Andolana originals

ದೃಷ್ಠಿ ಕದ್ದೊಯ್ಯುವ ಕಳ್ಳನ ಬಗ್ಗೆ ಇರಲಿ ಎಚ್ಚರ

ಗ್ಲಾಕೋಮಾ ಬಗ್ಗೆ ಅಗತ್ಯ ಮುನ್ನೆಚ್ಚರಿಕೆಗೆ ಜಿಲ್ಲಾ ಆರೋಗ್ಯ ಇಲಾಖೆ ಮನವಿ

ನವೀನ್ ಡಿಸೋಜ
ಮಡಿಕೇರಿ: ಸದ್ದಿಲ್ಲದೇ ದೃಷ್ಟಿ ಕದ್ದೊಯ್ಯುವ ಕಳ್ಳ ಎಂದೇ ಕರೆಯಲಾಗುವ ಗ್ಲಾಕೋಮಾ ಬಗ್ಗೆ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದೆ.

ಗ್ಲಾಕೋಮಾ ಕಣ್ಣಿಗೆ ಸಂಬಂಧಪಟ್ಟ ಆತಂಕಕಾರಿ ಕಾಯಿಲೆಯಾಗಿದ್ದು, ಇದರಿಂದ ಕಣ್ಣಿನ ದೃಷ್ಟಿ ಹೋಗುತ್ತದೆ. ಸಾಧಾರಣವಾಗಿ ೪೦ ವರ್ಷಗಳಿಗಿಂತಲೂ ಹೆಚ್ಚಿನ ವಯಸ್ಸಿನವರಿಗೆ, ಅದರಲ್ಲೂ ಅನುವಂಶಿಕವಾಗಿ ಗ್ಲಾಕೋಮಾ ರೋಗವು ಕಂಡು ಬರುತ್ತದೆ. ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಟಿ ಕದಿಯುವ ಕಾಯಿಲೆ ಗ್ಲಾಕೋಮಾ ಬಗ್ಗೆ ಎಚ್ಚರ ಅತ್ಯವಶ್ಯವಾಗಿದ್ದು, ೪೦ ವಯಸ್ಸಿನ ನಂತರ ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣನ್ನು ಪರೀಕ್ಷಿಸಿಕೊಳ್ಳಬೇಕಾಗುತ್ತದೆ.

ಬೆಳಕಿನ ಸುತ್ತ ಕಾಮನಬಿಲ್ಲಿನಂತಹ ವೃತ್ತಗಳನ್ನು ಕಾಣುವುದು. ತಲೆನೋವು ಹಾಗೂ ಕಣ್ಣು ನೋವು, ಅಸ್ಪಷ್ಟ ದೃಷ್ಟಿ ಹಾಗೂ ನೋಟದ ವಲಯ ಕುಗ್ಗುತ್ತಾ ಹೋಗುವುದು, ಪದೇ ಪದೇ ಕನ್ನಡಕ ಬದಲಾಯಿಸಬೇಕಾಗಿ ಬರುವುದು ಮುಂತಾದ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ತಮ್ಮ ಸಮೀಪದ ನೇತ್ರ ತಜ್ಞರನ್ನು ಕೂಡಲೇ ಸಂಪರ್ಕಸಿ, ಗ್ಲಾಕೋಮಾ ಇದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರೀಕ್ಷಿಸಿ ದೃಢಪಡಿಸಿಕೊಳ್ಳ ಬೇಕೆಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

ಗ್ಲಾಕೋಮಾವನ್ನು ಕಣ್ಣಿನ ಒತ್ತಡ ಮಾಪನ ಪರೀಕ್ಷೆ, ನೋಟದ ವಲಯ ಪರೀಕ್ಷೆ, ಕಣ್ಣಿನ ನರದ ಪರೀಕ್ಷೆಯಿಂದ ದೃಢಪಡಿಸಬಹುದಾಗಿದೆ. ಗ್ಲಾಕೋಮಾ ಕಾಯಿಲೆಗೆ ಪ್ರಥಮ ಹಂತದಲ್ಲಿ ಚಿಕಿತ್ಸೆ ಪಡೆಯದಿದ್ದಲ್ಲಿ ಸಂಪೂರ್ಣ ಕುರುಡುತನ ಉಂಟಾಗಲಿದೆ. ಗ್ಲಾಕೋಮಾವನ್ನು ತಡೆಗಟ್ಟಲು ಸಾಧ್ಯವಿಲ್ಲ, ಆದರೆ ಪ್ರಾರಂಭದಲ್ಲಿ ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆಯನ್ನು ನಿಯಮಿತವಾಗಿ ಪಡೆಯುವುದರಿಂದ ಕಣ್ಣು ಕುರುಡುತನವನ್ನು ತಪ್ಪಿಸಬಹುದಾಗಿದೆ. ಕಣ್ಣಿಗೆ ಜೀವನ ಪರ್ಯಂತ ಔಷಽ ಹಾಕುವುದು ಮತ್ತು ಶಸ್ತ್ರಚಿಕಿತ್ಸೆ ಮೂಲಕ ಸರಿ ಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಸಾರ್ವಜನಿಕರಿಗೆ ಮಾಹಿತಿ ನೀಡಿವೆ.

