Andolana originals

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್

ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ

ಭೇರ್ಯ: ಭಾರತದ ನಿಜವಾದ ಅಭಿವೃದ್ಧಿ ಗ್ರಾಮಗಳ ಅಭ್ಯುದಯದಲ್ಲಿ ಅಡಗಿದೆ ಎಂಬ ಗಾಂಧೀಜಿ ಅವರ ನಿಲುವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪರಿಶ್ರಮಿಸಿದ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮ ಪಂಚಾಯಿತಿಗೆ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.

೨೦೨೨-೨೩ನೇ ಸಾಲಿನಲ್ಲೂ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಭೇರ್ಯ ಗ್ರಾಮ ಪಂಚಾಯಿತಿ ಆಯ್ಕೆಯಾಗಿತ್ತು. ಬೆಂಗಳೂರಿನಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕಾರವನ್ನು ನೀಡಿ ಗೌರವಿಸಿ, ೫ ಲಕ್ಷ ರೂ. ಅನುದಾನದ ಚೆಕ್ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿತ್ತು.

೨೦೨೪-೨೫ನೇ ಸಾಲಿನಲ್ಲಿ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಮಾಡಲಾಗಿದ್ದು, ಇದರ ಜೊತೆಗೆ ನರೇಗಾ ಯೋಜನೆ ಅನುಷ್ಠಾನದಲ್ಲೂ ಉತ್ತಮ ಸಾಧನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಯಾದ ಅನುದಾನದ ಸಮರ್ಪಕ ಬಳಕೆ, ಸಿಸಿ ಕ್ಯಾಮೆರಾ ಅಳವಡಿಕೆ, ಸೋಲಾರ್ ಆಧಾರಿತ ವಿದ್ಯುತ್ ಬಳಕೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ನರೇಗಾ ಯೋಜನೆಯ ಫಲಾನುಭವಿ ಕುಟುಂಬದ ಎಲ್ಲ ಸದಸ್ಯರಿಗೂ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ಭೇರ್ಯ ಗ್ರಾಮ ಪಂಚಾಯಿತಿ ಸತತ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಇತರೆ ಗ್ರಾಮ ಪಂಚಾಯಿತಿಗಳಿಗೆ ಮಾದರಿಯಾಗಿದೆ.

ಕೆಲವು ಆಡಳಿತ ಮತ್ತು ಆರ್ಥಿಕ ಮಾನದಂಡಗಳ ಆಧಾರದ ಮೇಲೆ ಗ್ರಾಮ ಪಂಚಾಯಿತಿ ಸಾಧಿಸುವ ಶೇ.೯೦ರಿಂದ ಶೇ.೯೫ರಷ್ಟು ಸಾಧನೆಯನ್ನು ಮೌಲ್ಯಮಾಪನ ಮಾಡಿ ಅದಕ್ಕೆ ಸೂಕ್ತ ಪ್ರೋತ್ಸಾಹಧನ ನೀಡುವುದೇ ಗಾಂಧಿ ಗ್ರಾಮ ಪುರಸ್ಕಾರ. ರಾಜ್ಯದಲ್ಲಿ ಉತ್ತಮ ಕಾರ್ಯ ಮಾಡಿರುವ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ, ಉತ್ತೇಜನಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಭೇರ್ಯ ಗ್ರಾಮ ಪಂಚಾಯತಿ ಗ್ರಾಮಸಭೆಯ ನಡಾವಳಿಗಳನ್ನು ಪಂಚತಂತ್ರ ತಂತ್ರಾಂಶಕ್ಕೆ ಅಳವಡಿಸಿರುವುದು ಕೂಡ ಗಾಂಧಿ ಗ್ರಾಮ ಪುರಸ್ಕಾರ ಲಭಿಸಲು ಮುಖ್ಯ ಕಾರಣವಾಗಿದೆ.

” ಭೇರ್ಯ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಸಂತಸತಂದಿದೆ. ಸಿಬ್ಬಂದಿ, ಅಧ್ಯಕ್ಷರಾದಿಯಾಗಿ ಎಲ್ಲಾ ಸದಸ್ಯರ ಸಹಕಾರ ಹಾಗೂ ಹಿರಿಯ ಅಧಿಕಾರಗಳ ಮಾರ್ಗದರ್ಶನದಿಂದ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗಿದೆ. ಮತ್ತಷ್ಟು ಅಭಿವೃದ್ಧಿ ಕಾಮಗಾರಿ ಮಾಡಲು ಈ ಪ್ರಶಸ್ತಿಯು ಪ್ರೇರಣೆ ನೀಡಿದೆ.”

-ಮಮತ, ಪಿಡಿಒ, ಭೇರ್ಯ ಗ್ರಾ.ಪಂ.

” ತಾಲ್ಲೂಕಿನ ಜನಪ್ರತಿನಿಧಿಗಳು, ಗ್ರಾಪಂನ ಎಲ್ಲ ಸದಸ್ಯರೂ ಹಾಗೂ ಎಲ್ಲ ಅಧಿಕಾರಿಗಳ ಸಹಕಾರದಿಂದ ಎರಡನೇ ಬಾರಿಗೆ ಗಾಂಧಿ ಗ್ರಾಮ ಪ್ರಶಸ್ತಿ ಲಭಿಸಿದೆ. ಮುಂದೆಯೂ ಇದೇ ರೀತಿ ಎಲ್ಲ ಸದಸ್ಯರೊಟ್ಟಿಗೆ ಅಧಿಕಾರಿಗಳ ಮಾರ್ಗ ದರ್ಶನದಲ್ಲಿ ಕಾರ್ಯ ನಿರ್ವಹಿಸಿದರೆ ಗ್ರಾಮದ ಜನರಿಗೆ ಸಕಲ ರೀತಿಯ ಅನುಕೂಲಗಳನ್ನೂ ಪಂಚಾಯಿತಿಯಿಂದ ಕಲ್ಪಿಸಿಕೊಡಬಹುದಾಗಿದೆ.”

-ಎ.ಎನ್.ರವಿ, ತಾ.ಪಂ. ಇಒ, ಸಾಲಿಗ್ರಾಮ ತಾ.

 

 

 

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

8 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

9 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

10 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

15 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

18 hours ago