Andolana originals

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್

ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ

ಭೇರ್ಯ: ಭಾರತದ ನಿಜವಾದ ಅಭಿವೃದ್ಧಿ ಗ್ರಾಮಗಳ ಅಭ್ಯುದಯದಲ್ಲಿ ಅಡಗಿದೆ ಎಂಬ ಗಾಂಧೀಜಿ ಅವರ ನಿಲುವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪರಿಶ್ರಮಿಸಿದ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮ ಪಂಚಾಯಿತಿಗೆ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.

೨೦೨೨-೨೩ನೇ ಸಾಲಿನಲ್ಲೂ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಭೇರ್ಯ ಗ್ರಾಮ ಪಂಚಾಯಿತಿ ಆಯ್ಕೆಯಾಗಿತ್ತು. ಬೆಂಗಳೂರಿನಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕಾರವನ್ನು ನೀಡಿ ಗೌರವಿಸಿ, ೫ ಲಕ್ಷ ರೂ. ಅನುದಾನದ ಚೆಕ್ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿತ್ತು.

೨೦೨೪-೨೫ನೇ ಸಾಲಿನಲ್ಲಿ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಮಾಡಲಾಗಿದ್ದು, ಇದರ ಜೊತೆಗೆ ನರೇಗಾ ಯೋಜನೆ ಅನುಷ್ಠಾನದಲ್ಲೂ ಉತ್ತಮ ಸಾಧನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಯಾದ ಅನುದಾನದ ಸಮರ್ಪಕ ಬಳಕೆ, ಸಿಸಿ ಕ್ಯಾಮೆರಾ ಅಳವಡಿಕೆ, ಸೋಲಾರ್ ಆಧಾರಿತ ವಿದ್ಯುತ್ ಬಳಕೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ನರೇಗಾ ಯೋಜನೆಯ ಫಲಾನುಭವಿ ಕುಟುಂಬದ ಎಲ್ಲ ಸದಸ್ಯರಿಗೂ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ಭೇರ್ಯ ಗ್ರಾಮ ಪಂಚಾಯಿತಿ ಸತತ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಇತರೆ ಗ್ರಾಮ ಪಂಚಾಯಿತಿಗಳಿಗೆ ಮಾದರಿಯಾಗಿದೆ.

ಕೆಲವು ಆಡಳಿತ ಮತ್ತು ಆರ್ಥಿಕ ಮಾನದಂಡಗಳ ಆಧಾರದ ಮೇಲೆ ಗ್ರಾಮ ಪಂಚಾಯಿತಿ ಸಾಧಿಸುವ ಶೇ.೯೦ರಿಂದ ಶೇ.೯೫ರಷ್ಟು ಸಾಧನೆಯನ್ನು ಮೌಲ್ಯಮಾಪನ ಮಾಡಿ ಅದಕ್ಕೆ ಸೂಕ್ತ ಪ್ರೋತ್ಸಾಹಧನ ನೀಡುವುದೇ ಗಾಂಧಿ ಗ್ರಾಮ ಪುರಸ್ಕಾರ. ರಾಜ್ಯದಲ್ಲಿ ಉತ್ತಮ ಕಾರ್ಯ ಮಾಡಿರುವ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ, ಉತ್ತೇಜನಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಭೇರ್ಯ ಗ್ರಾಮ ಪಂಚಾಯತಿ ಗ್ರಾಮಸಭೆಯ ನಡಾವಳಿಗಳನ್ನು ಪಂಚತಂತ್ರ ತಂತ್ರಾಂಶಕ್ಕೆ ಅಳವಡಿಸಿರುವುದು ಕೂಡ ಗಾಂಧಿ ಗ್ರಾಮ ಪುರಸ್ಕಾರ ಲಭಿಸಲು ಮುಖ್ಯ ಕಾರಣವಾಗಿದೆ.

” ಭೇರ್ಯ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಸಂತಸತಂದಿದೆ. ಸಿಬ್ಬಂದಿ, ಅಧ್ಯಕ್ಷರಾದಿಯಾಗಿ ಎಲ್ಲಾ ಸದಸ್ಯರ ಸಹಕಾರ ಹಾಗೂ ಹಿರಿಯ ಅಧಿಕಾರಗಳ ಮಾರ್ಗದರ್ಶನದಿಂದ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗಿದೆ. ಮತ್ತಷ್ಟು ಅಭಿವೃದ್ಧಿ ಕಾಮಗಾರಿ ಮಾಡಲು ಈ ಪ್ರಶಸ್ತಿಯು ಪ್ರೇರಣೆ ನೀಡಿದೆ.”

-ಮಮತ, ಪಿಡಿಒ, ಭೇರ್ಯ ಗ್ರಾ.ಪಂ.

” ತಾಲ್ಲೂಕಿನ ಜನಪ್ರತಿನಿಧಿಗಳು, ಗ್ರಾಪಂನ ಎಲ್ಲ ಸದಸ್ಯರೂ ಹಾಗೂ ಎಲ್ಲ ಅಧಿಕಾರಿಗಳ ಸಹಕಾರದಿಂದ ಎರಡನೇ ಬಾರಿಗೆ ಗಾಂಧಿ ಗ್ರಾಮ ಪ್ರಶಸ್ತಿ ಲಭಿಸಿದೆ. ಮುಂದೆಯೂ ಇದೇ ರೀತಿ ಎಲ್ಲ ಸದಸ್ಯರೊಟ್ಟಿಗೆ ಅಧಿಕಾರಿಗಳ ಮಾರ್ಗ ದರ್ಶನದಲ್ಲಿ ಕಾರ್ಯ ನಿರ್ವಹಿಸಿದರೆ ಗ್ರಾಮದ ಜನರಿಗೆ ಸಕಲ ರೀತಿಯ ಅನುಕೂಲಗಳನ್ನೂ ಪಂಚಾಯಿತಿಯಿಂದ ಕಲ್ಪಿಸಿಕೊಡಬಹುದಾಗಿದೆ.”

-ಎ.ಎನ್.ರವಿ, ತಾ.ಪಂ. ಇಒ, ಸಾಲಿಗ್ರಾಮ ತಾ.

 

 

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

3 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

4 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago