Andolana originals

ಓದುಗರ ಪತ್ರ: ಯುವ ಸಮೂಹ ನೋಡಬೇಕಾದ ಸಿನಿಮಾ ‘ಭೀಮ’

‘ದುನಿಯಾ’ ಚಿತ್ರದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಕಾಲಿಟ್ಟ ನಟ ವಿಜಯ್ ಕುಮಾರ್ ಸ್ಯಾಂಡಲ್‌ವುಡ್ ಸಲಗ ಎದ್ದೇ ಖ್ಯಾತಿ ಪಡೆದ ನಟ. ಅನೇಕ ಜನಪ್ರಿಯ ಸಿನಿಮಾಗಳನ್ನು ನೀಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ವಿಜಯ್ ‘ಸಲಗ’ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ತಮ್ಮ ಛಾಪು ಮೂಡಿಸಿದ್ದು, ಅವರು ನಿರ್ದೇಶಕನಾಗಿ ಹಾಗೂ ನಟನಾಗಿ ಅಭಿನಯಿಸಿ ಇತ್ತೀಚೆಗೆ ತೆರೆಕಂಡ ‘ಭೀಮ’ ಸಾಮಾಜಿಕ ಕಳಕಳಿಯ ಒಂದು ಅದ್ಭುತ ಸಿನಿಮಾ ಜತೆಗೆ ಯುವ ಸಮೂಹ ನೋಡಲೇ ಬೇಕಾದ ಸಿನಿಮಾ ಎಂದರೆ ತಪ್ಪಾಗಲಾರದು. ಇತ್ತೀಚೆಗೆ ನಗರ ಪ್ರದೇಶಗಳಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದೆ. ಗಾಂಜಾ, ಡ್ರಗ್ಸ್, ಬೀಡಿ, ಸಿಗರೇಟುಗಳು ಸಿಗುವಷ್ಟೇ ಸುಲಭವಾಗಿ ಯುವ ಸಮೂಹದ ಅದರಲ್ಲಿಯೂ ವಿದ್ಯಾರ್ಥಿಗಳ ಕೈ ಸೇರುತ್ತಿವೆ. ಇವುಗಳ ಚಟಕ್ಕೆ ಬಿದ್ದು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.

ಈ ವಿಚಾರವನ್ನೇ ಕೇಂದ್ರವಾಗಿಟ್ಟುಕೊಂಡು ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಅಪಾಯಕಾರಿ ಡ್ರಗ್ಸ್ ಹೇಗೆ ಯುವ ಸಮೂಹವನ್ನು ತಲುಪುತ್ತಿವೆ, ಇದನ್ನು ನಿಯಂತ್ರಿಸಬೇಕಾದ ಆಡಳಿತ ವ್ಯವಸ್ಥೆ ಕಂಡೂ ಕಾಣದಂತೆ ವರ್ತಿಸುತ್ತಿರುವ ಬಗ್ಗೆ ಭೀಮ ಸಿನಿಮಾದಲ್ಲಿ ಎಳೆಎಳೆಯಾಗಿ ಬಿಚ್ಚಿಡಲಾಗಿದೆ. ಈ ಸಿನಿಮಾ ಒಂದು ಕಥೆ ಎನ್ನುವುದಕ್ಕಿಂತಲೂ ನಮ್ಮ ನಿಜ ಜೀವನದಲ್ಲಿ ನಡೆಯುವ ಒಂದು ಭಾಗ ಎನ್ನುವಂತಿದೆ.

ಇಂತಹ ಅದ್ಭುತ ಸಿನಿಮಾವನ್ನು ಯುವ ಸಮೂಹ ವೀಕ್ಷಿಸಬೇಕು. ಇದಕ್ಕಾಗಿ ಭೀಮ ಚಿತ್ರದ ನಿರ್ಮಾಪಕ, ನಿರ್ದೇಶಕ, ನಟ ವಿಜಯ್ ಕುಮಾರ್ ಮತ್ತು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಸರ್ಕಾರದ ಅನುಮತಿ ಪಡೆದು ಕನಿಷ್ಠ ಒಂದು ದಿನದ ಮಟ್ಟಿಗಾದರೂ ಕಾಲೇಜು ವಿದ್ಯಾರ್ಥಿಗಳಿಗೆ ಈ ಸಿನಿಮಾದ ಉಚಿತ ಪ್ರದರ್ಶನ ಏರ್ಪಡಿಸಬೇಕು. ಸಾಧ್ಯವಾದರೆ ಬೇರೆ ಬೇರೆ ಭಾಷೆಗಳಿಗೂ ಡಬ್ಬಿಂಗ್ ಮಾಡಿ ಇತರೆ ರಾಜ್ಯಗಳಲ್ಲಿಯೂ ಬಿಡುಗಡೆ ಮಾಡಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago