ಮೈಸೂರು: ದಸರಾ ಜಂಬೂ ಸವಾರಿ ಸಾಗುವ ಮಾರ್ಗ ಸಯ್ಯಾಜಿರಾವ್ ರಸ್ತೆಯ ಇರುವ ಹೆಸರಾಂತ ಚಿಕ್ಕ ಗಡಿಯಾರದ ಸುತ್ತಲಿನ ಪ್ರದೇಶ ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆ ಮುಂಭಾಗದ ಇರುವ ಈ ಗಡಿಯಾರದ ಸುತ್ತಲಿನ ಸ್ಥಳವನ್ನು ಕಳೆದ ೨೦೧೨ರಲ್ಲಿ ಮೈಸೂರು ಮಹಾನಗರಪಾಲಿಕೆ ಅಭಿವೃದ್ಧಿ ಮಾಡಿತ್ತು. ಆಗ ಅಲ್ಲಿ ಆಕರ್ಷಕ ನೆಲಹಾಸು, ಕುಳಿತುಕೊಳ್ಳಲು ಬೆಂಚುಗಳು, ಅಲ್ಲಲ್ಲಿ ಹೂ ಕುಂಡಗಳು ಮತ್ತು ಅಲಂಕಾರಿಕ ದೀಪಗಳನ್ನು ಅಳವಡಿಸಿ, ಕಾರಂಜಿಯನ್ನೂ ನಿರ್ಮಾಣ ಮಾಡಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಗಡಿಯಾರದ ಸುತ್ತಲೂ ಇದ್ದ ಬೆಂಚುಗಳು ಮುರಿದು ಬಿದ್ದಿದೆ. ಆದರೂ ಪಾಲಿಕೆ ತಲೆಕೆಡಿಸಿಕೊಂಡಿಲ್ಲ.
ಗಡಿಯಾರ ಕೆಟ್ಟು ನಿಂತರೂ ದುರಸ್ತಿ ಮಾಡಿಸುತ್ತಿಲ್ಲ. ಸುತ್ತಲೂ ಅನೈರ್ಮಲ್ಯ ಆವರಿಸಿಕೊಂಡಿದೆ. ಈ ಭಾಗದಲ್ಲಿ ಹಣ್ಣು, ತರಕಾರಿ ವ್ಯಾಪಾರಿಗಳು ವಹಿವಾಟು ನಡೆಸುತ್ತಿದ್ದು ತ್ಯಾಜ್ಯ ಇಲ್ಲೇ ಹಾಕುತ್ತಾರೆ ಹಾಗೂ ಇದೇ ಸ್ಥಳದಲ್ಲಿ ಎಲೆ ಅಡಕೆ, ಗುಟ್ಕಾ, ಪಾನ್ ಹಾಕುವ ಜನರು ಇಲ್ಲೇ ಉಗುಳುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳಿಗೆ ಈ ಮುರಿದ ಬೆಂಚುಗಳನ್ನು ದುರಸ್ತಿ ಪಡಿಸಬೇಕೆಂಬ ಆಲೋಚನೆ ಏಕೆ ಬರುತ್ತಿಲ್ಲ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ದಸರಾಕ್ಕೆ ದಿನಗಣನೆ ಆರಂಭವಾಗಿದೆ. ನಗರದ ಎಡೆ, ರಸ್ತೆ ದುರಸ್ತಿ, ಬಣ್ಣ ಬಳಿಯುವುದು, ದೀಪಾಲಂಕಾರ ಸಿದ್ಧತಾ ಕಾರ್ಯಗಳನ್ನು ಪಾಲಿಕೆ ನಡೆಸುತ್ತಿದೆ. ಆದರೆ, ಚಿಕ್ಕಗಡಿಯಾರದ ಸುತ್ತಲೂ ದುರಸ್ತಿ ಕಾರ್ಯದ ಕಡೆಗೆ ಗಮನ ಕೊಡುತ್ತಿಲ್ಲ. ಇನ್ನಾದರೂ ಇತ್ತ ಗಮನ ಕೊಡುತ್ತಾರೋ ಇಲ್ಲವೋ ನೋಡಬೇಕಿದೆ.
ನಗರದ ಹೆಸರಾಂತ ಚಿಕ್ಕ ಗಡಿಯಾರದ ಸುತ್ತಲೂ ಇರುವ ಮುರಿದು ಬೆಂಚುಗಳು ವರ್ಷದಿಂದ ಹೀಗೇ ಬಿದ್ದಿವೆ. ಈ ಬೆಂಚುಗಳನ್ನು ತೆರವು ಮಾಡಿ ಹೊಸ ಬೆಂಚುಗಳನ್ನು ಅಳವಡಿಸಲು ಪಾಲಿಕೆ ಅಧಿಕಾರಿಗಳು ತಡ ಮಾಡುತ್ತಿರುವುದನ್ನು ನೋಡಿದರೆ ಮನಸ್ಸಿಗೆ ಬೇಸರ ಆಗುತ್ತದೆ. -ಸಿ. ಶಿವಣ್ಣ, ಸ್ಥಳೀಯರು
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…