ಗ್ಲಾಕೋಮಾ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಇದೇ ಸಮಯದಲ್ಲಿ ಬರಬೇಕೆನ್ನುವ ನಿಯಮವೂ ಇಲ್ಲ. ಆದರೆ, ದೂಳು ಸೇರಿದಂತೆ ಮತ್ತಿತರ ಕಾರಣಗಳಿಂದ ಕಣ್ಣಿಗೆ ಹಾನಿಯುಂಟಾದ ಸಂದರ್ಭದಲ್ಲಿ ನೇತ್ರ ತಜ್ಞರ ಬಳಿ ತಪಾಸಣೆ ಮಾಡಿಸಿ, ಔಷಧ ಪಡೆಯಬೇಕಾಗುತ್ತದೆ. ನಿರ್ಲಕ್ಷ ಮಾಡಿದಲ್ಲಿ ಗ್ಲಾಕೋಮಾ ಆಗುವ ಸಾಧ್ಯತೆ ಇರುತ್ತದೆ.

ಗ್ಲಾಕೋಮಾ ನಿರಂತರವಾಗಿ ಇರುವ ಕಾಯಿಲೆ. ಈ ಸಮಯದಲ್ಲೇ ಆಗಬೇಕೆನ್ನುವ ನಿಯಮವಿಲ್ಲ. ಹಲವು ದಿನಗಳಿಂದ ಕಣ್ಣಿನ ತೊಂದರೆಯಿಂದ ಬಳಲುತ್ತಿರುವವರು ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಬೇಕು, ಗ್ಲಾಕೋಮಾ ಬಂದಲ್ಲಿ ಕಣ್ಣಿನ ದೃಷ್ಟಿ ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಗ್ಲಾಕೋಮಾ ಬಗ್ಗೆ ಜಾಗೃತರಾಗಬೇಕಾಗಿದೆ. -ಡಾ. ಸತೀಶ್‌ಕುಮಾರ್, ಡಿಎಚ್‌ಒ,

 

ಕೊಡಗು ಸಹಾಯವಾಣಿ ೧೦೪ಕ್ಕೆ ಕರೆ ಮಾಡಿ

ಗ್ಲಾಕೋಮಾ ಕಣ್ಣಿನ ಒಂದು ಗಂಭೀರವಾದ ಕಾಯಿಲೆ. ಇದರಿಂದ ಕಣ್ಣಿನ ಒಳಗಿನ ಒತ್ತಡ ಹೆಚ್ಚಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಈ ಕಾಯಿಲೆಯ ಇರುವಿಕೆ ಗೊತ್ತಾಗುವ ವೇಳೆಗೆ ಕಣ್ಣಿನ ನರವಾದ ಆಪ್ಟಿಕ್ ನರಕ್ಕೆ ಬಹಳಷ್ಟು ತೊಂದರೆ ಉಂಟಾಗಿರುತ್ತದೆ. ಅಲ್ಲದೆ, ಕಾಯಿಲೆಯಿಂದ ಹಾಳಾದ ನರವನ್ನು ಮತ್ತೆ ಪುನಶ್ಚೇತನಗೊಳಿಸಲು ಸಾಧ್ಯವಿಲ್ಲ. ಹಾಗಾಗಿ ಈ ಕಾಯಿಲೆಯಿಂದ ನಾಶವಾದ ದೃಷ್ಟಿ ಮತ್ತೆ ಬರುವ ಸಾಧ್ಯತೆ ಕಡಿಮೆ.

 

ಆಂದೋಲನ ಡೆಸ್ಕ್

Recent Posts

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

1 hour ago

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

1 hour ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

2 hours ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

2 hours ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

3 hours ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

3 hours ago