಾರಿ ವ್ಯಾಪಾರಿಗಳು ವಹಿವಾಟು ನಡೆಸುತ್ತಿದ್ದು ತ್ಯಾಜ್ಯ ಇಲ್ಲೇ ಹಾಕುತ್ತಾರೆ ಹಾಗೂ ಇದೇ ಸ್ಥಳದಲ್ಲಿ ಎಲೆ ಅಡಕೆ, ಗುಟ್ಕಾ, ಪಾನ್ ಹಾಕುವ ಜನರು ಇಲ್ಲೇ ಉಗುಳುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳಿಗೆ ಈ ಮುರಿದ ಬೆಂಚುಗಳನ್ನು ದುರಸ್ತಿ ಪಡಿಸಬೇಕೆಂಬ ಆಲೋಚನೆ ಏಕೆ ಬರುತ್ತಿಲ್ಲ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ದಸರಾಕ್ಕೆ ದಿನಗಣನೆ ಆರಂಭವಾಗಿದೆ. ನಗರದ ಎಡೆ, ರಸ್ತೆ ದುರಸ್ತಿ, ಬಣ್ಣ ಬಳಿಯುವುದು, ದೀಪಾಲಂಕಾರ ಸಿದ್ಧತಾ ಕಾರ್ಯಗಳನ್ನು ಪಾಲಿಕೆ ನಡೆಸುತ್ತಿದೆ. ಆದರೆ, ಚಿಕ್ಕಗಡಿಯಾರದ ಸುತ್ತಲೂ ದುರಸ್ತಿ ಕಾರ್ಯದ ಕಡೆಗೆ ಗಮನ ಕೊಡುತ್ತಿಲ್ಲ. ಇನ್ನಾದರೂ ಇತ್ತ ಗಮನ ಕೊಡುತ್ತಾರೋ ಇಲ್ಲವೋ ನೋಡಬೇಕಿದೆ.

ನಗರದ ಹೆಸರಾಂತ ಚಿಕ್ಕ ಗಡಿಯಾರದ ಸುತ್ತಲೂ ಇರುವ ಮುರಿದು ಬೆಂಚುಗಳು ವರ್ಷದಿಂದ ಹೀಗೇ ಬಿದ್ದಿವೆ. ಈ ಬೆಂಚುಗಳನ್ನು ತೆರವು ಮಾಡಿ ಹೊಸ ಬೆಂಚುಗಳನ್ನು ಅಳವಡಿಸಲು ಪಾಲಿಕೆ ಅಧಿಕಾರಿಗಳು ತಡ ಮಾಡುತ್ತಿರುವುದನ್ನು ನೋಡಿದರೆ ಮನಸ್ಸಿಗೆ ಬೇಸರ ಆಗುತ್ತದೆ. -ಸಿ. ಶಿವಣ್ಣ, ಸ್ಥಳೀಯರು

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

1 hour ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago